ಹೊಸಪೇಟೆ-ಅರಸಿಕೆರೆ ಡೆಮೋ ರೈಲಿಗೆ ಚಾಲನೆ

KannadaprabhaNewsNetwork |  
Published : Aug 29, 2026, 01:30 AM IST
28ಎಚ್‌ಪಿಟಿ2ಹೊಸಪೇಟೆ-ಅರಸಿಕೆರೆ ನಡುವೆ ಸಂಚರಿಸಲಿರುವ ನೂತನ ಡೆಮೋ ರೈಲಿಗೆ ಶುಕ್ರವಾರ ಬೆಳಗ್ಗೆ ಹೊಸಪೇಟೆ ರೈಲ್ವೆ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು. | Kannada Prabha

ಸಾರಾಂಶ

ಹೊಸಪೇಟೆ-ಅರಸಿಕೆರೆ ನಡುವೆ ಸಂಚರಿಸಲಿರುವ ನೂತನ ಡೆಮೋ ರೈಲಿಗೆ ಶುಕ್ರವಾರ ಬೆಳಗ್ಗೆ ಹೊಸಪೇಟೆ ರೈಲ್ವೆ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು. ವಿಜಯನಗರ ಜಿಲ್ಲೆ ರೈಲ್ವೆ ಬಳಕೆದಾರರ ಸಂಘದ ಪದಾಧಿಕಾರಿಗಳು ರೈಲಿನ ಎಂಜಿನ್‌ಗೆ ಪೂಜೆ ಸಲ್ಲಿಸಿ, ಸಿಹಿ ವಿನಿಯಮ ಮಾಡಿಕೊಂಡು ಸಂಭ್ರಮಿಸಿದರು.

ಹೊಸಪೇಟೆ: ಹೊಸಪೇಟೆ-ಅರಸಿಕೆರೆ ನಡುವೆ ಸಂಚರಿಸಲಿರುವ ನೂತನ ಡೆಮೋ ರೈಲಿಗೆ ಶುಕ್ರವಾರ ಬೆಳಗ್ಗೆ ಹೊಸಪೇಟೆ ರೈಲ್ವೆ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು. ವಿಜಯನಗರ ಜಿಲ್ಲೆ ರೈಲ್ವೆ ಬಳಕೆದಾರರ ಸಂಘದ ಪದಾಧಿಕಾರಿಗಳು ರೈಲಿನ ಎಂಜಿನ್‌ಗೆ ಪೂಜೆ ಸಲ್ಲಿಸಿ, ಸಿಹಿ ವಿನಿಯಮ ಮಾಡಿಕೊಂಡು ಸಂಭ್ರಮಿಸಿದರು. ಈ ರೈಲು ಮಧ್ಯ ಕರ್ನಾಟಕದ ಐದು ಜಿಲ್ಲೆಗಳಾದ ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳ ನಡುವೆ ಸಂಪರ್ಕ ಕಲ್ಪಿಸಲಿದ್ದು, ಒಟ್ಟು 29 ಸ್ಥಳಗಳಲ್ಲಿ ನಿಲುಗಡೆ ಸೌಲಭ್ಯವಿದೆ.

ಬೆಳಗ್ಗೆ 6.30ಕ್ಕೆ ಹೊಸಪೇಟೆಯಿಂದ ಹೊರಟು ಮಧ್ಯಾಹ್ನ 2.30ಕ್ಕೆ ಅರಸಿಕೆರೆ ತಲುಪಲಿದೆ. ಅದೇ ಮಾರ್ಗವಾಗಿ ನಿರ್ಗಮಿಸುವ ರೈಲಿನ ವೇಳಾಪಟ್ಟಿಯನ್ನು ವಿದ್ಯಾರ್ಥಿಗಳಿಗೆ ವ್ಯಾಪಾರಸ್ಥರಿಗೆ ಆಸ್ಪತ್ರೆಗೆ ತೆರಳುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ರೂಪಿಸಲಾಗಿದೆ.

ಅರಸಿಕೆರೆ ರಾಜ್ಯದ ಪ್ರಮುಖ ಜಂಕ್ಷನ್ ಆಗಿದ್ದು, ಅಲ್ಲಿಂದ ಬೆಂಗಳೂರು-ಮೈಸೂರು-ಹಾಸನ-ಬಂದರು ನಗರ ಮಂಗಳೂರಿಗೆ ನೇರ ಸಂಪರ್ಕ ದೊರೆಯಲಿದೆ. ವಿಶೇಷವಾಗಿ ಮಲೆನಾಡು ಮತ್ತು ಕರ್ನಾಟಕದ ವಿಜಯನಗರ ಜಿಲ್ಲೆಗಳ ನಡುವೆ ಸಂಪರ್ಕ ಕಲ್ಪಿಸುವುದರಿಂದ ರೈಲು ಆರಂಭದಿಂದ ಈ ಭಾಗದಲ್ಲಿ ಪ್ರವಾಸೋಧ್ಯಮ, ವಾಣಿಜ್ಯ ಹಾಗೂ ಆರ್ಥಿಕ ಚಟುವಟಿಕೆಗೆ ಉತ್ತೇಜನ ದೊರೆಯುವುದೆಂದು ನಿರೀಕ್ಷಿಸಲಾಗಿದೆ.

ಆರಂಭ ದಿನದಂದೆ ಮರಿಯಮ್ಮನಹಳ್ಳಿ, ಹಂಪಾಪಟ್ಟಣ, ಹಗರಿಬೊಮ್ಮನಹಳ್ಳಿ, ಕೊಟ್ಟೂರಿನಲ್ಲಿ ನೂರಾರು ಜನರು ರೈಲನ್ನು ಸಂಭ್ರಮದಿಂದ ಸ್ವಾಗತಿಸಿ ಪೂಜೆ ಸಲ್ಲಿಸಿ ಹರ್ಷ ವ್ಯಕ್ತಪಡಿಸಿದರು. ವಿಶೇಷ ರೈಲಾಗಿ ವಾರದಲ್ಲಿ ಸೋಮವಾರದಿಂದ ಶುಕ್ರವಾರದ ವರೆಗೆ (5 ದಿನ) ಸಂಚರಿಸುವ ರೈಲನ್ನು ಖಾಯಂಗೊಳಿಸಿ, ಮೈಸೂರು ಇಲ್ಲವೇ ಮಂಗಳೂರಿಗೆ ವಿಸ್ತರಿಸುವಂತೆ ವಿಜಯನಗರ ರೈಲ್ವೆ ಬಳಕೆದಾರರ ಸಂಘದ ಅಧ್ಯಕ್ಷ ವೈ. ಯಮುನೇಶ್ ಹಾಗೂ ಕಾರ್ಯದರ್ಶಿ ಮಹೇಶ್ ಕುಡುತಿನಿ ಒತ್ತಾಯಿಸಿದ್ದಾರೆ.

ಸ್ಥಳೀಯ ಮುಖಂಡರಾದ ಯು. ಆಂಜನೇಯಲು, ದೀಪಕ್‌ ಹುಳ್ಳಿ, ಕಲ್ಲೇಶ್, ನಜೀರ್‌ ಸಾಹೇಬ್, ತಿಪ್ಪೇಸ್ವಾಮಿ, ದೇವರೆಡ್ಡಿ, ವರುಣ್, ರಾಮಾಲಿ, ಅರವಿಂದ ಜಾಲಿ, ಟೈಲರ್ ಬಸವರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.ಹೊಸಪೇಟೆ-ಅರಸಿಕೇರೆ ಡೆಮೊ ರೈಲಿಗೆ ಅದ್ಧೂರಿ ಸ್ವಾಗತ

ಕೊಟ್ಟೂರು: ವಾರದಲ್ಲಿ 5 ದಿನಗಳ ಕಾಲ ಸಂಚರಿಸುವ ಹೊಸಪೇಟೆ-ಅರಸಿಕೇರೆ ಡೆಮೊ ರೈಲು ಸಂಚಾರ ಇಂದಿನಿಂದ ಆರಂಭಗೊಳ್ಳುತ್ತಿದ್ದಂತೆ ಈ ಭಾಗದ ಪ್ರಯಾಣಿಕರು ಪುಳಕಿತರಾಗಿ ಸಂಭ್ರಮದಿಂದ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಬೆಳಗ್ಗೆ ಸಡಗರದೊಂದಿಗೆ ಸ್ವಾಗತಿಸಿ ಹರ್ಷ ವ್ಯಕ್ತಪಡಿಸಿದರು. ಹೊಸಪೇಟೆಯಿಂದ ಶುಕ್ರವಾರ ಬೆಳಗ್ಗೆ 6.30ಕ್ಕೆ ಸಂಚಾರ ಆರಂಭಗೊಳ್ಳುತ್ತಿದ್ದಂತೆ ರೈಲ್ವೆ ಮಾರ್ಗದುದ್ದಕ್ಕೂ ಬರುವ ನಿಲ್ದಾಣಗಳಲ್ಲಿ ಜನತೆ ಹಾಜರಿದ್ದು ಪೂಜೆ ಸಲ್ಲಿಸಿ ಹರ್ಷೋದ್ಘಾರ ವ್ಯಕ್ತಪಡಿಸಿದರು. ರೈಲು ಸಂಚಾರಕ್ಕೆ ಕಾರಣರಾದ ಜನಪ್ರತಿನಿಧಿಗಳು ಮತ್ತಿತರ ಪರ ಜಯಘೋಷಗಳನ್ನು ಕೂಗಿ ಸಂಭ್ರಮಿಸಿದರು. ಪಟ್ಟಣದ ಹಿರಿಯ ನಾಯಕ ಎಸ್. ತಿಂದಪ್ಪ ನೆರೆದಿದ್ದವರಿಗೆ ಸಿಹಿ ಹಂಚಿದರು. ಚಾನುಕೋಟಿ ಮಠಾಧ್ಯಕ್ಷ ಡಾ. ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ವಿವಿಧ ಪಕ್ಷಗಳ ಮುಖಂಡರಾದ ಪಿ. ಭರಮನಗೌಡ, ಅಡಿಕಿ ಮಂಜುನಾಥ, ರಮೇಶ ವಕೀಲ, ನಾಗರಿಕ ಹೋರಾಟ ಸಮಿತಿಯ ಪಿ. ಶ್ರೀಧರ ಶೆಟ್ಟಿ, ಎಸ್.ಡಿ. ಈರಗಾರ ಮತ್ತಿತರರು ಇದ್ದರು. ನಂತರ ರೈಲನ್ನು ಮುಂದಿನ ಸಂಚಾರಕ್ಕೆ ಬೀಳ್ಕೊಟ್ಟರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯ ಸರ್ಕಾರ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲಿದೆ: ಭೀಮಣ್ಣ ನಾಯ್ಕ
ಚಿಂತಕರ ವಿಚಾರಧಾರೆ ಇಂದಿಗೂ ಪ್ರಸ್ತುತ: ಉಮೇಶ