
ಹರಿಹರ: ನಗರದ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರಕ್ಕೆ (ಜಿಟಿಟಿಸಿ) ಆದ್ಯತೆ ಮೇರೆಗೆ ಹಾಸ್ಟೆಲ್ ಸೌಲಭ್ಯ ಒದಗಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಶರಣ ಪ್ರಕಾಶ್ ಪಾಟೀಲ್ ಭರವಸೆ ನೀಡಿದರು.
ನಾಲ್ಕು ವಿಭಾಗಗಳ ವಿದ್ಯಾರ್ಥಿಗಳ ತರಬೇತಿಗೆ ಅನುಕೂಲವಾಗುವಂತೆ ೬ ತರಗತಿಗಳ ನಿರ್ಮಾಣ, ಕೆಎಸ್ಎಸ್ಐಡಿಸಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಕೇಂದ್ರಕ್ಕೆ ಸೇರಿದ ಸುಮಾರು ಅರ್ಧ ಎಕರೆ ನಿವೇಶನವಿದ್ದು, ಅಲ್ಲಿ ಅಲ್ಪಾವಧಿಯ ತರಬೇತಿಗೆ ಕಟ್ಟಡ ಬೇಕಾಗಿದೆ. ಖಾಲಿ ಇರುವ ಹುದ್ದೆಗಳಿಗೆ ಸಿಬ್ಬಂದಿಗಳ ನೇಮಕವಾಗಬೇಕಾಗಿದೆ ಎಂದು ಸಚಿವರ ಗಮನ ಸೆಳೆದರು.
ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಶಿವಕುಮಾರ್ ಮಲ್ಲಾಡದ, ಸಿಡಾಕ್ ಜಂಟಿ ನಿರ್ದೇಶಕ ಆರ್.ಪಿ.ಪಾಟೀಲ್, ಅಧ್ಯಾಪಕರದಾದ ಶಿವಕುಮಾರ್, ಗಣೇಶ್ ಹಾಗೂ ಸಿಬ್ಬಂದಿ ಇದ್ದರು.- - -
-22HRR03:ಹರಿಹರದ ಜಿಟಿಟಿಸಿ ಕೇಂದ್ರಕ್ಕೆ ಮಂಗಳವಾರ ಭೇಟಿ ನೀಡಿದ್ದ ಸಚಿವ ಶರಣ ಪ್ರಕಾಶ್ ಪಾಟೀಲ್ ವಿದ್ಯಾರ್ಥಿಗಳು ಸಿದ್ಧಗೊಳಿಸಿದ ಪ್ರಾಜೆಕ್ಟ್ಗಳನ್ನು ವೀಕ್ಷಿಸಿ, ಮಾಹಿತಿ ಪಡೆದರು.