ಕನ್ನಡಪ್ರಭ ವಾರ್ತೆ ಹುಕ್ಕೇರಿ
ನಿಪ್ಪಾಣಿ ತಾಲೂಕಿನ ಬೋರಗಾಂವ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿರುವ ಜಿ.ಟಿ. ಟೆಕ್ಸ್ಟೈಲ್ಸ್ (ಜವಳಿ) ಉತ್ಪಾದನಾ ಘಟಕವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಣ್ಣ, ಅತಿ ಸಣ್ಣ ಕೈಗಾರಿಕೆಗಳನ್ನು ಉತ್ತೇಜಿಸಿ ಉದ್ಯೋಗ ಸೃಜಿಸುವ ಗುರಿ ಹೊಂದಿದೆ. ವೃದ್ಧಾಶ್ರಮ, ಸಾಂತ್ವನ ಕೇಂದ್ರ, ಕೋಳಿ ಸಾಕಾಣಿಕೆ ಮತ್ತು ತರಬೇತಿ, ವಾಣಿಜ್ಯ ಸಂಸ್ಥೆ ಸೇರಿದಂತೆ ಹಲವು ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಮೂಲಕ ಯಶಸ್ವಿಯಾಗಿರುವ ಜಿ.ಟಿ. ಸಮೂಹ ಇದೀಗ ತನ್ನ ಕಾರ್ಯಕ್ಷೇತ್ರವನ್ನು ಇದೀಗ ಜವಳಿ ಉದ್ಯಮಕ್ಕೂ ವಿಸ್ತರಿಸಿಕೊಂಡಿದೆ. ಇದರಿಂದ ಅನೇಕ ನಿರುದ್ಯೋಗಿಗಳಿಗೆ ಸ್ಥಳೀಯವಾಗಿಯೇ ಉದ್ಯೋಗಾವಕಾಶ ಕಲ್ಪಿಸಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ರಾಜ್ಯದ ಗಡಿಭಾಗದಲ್ಲಿ ಕನ್ನಡಿಗರು ನೆರೆಯ ಮಹಾರಾಷ್ಟ್ರಕ್ಕೆ ಉದ್ಯೋಗ ಅರಸಿ ಗುಳೆ ಹೋಗುವುದನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಇಂಥ ಘಟಕಗಳಿಗೆ ಉತ್ತೇಜನ ನೀಡುತ್ತಿದೆ. ಅದರಲ್ಲೂ ಎಸ್ಸಿ, ಎಸ್ಟಿ, ಹಿಂದುಳಿದ ವರ್ಗ ಮತ್ತು ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯದ ಉದ್ದಿಮೆದಾರರನ್ನು ಪ್ರೋತ್ಸಾಹಿಸಲು ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳ ಸದುಪಯೋಗ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಕಿವಿಮಾತು ಹೇಳಿದರು.ಜಯಸಿಂಗಪುರ ಬುದ್ಧವಿಹಾರದ ಭಂತೇಜಿ ಯಶಕಶ್ಯಪ್ ಮಹಾಥೇರೊ, ಯರನಾಳ ಗುರುಬ್ರಹ್ಮಾನಂದ ಸ್ವಾಮೀಜಿ, ಯಮಕನಮರಡಿ ಸಿದ್ಧಬಸವ ಸ್ವಾಮೀಜಿ, ಸುಲ್ತಾನಪುರ ವೇದಮೂರ್ತಿ ಶಿವಾನಂದ ಹಿರೇಮಠ ಸಾನಿಧ್ಯ ವಹಿಸಿದ್ದರು.