ಪುತ್ತೂರು ಡಿಸಿಆರ್‌ನಲ್ಲಿ ಮಹಿಳೆಯರಿಗೆ ತೋಟಗಾರಿಕೆ ತರಬೇತಿ ಕಾರ್ಯಕ್ರಮ

KannadaprabhaNewsNetwork |  
Published : Jun 27, 2024, 01:04 AM IST
ಫೋಟೋ: ೨೬ಪಿಟಿಆರ್-ಕ್ಯಾಶ್ಯೂಪುತ್ತೂರಿನ ಡಿಸಿಆರ್‌ನಲ್ಲಿ ಮಹಿಳೆಯರಿಗೆ ಗೇರು ಕೃಷಿ ತರಬೇತಿ ನೀಡಲಾಯಿತು. | Kannada Prabha

ಸಾರಾಂಶ

ಗೇರು ಬೆಳೆಗಾರರ ಆದಾಯವನ್ನು ದ್ವಿಗುಣಗೊಳಿಸುವ, ಗೇರು ಹಣ್ಣಿನ ಮೌಲ್ಯವರ್ಧನೆ ಮತ್ತು ಪೌಷ್ಟಿಕ ತೋಟಗಾರಿಕೆಗೆ ಪ್ರಾಮುಖ್ಯತೆ ನೀಡುವ ನಿಟ್ಟಿನಲ್ಲಿ ಈ ತರಬೇತಿಯನ್ನು ಆಯೋಜಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ಪುತ್ತೂರು

ತಾಲೂಕಿನ ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕದಲ್ಲಿರುವ ಭಾರತೀಯ ಕೃಷಿ ಸಂಶೋಧನೆ- ಗೇರು ಸಂಶೋಧನಾ ನಿರ್ದೇಶನಾಲಯ (ಡಿಸಿಆರ್)ದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ (ಎಸ್‌ಸಿಎಸ್‌ಪಿ)ಯ ಅಡಿಯಲ್ಲಿ ‘ಉದ್ಯಮಶೀಲತೆಯ ಅವಕಾಶಗಳು ಮತ್ತು ಪೌಷ್ಟಿಕ ತೋಟಗಾರಿಕೆ ಕುರಿತು ತರಬೇತಿ ಕಾರ್ಯಕ್ರಮದ ಅಡಿಯಲ್ಲಿ ಮಹಿಳೆಯರಿಗೆ ತರಬೇತಿ ಕಾರ್ಯಕ್ರಮ ಮಂಗಳವಾರ ನಡೆಯಿತು.

ಗೇರು ಉದ್ಯಮಶೀಲತೆಯ ಅವಕಾಶಗಳ ಬಗ್ಗೆ ಅರಿವು ಮೂಡಿಸುವ ಗುರಿ, ವೈಜ್ಞಾನಿಕ ನರ್ಸರಿ ನಿರ್ವಹಣೆಗೆ ಒತ್ತು ಹಾಗೂ ಗೇರು ಬೆಳೆಗಾರರ ಆದಾಯವನ್ನು ದ್ವಿಗುಣಗೊಳಿಸುವ, ಗೇರು ಹಣ್ಣಿನ ಮೌಲ್ಯವರ್ಧನೆ ಮತ್ತು ಪೌಷ್ಟಿಕ ತೋಟಗಾರಿಕೆಗೆ ಪ್ರಾಮುಖ್ಯತೆ ನೀಡುವ ನಿಟ್ಟಿನಲ್ಲಿ ಈ ತರಬೇತಿಯನ್ನು ಆಯೋಜಿಸಲಾಗಿತ್ತು.

ಸಂಸ್ಥೆಯ ಎಸ್‌ಸಿಪಿಎಸ್ ನೋಡಲ್ ಅಧಿಕಾರಿಯಾದ ವಿಜ್ಞಾನಿ ಡಾ. ಮಂಜೇಶ್ ಜಿ.ಎನ್. ಅವರು ಗೇರು ಬೆಳೆಯ ವಾಣಿಜ್ಯ ನರ್ಸರಿ ನಿರ್ವಹಣೆ ಮತ್ತು ಪೌಷ್ಟಿಕ ತೋಟಗಾರಿಕೆಯ ಮಹತ್ವದ ಕುರಿತು ಉಪನ್ಯಾಸ ನೀಡಿದರು. ಗೇರು ಸಂಶೋಧನ ಸಂಸ್ಥೆಯ ನಿರ್ದೇಶಕ ಡಾ.ಜೆ. ದಿನಕರ ಅಡಿಗ ಗೇರು ಬೇಸಾಯದ ಅವಲೋಕನ ಮತ್ತು ಗೇರು ಸಂಶೋಧನೆಯ ಕುರಿತು ಮಾತನಾಡಿದರು.

ಹಣ್ಣಿನ ವಿಜ್ಞಾನದ ವಿಜ್ಞಾನಿ ಡಾ. ವೀಣಾ ಜಿ.ಎಲ್ ಅವರು ಗೇರು ಹಣ್ಣಿನ ಮೌಲ್ಯವರ್ಧನೆಯ ಕುರಿತು ಮಾಹಿತಿ ನೀಡಿ ನಿರ್ದೇಶಾನಲಯದಲ್ಲಿ ಅಭಿವೃದ್ಧಿ ಪಡಿಸಿದ ಉತ್ಪನ್ನಗಳ ಕುರಿತು ಪರಿಚಯಿಸಿದರು. ವಿಜ್ಞಾನಿ ಡಾ. ತೊಂಡೈಮಾನ್ ವಿ. ಅವರು ಕಸಿ ತಂತ್ರಜ್ಞಾನದ ಬಗ್ಗೆ ತಿಳಿಸಿದರು. ತರಬೇತಿಯಲ್ಲಿ ೩೫ ರೈತ ಮಹಿಳೆಯರು ಭಾಗವಹಿಸಿದ್ದರು. ಶಿಬಿರಾರ್ಥಿಗಳಿಗೆ ಗೇರುವಿನಲ್ಲಿ ಸಮಗ್ರ ಕೃಷಿ ಮತ್ತು ಮಿಶ್ರ ಬೇಸಾದ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಯಿತು ಹಾಗೂ ಸುಭಾಷ್ ರೈ ಅವರ ಕೃಷಿ ಕ್ಷೇತ್ರಕ್ಕೆ ಭೇಟಿ ನೀಡಿ ಸಮಗ್ರ ಪರಿಚಯ ಮಾಡಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು