ಹಳೆಬೀಡು ಸೊಸೈಟಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಹೊಸಕೋಟೆ ಅರವಿಂದ್ ಅವಿರೋಧ ಆಯ್ಕೆ

KannadaprabhaNewsNetwork |  
Published : Aug 08, 2026, 02:00 AM IST
7ಕೆಎಂಎನ್ ಡಿ14 | Kannada Prabha

ಸಾರಾಂಶ

ಹೊಸಕೋಟೆ ಅರವಿಂದ್ ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆಯೇ ಹೊರಗಡೆ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿಹಂಚಿ ಸಂಭ್ರಮಿಸಿದರು. ಎಲ್ಲಾ ನಿರ್ದೇಶಕರು, ಮುಖಂಡರು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.

ಪಾಂಡವಪುರ: ತಾಲೂಕಿನ ಹಳೇಬೀಡು ಪ್ರಾಥಮಿಕ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಹೊಸಕೋಟೆ ಅರವಿಂದ್ ಅವಿರೋಧವಾಗಿ ಆಯ್ಕೆಯಾದರು.

ಹಿಂದಿನ ಅಧ್ಯಕ್ಷ ಲಿಂಗರಾಜು ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆದು ಅರವಿಂದ್ ಹೊರತುಪಡಿಸಿ ಉಳಿದ ಯಾವೊಬ್ಬ ನಿರ್ದೇಶಕರು ನಾಮಪತ್ರ ಸಲ್ಲಿಸದ ಹಿನ್ನೆಲೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಆನಂದ ನಾಯ್ಕ ಘೋಷಿಸಿದರು.

ಹೊಸಕೋಟೆ ಅರವಿಂದ್ ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆಯೇ ಹೊರಗಡೆ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿಹಂಚಿ ಸಂಭ್ರಮಿಸಿದರು. ಎಲ್ಲಾ ನಿರ್ದೇಶಕರು, ಮುಖಂಡರು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.

ನಂತರ ಅರವಿಂದ್ ಮಾತನಾಡಿ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರ ಆಶೀರ್ವಾದ ಹಾಗೂ ಸಂಘದ ಎಲ್ಲಾ ನಿರ್ದೇಶಕರು, ಮುಖಂಡರ ಸಹಕಾರದಿಂದ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ. ಮುಂದಿನ ದಿನಗಳಲ್ಲಿ ನಮ್ಮ ನಾಯಕರು ಹಾಗೂ ಎಲ್ಲಾ ನಿರ್ದೇಶಕರ ಸಹಕಾರ ಪಡೆದು ಸಂಘದ ಮೂಲಕ ರೈತರಿಗೆ ರಸಗೊಬ್ಬರ, ಸಾಲ ಸೌಲಭ್ಯಗಳನ್ನು ಒದಗಿಸಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಈ ವೇಳೆ ಉಪಾಧ್ಯಕ್ಷ ಗುರುಮೂರ್ತಿ, ನಿರ್ದೇಶಕರಾದ ಎಚ್.ಡಿ.ಪುಟ್ಟಸ್ವಾಮೀಗೌಡ(ಪುಟ್ಟಣ್ಣ), ಎಚ್.ಕೆ.ಕುಳ್ಳೇಗೌಡ, ರಮೇಶ್, ಪುಟ್ಟರಾಮಯ್ಯ, ನಾಗಮ್ಮ, ಪುಟ್ಟಲಕ್ಷ್ಮಮ್ಮ, ಮುಖಂಡರಾದ ಗ್ರಾಪಂ ಮಾಜಿ ಅಧ್ಯಕ್ಷರಾದ ಧನಂಜಯ, ಎಚ್.ಸಿ.ಚನ್ನೇಗೌಡ, ಪುಟ್ಟೇಗೌಡ, ಧರ್ಮೇಶ್, ಎಚ್.ಸಿ.ಜವರಯ್ಯ, ಪುಟ್ಟಸ್ವಾಮೀಗೌಡ, ಯೋಗೇಶ್, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಲುವೇಗೌಡ(ಬಕೋಡಿ), ವಿ.ಎಸ್.ಎಸ್.ಎನ್.ಬಿ.ಮಾಜಿ ಅಧ್ಯಕ್ಷ ಜೆ.ಶಿವಶಂಕರ್, ಶ್ರೇಯಸ್, ಕಾರ್ಯದರ್ಶಿ ಭವಾನಿ, ಎಚ್.ಟಿ.ನಾಗೇಶ್, ರವಿಕುಮಾರ್, ಸೇರಿದಂತೆ ಹಳೇಬೀಡು ಗ್ರಾಪಂ ವ್ಯಾಪ್ತಿಯ ಗ್ರಾಮಗಳ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯ ಸಚಿವರಿಂದ ಬರ ಪರಿಸ್ಥಿತಿ ಅವಲೋಕನ
ಮಕ್ಕಳ ಸಹಾಯವಾಣಿ ಸಿಬ್ಬಂದಿಗಿಲ್ಲ 10 ತಿಂಗಳಿಂದ ವೇತನ