ಸೂಲಿಬೆಲೆ: ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಗೆ ಯಾವುದೇ ಸಮಸ್ಯೆ ಇಲ್ಲದೆ ರಾಜ್ಯ ಕಾಂಗ್ರೆಸ್ ಸರ್ಕಾರ ಅನುದಾನ ನೀಡುತ್ತಿದೆ. ಕ್ಷೇತ್ರ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು
ಸೂಲಿಬೆಲೆ: ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಗೆ ಯಾವುದೇ ಸಮಸ್ಯೆ ಇಲ್ಲದೆ ರಾಜ್ಯ ಕಾಂಗ್ರೆಸ್ ಸರ್ಕಾರ ಅನುದಾನ ನೀಡುತ್ತಿದೆ. ಕ್ಷೇತ್ರ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.
ಹೋಬಳಿಯ ಗಿಡ್ಡಪ್ಪನಹಳ್ಳಿ ಗ್ರಾಪಂ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ೨ ಕೋಟಿ ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಅಂಕೋನಹಳ್ಳಿ, ನಲ್ಲಗಾನಹಳ್ಳಿ, ಅರಸನಹಳ್ಳಿ, ಬೆಟ್ಟಹಳ್ಳಿ, ಗಿಡ್ಡಪ್ಪನಹಳ್ಳಿ, ವಳಗೆರೆಪುರ, ಸಾದಪ್ಪನಹಳ್ಳಿ, ಅತ್ತಿಬೆಲೆ, ಹಸಿಗಾಳ, ಸೊಣ್ಣಹಳ್ಳಿಪುರ, ತಿಮ್ಮಸಂದ್ರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿದ್ದು, ಕಾಮಗಾರಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಗುತ್ತಿಗೆದಾರರಿಗೆ ತಾಕೀತು ಮಾಡಿದರು.
ಈ ವೇಳೆ ರಾಜ್ಯ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕ ಬಿ.ಎನ್.ಗೋಪಾಲಗೌಡ, ಬಮೂಲ್ ನಿರ್ದೇಶಕ ಬಿ.ವಿ.ಸತೀಶಗೌಡ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಬಿ.ವೆಂಕಟೇಶ್, ಯುವ ಮುಖಂಡ ನಾರಾಯಣಗೌಡ, ಗ್ರಾಪಂ ಮಾಜಿ ಆಧ್ಯಕ್ಷ ಅಕ್ಬರ್ ಅಲಿಖಾನ್, ಸಹಕಾರ ಬ್ಯಾಂಕ್ ನಿರ್ದೇಶಕ ಸುರೇಶ್, ಗ್ರಾಪಂ ಮಾಜಿ ಉಪಾಧ್ಯಕ್ಷ ಅತ್ತಿಬೆಲೆ ನಾಗೇಶ್, ಸದಸ್ಯ ಬಸವರಾಜ್, ಅರಸನಹಳ್ಳಿ ಶಿವಣ್ಣ, ಜಿಲ್ಲಾ ಮಹಿಳಾ ಕಾಂಗ್ರೇಸ್ ಸದಸ್ಯೆ ಡಿ.ಸಿ.ಲಕ್ಷ್ಮಿ ಇತರರು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.