ಕೊಪ್ಪಳ:
ತೋಟಗಾರಿಕೆ ಇಲಾಖೆ ವತಿಯಿಂದ ನಗರದ ತೋಟಗಾರಿಕೆ ಇಲಾಖೆ ಉಪನಿರ್ದೆಶಕರ ಕಚೇರಿ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿರುವ ಕೊಪ್ಪಳ ಮಾವು ಮೇಳ-2025, ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟಿಸಿ ಮಾತನಾಡಿದರು.
ಮಾವು ಬೆಳೆದ ರೈತರಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕೆಂಬ ಉದ್ದೇಶದಿಂದ ಪ್ರತಿ ವರ್ಷ ಮಾವು ಮೇಳ ಹಮ್ಮಿಕೊಳ್ಳಲಾಗುತ್ತಿದೆ ಎಂದ ಅವರು, ರೈತರಿಗೆ ಹೆಚ್ಚಿನ ಲಾಭ ಸಿಗಲೆಂಬ ಉದ್ದೇಶದಿಂದ ತೋಟಗಾರಿಕೆ ಇಲಾಖೆ ಈ ವ್ಯವಸ್ಥೆ ಕಲ್ಪಿಸಿದೆ. ಈ ವರ್ಷ ಅಧಿಕ ಮಳೆಯಾಗಿದ್ದರಿಂದ ಬೆಲೆಯೂ ಸ್ವಲ್ಪ ಕಡಿಮೆಯಾಗಿದೆ ಎಂದರು.ಈ ಮೇಳದಲ್ಲಿ 1 ಕೆಜಿ ಮಿಯಾಜಾಕಿ ಹಣ್ಣಿನ ಬೆಲೆ ₹ 2. 50 ಲಕ್ಷವಿದ್ದು ಆ ಹಣ್ಣನ್ನು ಪ್ರದರ್ಶನಕ್ಕೆ ಇಟ್ಟಿರುವುದು ಮೇಳದ ಮತ್ತೊಂದು ವಿಶೇಷತೆಯಾಗಿದೆ. ಇಂತಹ ಹಣ್ಣುಗಳನ್ನು ನಮ್ಮ ಭಾಗದಲ್ಲಿ ರೈತರು ಬೆಳೆಯಬೇಕೆಂದು ಕರೆ ನೀಡಿದರು.
ಮೀಯಾ ಜಾಕೀ ಮಾವಿನ ತಳಿಯ ಸಸಿಗಳಿಗೆ ಬಹಳ ಬೇಡಿಕೆಯಿದ್ದು, ಈ ಸಸಿಗಳನ್ನು ಸಹ ಮೇಳದಲ್ಲಿ ಮಾರಾಟಕ್ಕಿಡಲಾಗಿದೆ ಎಂದರು.
ಈ ವೇಳೆ ವಿಪ ಸದಸ್ಯೆ ಹೇಮಲತಾ ನಾಯಕ, ಜಿಲ್ಲಾಧಿಕಾರಿ ನಲಿನ ಅತುಲ್, ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆ, ಎಸ್ಪಿ ಡಾ. ರಾಮ್ ಎಲ್. ಅರಸಿದ್ದಿ, ಮಾಜಿ ಸಂಸದ ಕರಡಿ ಸಂಗಣ್ಣ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜೆ. ಶಂಕ್ರಪ್ಪ ಸೇರಿದಂತೆ ವಿವಿಧ ಇಲಾಖೆಗಳ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.