ಕನ್ನಡಪ್ರಭ ವಾರ್ತೆ ಬಾಗಲಕೋಟೆ
ತೋವಿವಿಯ ವಿಸ್ತರಣಾ ನಿದೇರ್ಶನಾಲಯದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ಪ್ರತಿ ತೋಟಗಾರಿಕೆ ಮೇಳ ರೈತರಲ್ಲಿ ಅಪೇಕ್ಷಿತ ಧನಾತ್ಮಕ ಬದಲಾವಣೆ ತರುವ ಅವಕಾಶ ಒದಗಿಸುತ್ತಿದ್ದು, ಪ್ರತಿ ವರ್ಷ ಒಂದೊಂದು ಧ್ಯೇಯ ವಾಕ್ಯಗಳೊಂದಿಗೆ ತೋಟಗಾರಿಕೆ ಮೇಳ ಆಚರಿಸುತ್ತ ಬರಲಾಗಿದೆ. ಈ ವರ್ಷ ಬರ ಸಂಹಿಷ್ಣುತೆಗಾಗಿ ತೋಟಗಾರಿಕೆ ಎಂಬ ಧ್ಯೇಯ ವಾಕ್ಯದೊಂದಿಗೆ ಜರುಗಿಸುತ್ತಿರುವುದು ವಿಶೇಷವಾಗಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ತೋಟಗಾರಿಕೆ ಮೇಳಕ್ಕೆ ಚಾಲನೆ ನೀಡಲಿದ್ದಾರೆ. ಮೂರು ದಿನಗಳ ಕಾಲ ನಡೆಯುವ ಈ ಮೇಳದಲ್ಲಿ ವಿಶ್ವವಿದ್ಯಾಲಯದ ವ್ಯಾಪ್ತಿಯ 24 ಜಿಲ್ಲೆಗಳಿಂದ ಗುರುತಿಸಲ್ಪಟ್ಟ ಫಲಶ್ರೇಷ್ಠ ಪ್ರಶಸ್ತಿ ನೀಡಿ ಸನ್ಮಾನಿಸಲಾಗುತ್ತಿದೆ. ಮೇಳದಲ್ಲಿ ಪರಸ್ಪರ, ಗುಂಪು ಮತ್ತು ಸಮೂಹ ಎಂಬ ಸಂವಹನದ ಮೂರು ಪ್ರಕಾರ ಉಪಯೋಗಿಸಲಾಗುತ್ತಿದೆ. ಇದರಿಂದ ತಂತ್ರಜ್ಞಾನ ಅಳವಡಿಕೆಗೆ ಪ್ರೋತ್ಸಾಹಿಸಿದಂತಾಗುತ್ತದೆ. ಆದ್ದರಿಂದ ತೋಟಗಾರಿಕೆ ಮೇಳ ತಂತ್ರಜ್ಞಾನ ಪ್ರಸಾರದ ಅತ್ಯಂತ ಪರಿಣಾಮಕಾರಿ ವಿಧಾನವಾಗಿದೆ ಎಂದರು.ಪ್ರತಿ ವರ್ಷ ಒಂದೇ ಸೂರಿನಡಿ ರೈತ ಸಮುದಾಯಕ್ಕೆ ನವೀನ, ಸಮಯೋಜಿಕ ತಂತ್ರಜ್ಞಾನ ವರ್ಗಾವಣೆ ಮಾಡಲು ತೋಟಗಾರಿಕೆ ಮೇಳ ಆಯೋಜಿಸುತ್ತಿದ್ದು, ಮೇಳದ ಯೋಜನೆ ಮೂಲಕ ವಿಶ್ವವಿದ್ಯಾಲಯದ ಮುಖ್ಯ ಉದ್ದೇಶಗಳಲ್ಲೊಂದಾದ ತಂತ್ರಜ್ಞಾನದ ವರ್ಗಾವಣೆ ಯಶಸ್ವಿಯಾಗುತ್ತಿದೆ. ತೋಟಗಾರಿಕೆಯ ತರಕಾರಿ ಬೆಳೆಗಳ, ಹೂವಿನ, ಹಣ್ಣಿನ ವಿವಿಧ ತಳಿಗಳ, ಕೊಯ್ಲೋತ್ತರ ತೋಟಗಾರಿಕಾ ಉತ್ಪನ್ನಗಳ ಪ್ರದರ್ಶನ, ಕ್ಷೇತ್ರ ಭೇಟಿ, ಪ್ರಾತ್ಯಕ್ಷಿಕೆ, ವಿಡಿಯೋ ಮುಂತಾದವುಗಳ ಮೂಲಕ ತಂತ್ರಜ್ಞಾನ ಮಾಹಿತಿ ನೀಡಲಾಗುತ್ತಿದೆ. ಮೇಳದಲ್ಲಿ 200ಕ್ಕೂ ಹೆಚ್ಚು ಮಳಿಗೆ ಹಾಕಲಾಗುತ್ತಿದೆ ಎಂದರು.
ತೋಟಗಾರಿಕೆ ವಿವಿ ವಿಸ್ತರಣಾ ನಿರ್ದೇಶಕ ಹಾಗೂ ತೋಟಗಾರಿಕೆ ಮೇಳದ ಅಧ್ಯಕ್ಷ ಡಾ.ಲಕ್ಷ್ಮೀನಾರಾಯಣ ಹೆಗಡೆ ಮಾತನಾಡಿ, ಈ ಬಾರಿ ಮೇಳದಲ್ಲಿ ನೀರು ಸಂರಕ್ಷಣೆ, ಹನಿ ನೀರಾವರಿ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. 26 ತಳಿಯ ದ್ರಾಕ್ಷಿ ಬೆಳೆಯ ಪ್ರದರ್ಶನ ಮತ್ತು ಮಾರಾಟ ಸಹ ಏರ್ಪಡಿಸಲಾಗುತ್ತಿದೆ. ರೈತರಿಗೆ ಸುಲಭವಾಗಿ ತೋಟಗಾರಿಕೆ ಬೆಳೆಗಳ ಉತ್ಪಾದನೆ ಬಗ್ಗೆ ಮಾಹಿತಿ ಸಿಗುವ ಸಲುವಾಗಿ ಹಾರ್ಟ್ ಆ್ಯಪ್ ಎಂಬ ತಂತ್ರಜ್ಞಾನ ಅಭಿವೃದ್ಧಿಪಡಿಸಿ ಬಿಡುಗಡೆಗೊಳಿಸಲಾಗುತ್ತಿದೆ ಎಂದು ತಿಳಿಸಿದರು.