ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಸ್ಪತ್ರೆ ಬಹಳ ಪ್ರಗತಿ ಸಾಧಿಸುತ್ತಿದೆ. ಗರ್ಭಿಣಿಯರಿಗೆ ಹೆರಿಗೆ ವಿಚಾರದಲ್ಲಿ ವೈದ್ಯರು ಗಮನಾರ್ಹ ಸಾಧನೆ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಳೆದ ಒಂದು ವರ್ಷ 200ಕ್ಕೂ ಹೆಚ್ಚು ಮಹಿಳೆಯರಿಗೆ ಹೆರಿಗೆ ಮಾಡಿಸಿರುವ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ಡಾ.ಅರ್ಜುನ್ ಕುಮಾರ್ರವರ ಸೇವೆಗೆ ಪ್ರಶಂಸಿಸಿ, ಸರಕಾರಿ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ನೀಡಲಾಗುತ್ತದೆ ಎನ್ನುವ ಭರವಸೆಯನ್ನು ವೈದ್ಯರು ನೀಡುತ್ತಿದ್ದಾರೆ. ಆಸ್ಪತ್ರೆಯು ಸಾಕಷ್ಟು ಸುಧಾರಣೆ ಕಂಡಿದೆ ಎಂದರು.ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೊದಲ ಬಾರಿಗೆ ಹೆರಿಗೆ ಮಾಡಿಸಲು ಶಸ್ತ್ರ ಚಿಕಿತ್ಸಾ ಸೌಲಭ್ಯ ಕಲ್ಪಿಸಿದ್ದರ ಪ್ರತಿಫಲದಿಂದ ಈಗಾಗಲೇ 50ಕ್ಕೂ ಹೆಚ್ಚು ಗರ್ಭಿಣಿ ಮಹಿಳೆಯರಿಗೆ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿದೆ. ಈ ಸೌಲಭ್ಯದಿಂದ ಸ್ಥಳೀಯರು ಮಂಡ್ಯಕ್ಕೆ ಅಲೆಯುವುದು ತಪ್ಪಿದಂತಾಗಿದೆ ಎಂದು ಹೇಳಿದರು.
ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಆಡಳಿತ ವೈದ್ಯಾಧಿಕಾರಿಗಳು ಎಚ್ಚರ ವಹಿಸಬೇಕು. ಆಸ್ಪತ್ರೆಯಲ್ಲಿ ಸೌಲಭ್ಯದ ಕೊರತೆ ಕಂಡು ಬಂದ ಕೂಡಲೇ ತನ್ನ ಗಮನಕ್ಕೆ ತರಬೇಕು ಎಂದು ತಾಕೀತು ಮಾಡಿದರು.
ಆಸ್ಪತ್ರೆಗೆ ಬರುವಂತಹ ರೋಗಿಗಳಿಗೆ ಹಾಗೂ ಸಾರ್ವಜನಿಕರಿಗೆ ಶುದ್ಧವಾದ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಬೇಕು. ಗ್ರಾಮೀಣ ಭಾಗದ ಮಹಿಳೆಯರು ಹೆಚ್ಚಾಗಿ ಆಸ್ಪತ್ರೆಗೆ ಬರುವ ಹಿನ್ನೆಲೆಯಲ್ಲಿ ಅವರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಸೂಚನೆ ನೀಡಿದರು.
ಆಸ್ಪತ್ರೆಗೆ ಬರುವವರಿಗೆ ಸುಸಜ್ಜಿತ ಪ್ರತ್ಯೇಕ ಶೌಚಾಲಯ ಇಲ್ಲದೇ ಪರಿತಪ್ಪಿಸುತ್ತಿದ್ದಾರೆ. ತಕ್ಷಣ ಮಹಿಳೆಯರಿಗೆ ಪ್ರತ್ಯೇಕ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಸುಲಭ್ ಶೌಚಾಲಯವನ್ನು ನೂತನವಾಗಿ ನಿರ್ಮಾಣ ಮಾಡಿ ಉತ್ತಮ ಶೌಚಾಲಯ ಸೇವೆ ಸಾರ್ವಜನಿಕರಿಗೆ ದೊರೆಯುವಂತೆ ಮಾಡಲಾಗುವುದು ಎಂದು ಹೇಳಿದರು.