ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಹಾಸನ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ಎಂಟೂ ತಾಲೂಕುಗಳಿಂದ ಗೈಡ್ಸ್ ತಂಡಗಳು ಭಾಗವಹಿಸಿದ್ದು, ಆಲೂರು ತಾಲೂಕಿನ ಮರಸು ಹೊಸಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಗೈಡ್ಸ್ ಮಕ್ಕಳು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕನ್ನಡಪ್ರಭ ವಾರ್ತೆ ಆಲೂರು
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಹಾಸನ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ಎಂಟೂ ತಾಲೂಕುಗಳಿಂದ ಗೈಡ್ಸ್ ತಂಡಗಳು ಭಾಗವಹಿಸಿದ್ದು, ಆಲೂರು ತಾಲೂಕಿನ ಮರಸು ಹೊಸಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಗೈಡ್ಸ್ ಮಕ್ಕಳು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲ ಪ್ರಕಾಶ್ ಬಿ.ಎಚ್, ತಾಲೂಕು ಕಾರ್ಯದರ್ಶಿ ಕೊಟ್ರೇಶ್ ಎಸ್.ಉಪ್ಪಾರ್, ಗೈಡ್ ನಾಯಕಿ ಎಸ್. ಎಸ್. ಸುನೀತಾ, ಲೇಡಿ ಸ್ಕೌಟ್ ಮಾಸ್ಟರ್ ಕಾವ್ಯ, ವಿಜೇತ ಮಕ್ಕಳಾದ ಕೃತಿಕ, ಭೂಮಿಕಾ, ಸ್ಪಂದನ, ವರ್ಷಿಣಿ, ರಕ್ಷಾ, ಚರಿತಶ್ರೀ, ಕುಮುದ ಹಾಗೂ ಚಿನ್ಮಯಿ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.