ಕನ್ನಡಪ್ರಭ ವಾರ್ತೆ ಹೊಸಪೇಟೆ
ಕೇಂದ್ರ ಸರ್ಕಾರದ 16ನೇ ಹಣಕಾಸು ಯೋಜನೆ ಅಡಿಯಲ್ಲಿ ರಾಜ್ಯದಿಂದ ₹23.55 ಕೋಟಿ ಅನುದಾನ ಹಂಚಿಕೆಯಾಗಿದೆ. ಇದಕ್ಕೆ ಕ್ರಿಯಾ ಯೋಜನೆ ತಯಾರಿಸಿ ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ಕಾಮಗಾರಿ ಕೈಗೊಳ್ಳಲಾಗುತ್ತದೆ. 15ನೇ ಹಣಕಾಸು ಯೋಜನೆಯ ಎನ್ಎಂಪಿಸಿ ಅಡಿಯಲ್ಲಿ ರಾಜ್ಯದಿಂದ ₹18.12 ಕೋಟಿ ಅನುದಾನ ಹಂಚಿಕೆಯಾಗಿದೆ. ರಾಜ್ಯ ಹಣಕಾಸು ಆಯೋಗದಿಂದ ₹56 ಲಕ್ಷ ಮುಕ್ತನಿಧಿ ಅನುದಾನ ಹಂಚಿಕೆಯಾಗಿದ್ದು, ವಿವಿಧ ವಾರ್ಡ್ಗಳಲ್ಲಿ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾ ಯೋಜನೆ ತಯಾರಿಸಲಾಗಿದೆ. ನಗರದ 6ನೇ ವಾರ್ಡಿನಲ್ಲಿ ಅಧುನಿಕ ಅನಿಲ, ವಿದ್ಯುತ್ ಚಿತಗಾರ ನಿರ್ಮಾಣಕ್ಕೆ ₹4 ಕೋಟಿ ಅನುದಾನ ಮಂಜೂರಾಗಿದೆ. ನೌಕರರ ವೇತನ ಪಾವತಿಗೆ ₹13.98 ಕೋಟಿ, ಬೀದಿದೀಪ ವಿದ್ಯುತ್ ಬಿಲ್ ಪಾವತಿಗೆ ₹5.74 ಕೋಟಿ, ನೀರು ಸರಬರಾಜು ಸ್ಥಾವರಗಳ ವಿದ್ಯುತ್ ಬಿಲ್ಗಾಗಿ ₹8.7 ಕೋಟಿ ರಾಜ್ಯ ಸರ್ಕಾರದಿಂದ ಎಸ್ಎಫ್ಸಿ ಅಡಿಯಲ್ಲಿ ಅನುದಾನ ಹಂಚಿಕೆಯಾಗಿದೆ ಎಂದು ಅವರು ವಿವರಿಸಿದರು.
ಪೌರಕಾರ್ಮಿಕರ ಆರೋಗ್ಯ-ವಿಶ್ರಾಂತಿಗಾಗಿ ನಗರಸಭೆ ಹತ್ತಿರ ವಿಶ್ರಾಂತಿ ಗೃಹ ನಿರ್ಮಾಣವಾಗುತ್ತಿದೆ. ಶಾಸಕರ ನೇೃತೃತ್ವದಲ್ಲಿ ಎಸ್ಎಫ್ಸಿ ವಿಶೇಷ ಅನುದಾನ 10 ಕೋಟಿ ಕಾಮಗಾರಿಗಳು ಮಂಜೂರಾಗಿವೆ. 2.70 ಕೋಟಿ ನಗರಸಭೆಗೆ ಅನುದಾನ ಬಿಡುಗಡೆಯಾಗಿದೆ. ನಗರದ 4 ಇಂದಿರಾ ಕ್ಯಾಂಟೀನ್ ಗಳಿಗೆ ಆಹಾರ ಪೂರೈಕೆಗೆ 20 ಲಕ್ಷ ಸಹಾಯಧನ ನೀಡಲಾಗುತ್ತಿದೆ ಎಂದರು.ವ್ಯಾಪಾರ ಪರವಾನಗಿ ಶುಲ್ಕ ₹80 ಲಕ್ಷ, ವಾಣಿಜ್ಯ ಮಳಿಗೆಗಳ ಬಾಡಿಗೆ ₹75 ಲಕ್ಷ, ನೀರು ಸರಬರಾಜು ಶುಲ್ಕ ₹1.80 ಕೋಟಿ ವಾರ್ಷಿಕ ಆದಾಯ ಅಂದಾಜಿಲಾಗಿತ್ತು. ಡಿಸೆಂಬರ್ ಅಂತ್ಯಕ್ಕೆ ವ್ಯಾಪಾರ ಶುಲ್ಕಗಳು ₹36.54 ಲಕ್ಷ, ಮಳಿಗೆಗಳಿಂದ ಬಾಡಿಗೆ ₹22.45 ಲಕ್ಷ ಸಂಗ್ರಹವಾಗಿದೆ. ನೀರು ಸರಬರಾಜು ಶುಲ್ಕ ₹59.04 ಲಕ್ಷ ಮಾತ್ರ ಸಂಗ್ರಹವಾಗಿದೆ ಎಂದು ಅವರು ಹೇಳಿದರು.
ಬಾಕ್ಸ್:
ಇದಕ್ಕೆ ರಾಘವೇಂದ್ರ, ತಾರಿಹಳ್ಳಿ ಜಂಬುನಾಥ ದನಿಗೂಡಿಸಿ ಪ್ರಶ್ನಿಸಿದರು. ಸಭೆಯಲ್ಲಿ ಸ್ವಲ್ಪಮಟ್ಟಿಗೆ ಮಾತಿನ ಗದ್ದಲ ಉಂಟಾಗಿ ಕೊನೆಗೆ ರಸ್ತೆ ದುರಸ್ತಿಗೆ ಮೀಸಲಿಟ್ಟ ಅನುದಾನದಲ್ಲೇ ₹44 ಲಕ್ಷವನ್ನು ಮದಕರಿ ನಾಯಕ ವೃತ್ತದ ಅಭಿವೃದ್ದಿಗೆ ತೆಗೆದಿರಿಸಲು ಅಧ್ಯಕ್ಷರು ಒಪ್ಪಿಗೆ ಸೂಚಿಸಿದರು.