ಕನ್ನಡಪ್ರಭ ವಾರ್ತೆ ಕಲಬುರಗಿ
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ನಾನಾಗಬೇಕು ಎನ್ನುವ ಪೈಪೋಟಿ ನಡೆಯುತ್ತಿದೆ. ಸರ್ಕಾರದಲ್ಲಿ ಎಲ್ಲವೂ ಕೂಡ ರೇಟ್ ಫಿಕ್ಸಿಂಗ್ ನಡೆಯುತ್ತಿದೆ. ಹಾಗಾಗಿ, ಸಿದ್ದರಾಮಯ್ಯ ಅವರ ಕುರ್ಚಿ ಯಾವಾಗ ಅಲ್ಲಾಡುತ್ತದೋ ಯಾವಾಗ ಅವರಿಗೆ ಅಸ್ಥಿರತೆ ಕಾಡುತ್ತದೋ ಅವಾಗೆಲ್ಲಾ ಅವರು ಸಮಾವೇಶ ಮಾಡಿಕೊಂಡು ಬಂದಿದ್ದಾರೆ. ಈಗ ಮೈಸೂರಿನಲ್ಲೂ ಕಾಂಗ್ರೆಸ್ ಸಮಾವೇಶ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಸಿದ್ದರಾಮಯ್ಯ ಅವರ ಕುರ್ಚಿ ಯಾವಾಗ ಅಲ್ಲಾಡುತ್ತದೋ ಯಾವಾಗ ಅವರಿಗೆ ಅಸ್ಥಿರತೆ ಕಾಡುತ್ತದೋ ಅವಾಗೆಲ್ಲಾ ಅವರು ಸಮಾವೇಶ ಮಾಡಿಕೊಂಡು ಬಂದಿದ್ದಾರೆ, ಸಿದ್ದರಾಮಯ್ಯ ಅಂದ್ರೆ ಸಮಾವೇಶ, ಸಮಾವೇಶ ಅಂದ್ರೆ ಸಿದ್ದರಾಮಯ್ಯ ಆಗಿದೆ. ಅವರು ತಮ್ಮ ರಾಜಕೀಯ ಅಸ್ಥಿತ್ವಕ್ಕಾಗಿ ಅಹಿಂದ ಸಮಾಜವನ್ನು ಮುಂದೆ ಇಟ್ಟುಕೊಂಡು ಹೈಕಮಾಂಡ್ ಗೆ ಬೆದರಿಸುವ ಕುತಂತ್ರ ಮಾಡುತ್ತಿದ್ದಾರೆ. ಕಳೆದ ಎರಡೂವರೆ ವರ್ಷದಲ್ಲಿ ಸಿದ್ದರಾಮಯ್ಯ ಸರ್ಕಾರದ ಸಾಧನೆ ಶೂನ್ಯ ಎಂದು ವಾಗ್ದಾಳಿ ನಡೆಸಿದರು.ಸರ್ಕಾರದ ಸಾಧನೆ ನಿಜವೇ ಆಗಿದ್ದರೆ ರಣದೀಪ್ ಸುರ್ಜೆವಾಲ ಅವರು ಪದೇ ಪದೇ ಶಾಸಕರ ಅಸಮಾಧಾನ ಹೋಗಲಾಡಿಸುವ ಪ್ರಮೇಯ ಇರುತ್ತಿರಲಿಲ್ಲ. ಶಾಸಕರ ಅಸಮಾಧಾನ ಎಷ್ಟಿದೆ ಎಂದು ಅರ್ಥ ಮಾಡಿಕೊಳ್ಳಲು ಮತ್ತು ಸಿಎಂ ಬದಲಾವಣೆ ಆದರೆ ಯಾರನ್ನು ಮಾಡಬೇಕು ಎನ್ನುವ ಬಗ್ಗೆ ಶಾಸಕರ ಮನಸ್ಥಿತಿ ಅರ್ಥ ಮಾಡಿಕೊಳ್ಳಲು ಸುರ್ಜೆವಾಲಾ ಮೇಲಿಂದ ಮೇಲೆ ರಾಜ್ಯಕ್ಕೆ ಬರುತ್ತಿದ್ದಾರೆ ಎಂದರು.
ದಲಿತರಿಗೆ ಸಿಎಂ ಕುರ್ಚಿ ನೀಡಬೇಕು ಎನ್ನುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಹೇಳಿದ್ರೆ ಸಿದ್ದರಾಮಯ್ಯ ಅವರಿಗೆ ಕೋಪ ಬರುತ್ತದೆ. ಜಿ. ಪರಮೇಶ್ವರರಿಗೆ ಅನ್ಯಾಯ ಮಾಡಿದರು. ಈಗಾಗಲೇ ಜಿ.ಪರಮೇಶ್ವರ ಅವರಿಗೆ ಹೇಗೆ ಅನ್ಯಾಯ ಆಗಿದೆ ಅಂತ ಚರ್ಚೆ ಆಗಿದೆ ಎಂದರು.
ಹಿಂದುಳಿದ ನಾಯಕ ಭೈರತಿ ಬಸವರಾಜ ಅವರನ್ನ ರಾಜಕೀಯವಾಗಿ ಮುಗಿಸುವ ಷಡ್ಯಂತ್ರ ನಡೆಯುತ್ತಿದೆ. ಬಸವರಾಜ ಅವರು ತಮ್ಮದೇನು ತಪ್ಪಿಲ್ಲ ಅಂತ ಸ್ಪಷ್ಟಪಡಿಸಿದ್ದಾರೆ, ದೂರು ಕೊಟ್ಟ ಆ ತಾಯಿಯೇ ಭೈರತಿ ಹೆಸರನ್ನೇ ಹೇಳಿಲ್ಲ ಎಂದಿದ್ದಾರೆ.
ಕಲಬುರಗಿ ಸೇರಿ ಮೂರು ಜಿಲ್ಲೆಗಳನ್ನೊಳಗೊಂಡು ಬಿಜೆಪಿ ಸಂಘಟನಾತ್ಮಕ ಸಭೆ ಜೊತೆಗೆ ಮೋದಿ ಸರ್ಕಾರದ 11 ವರ್ಷಗಳ ಸಾಧನೆ ಬಗ್ಗೆಯೂ ಸಂವಾದ ಮಾಡುತ್ತಿದ್ದೇವೆ ಎಂದರು. ಶಾಸಕ ಬಸವರಾಜ ಮತ್ತಿಮಡು, ಮಾಜಿ ಸಚಿವ ಬಾಬುರಾವ್ ಚವ್ಹಣ, ಚಂದು ಪಾಟೀಲ್ ಇದ್ದರು.
ಇದೇ ನೇಪದಲ್ಲಿ ತೆರಿಗೆ ಇಲಾಖೆ ಮೂಲಕ ಬೀದಿ ವ್ಯಾಪಾರಿಗಳಿಗೆ ನೋಟಿಸ್ ಕೊಡ್ತಿದ್ದಾರೆ, ಆ ಮೂಲಕ ಬೀದಿ ವ್ಯಾಪಾರಿಗಳಿಗೆ ಹೆದರಿಸುವ ಕೆಲಸ ರಾಜ್ಯ ಸರ್ಕಾರ ಮಾಡುತ್ತಿದೆ. ದೇಶದ ಯಾವುದೇ ರಾಜ್ಯದಲ್ಲಿ ಈ ರೀತಿಯ ಬೆಳವಣಿಗೆ ಆಗಿಲ್ಲ. ಕರ್ನಾಟಕದಲ್ಲಿ ಮಾತ್ರ ಗ್ಯಾರೆಂಟಿ ಗಳಿಗೆ ಹಣ ಹೊಂದಿಸಲು ಆಗದೆ ಈ ರೀತಿ ಮಾಡುತ್ತಿದ್ದಾರೆ. ಇದನ್ನೆ ನೇಪ ಮಾಡಿಕೊಂಡು ಮುಖ್ಯಮಂತ್ರಿ ಆದೇಶದ ಮೇರೆಗೆ ಸಣ್ಣ ಸಣ್ಣ ವ್ಯಾಪಾರಿಗಳು,ಚ ಬೀದಿ ವ್ಯಾಪಾರಿಗಳನ್ನ ಬೆದರಿಸುವ ಕೆಲಸ ಆಗುತ್ತಿದೆ ಎಂದು ವಿಜಯೇಂದ್ರ ದೂರಿದರು.
50 ಕೋಟಿ ಬಿಡುಗಡೆಯ ಬಗ್ಗೆ ಸಿಎಂ ಏನೋ ಮಾತನಾಡಿದ್ದಾರೆ, ಆದರೆ ಯಾವಾಗ ಬಿಡುಗಡೆ ಆಗುತ್ತೆ ? ಯಾವಾಗ ಶಾಸಕರ ಕೈ ಸೇರುತ್ತೆ ಎನ್ನುವುದು ಯಕ್ಷಪ್ರಶ್ನೆಯಾಗಿದೆ. ಆಡಳಿತ ಪಕ್ಷದ ಶಾಸಕರ ಕಣ್ಣಿಗೆ ಬೆಣ್ಣೆ, ನಮ್ಮ ಪಕ್ಷದ ಶಾಸಕರ ಕಣ್ಣಿಗೆ ಸುಣ್ಣ ಹಚ್ಚೋದು ನಿರಂತರವಾಗಿ ನಡೆಸಿಕೊಂಡು ಬಂದಿದ್ದಾರೆಂದು ತಿವಿದರು.