ಹಾಸ್ಟೆಲ್ ಕಾರ್ಮಿಕರ ವಜಾ : ಎಐಯುಟಿಯುಸಿ ಖಂಡನೆ

KannadaprabhaNewsNetwork |  
Published : Sep 29, 2024, 01:38 AM IST
ಹಾಸ್ಟೆಲ್ ಕಾರ್ಮಿಕರನ್ನು ನಿಯಮಬಾಹಿರವಾಗಿ ಸೇವೆಯಿಂದ ವಜಾ ಕ್ರಮ ಖಂಡಿಸಿ ಎಐಯುಟಿಯುಸಿ ಸಂಯೋಜಿತ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘ(ರಿ) ದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಯಾದಗಿರಿ ನಗರದ ಜಿಲ್ಲಾಡಳಿತ ಕಚೇರಿ ಎದುರು ಪ್ರತಿಭಟನೆ ನಡೆಯಿತು. | Kannada Prabha

ಸಾರಾಂಶ

Hostel workers sacked: AIUTUC condemns

-ವಸತಿ ನಿಲಯ ಕಾರ್ಮಿಕರ ಸಂಘದ ಜಿಲ್ಲಾ ಸಮಿತಿ ನೇತೃತ್ವ ಪ್ರತಿಭಟನೆ

-----

ಕನ್ನಡಪ್ರಭ ವಾರ್ತೆ ಯಾದಗಿರಿ

ಸಮಾಜ ಕಲ್ಯಾಣ ಇಲಾಖೆಯಲ್ಲಿ 10-12 ವರ್ಷಗಳಿಂದ ಸೇವೆಯಲ್ಲಿರುವ ಹಾಸ್ಟೆಲ್ ಹೊರಗುತ್ತಿಗೆ ಕಾರ್ಮಿಕರಿಗೆ ಯಾವುದೇ ನೋಟಿಸ್ ನೀಡದೆ ಕಾರ್ಮಿಕ ನಿಯಮ ಉಲ್ಲಂಘನೆ ಮಾಡಿ ಕೆಲಸದಿಂದ ವಜಾ ಮಾಡಿರುವ ಕ್ರಮ ಸರಿಯಾಗಿಲ್ಲ ಎಂದು ಖಂಡಿಸಿ, ಎಐಯುಟಿಯುಸಿ ಸಂಯೋಜಿತ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದ ಜಿಲ್ಲಾಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಕನಿಷ್ಠ ವೇತನ ಆಧಾರದ ಮೇಲೆ ಹಲವು ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಮಹತ್ವದ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರು ಏಕಾಏಕಿ ಕೆಲಸದಿಂದ ವಜಾ ಮಾಡುವ ಕ್ರಮವನ್ನು ಪ್ರತಿಭಟನಾಕಾರರು ಖಂಡಿಸಿದರು. ಯಾವುದೇ ಕಾರ್ಮಿಕ ಕುರಿತು ಆರೋಪಗಳು ಕೇಳಿ ಬಂದರೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಬೇಕು. ಜಾರಿಯಾದ ನೋಟಿಸ್ ಗೆ ಉತ್ತರ ನೀಡದಿದ್ದ ಪಕ್ಷದಲ್ಲಿ ಮತ್ತೊಮ್ಮೆ ನೋಟಿಸ್ ಜಾರಿ ಮಾಡಬೇಕು. ಒಟ್ಟಾರೆ ಜಾರಿಯಾದ ಮೂರು ನೋಟಿಸ್ ಗೆ ಉತ್ತರಿಸದಿದ್ದ ಪಕ್ಷದಲ್ಲಿ ಕಲಸದಿಂದ ವಜಾ ಮಾಡಲು ಅರ್ಹರಿರುತ್ತಾರೆ ಹಾಗೂ ನೋಟಿಸ್ ಗೆ ಲಿಖಿತವಾಗಿ ಉತ್ತರಿಸಿದರೆ ವಜಾ ಮಾಡಲು ಸಾಧ್ಯವಿರುವುದಿಲ್ಲ ಎಂದು ಕಾರ್ಮಿಕ ಕಾಯ್ದೆಯು ಹೇಳುತ್ತದೆ. ಸರ್ಕಾರದ ಕಾರ್ಮಿಕ ಇಲಾಖೆ ನಿಯಮಗಳನ್ನೇ ಇಲಾಖೆಗಳು ಪಾಲಿಸದೆ ಇರುವುದು ವಿಷಾದನೀಯ ಎಂದರು.

ಯಾವುದೇ ಕಾರ್ಮಿಕರನ್ನು ಕೆಲಸದಿಂದ ತೆಗೆಯುವ ಮುನ್ನ ಜಿಲ್ಲಾ ಮತ್ತು ತಾಲೂಕ ಮಟ್ಟದ ಸಮಿತಿ ರಚನೆ ಮಾಡಿ ಆ ಸಮಿತಿಯಲ್ಲಿ ಪರಿಶೀಲನೆ ನಡೆಸಿ ಕಾನೂನಿನಾತ್ಮಕವಾಗಿ ತೀರ್ಮಾನ ಕೈಗೊಳ್ಳಬೇಕು ಎಂದು ಇಲಾಖೆಯ ರಾಜ್ಯ ಮಟ್ಟದ ಅಧಿಕಾರಿಗಳಿಂದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನಿರ್ದೇಶನವಿದ್ದಾಗ್ಯೂ ಮನ ಬಂದಂತೆ ವಜಾ ಮಾಡುವುದು ಸರ್ಕಾರದ ಆದೇಶಗಳನ್ನು ಅಧಿಕಾರಿಗಳೇ ಉಲ್ಲಂಘನೆ ಮಾಡುತ್ತಿರುವುದು ದೊಡ್ಡ ದುರಂತ. ನಿಯಮಬಾಹಿರವಾಗಿ ವಜಾ ಮಾಡಲಾದ ಕಾರ್ಮಿಕರನ್ನು ಪುನಃ ಸೇವೆಯಲ್ಲಿ ಈ ಕೂಡಲೇ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಬಳಿಕ ಜಿಲ್ಲಾ ಪಂಚಾಯ್ತಿ ಸಿಇಒ ಪರವಾಗಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಮನವಿ ಪತ್ರ ಸ್ವೀಕರಿಸಿ, ಎರಡು ದಿನಗಳಲ್ಲಿ ಸಮಸ್ಯೆಗಳನ್ನು ಬಗೆಹರಿಸಿ ವಜಾಗೊಳಿಸಲಾದ ಕಾರ್ಮಿಕರನ್ನು ಬೇರೊಂದು ವಸತಿ ನಿಯಲಕ್ಕೆ ಸೇವೆಗೆ ನಿಯೋಜಿಸಲಾಗುವುದು ಎಂದು ಭರವಸೆ ನೀಡಿದರು. ಅಧಿಕಾರಿಗಳ ಭರವಸೆಯಿಂದ ಹೋರಾಟವನ್ನು ಹಿಂಪಡೆಯಲಾಯಿತು.

ಸಂಘದ ಜಿಲ್ಲಾಧ್ಯಕ್ಷ ಶರಣಪ್ಪ ಜಿ. ತೆಳಿಗೇರಿಕರ್, ಜಿಲ್ಲಾ ಕಾರ್ಯದರ್ಶಿ ರಾಮಲಿಂಗಪ್ಪ ಬಿ.ಎನ್., ಜಿಲ್ಲಾ ಉಪಾಧ್ಯಕ್ಷ ತಾಜುದ್ದೀನ್ ಚೌಕಿ, ಮರಳಮ್ಮ ದಾಸನಕೇರಿ, ಭೀಮಾಶಂಕರ ನಾಯ್ಕಲ್, ಶ್ರೀಕಾಂತ್ ಚಿಕ್ಕಮೇಟಿ, ಶಾಮಪ್ಪ, ನರಸಪ್ಪ, ಆನಂದಪ್ಪ, ಶಿವಪ್ಪ, ಕಾಶಪ್ಪ, ನಾಗಮ್ಮ, ಆಶಮ್ಮ, ಭೀಮಬಾಯಿ, ಇಂದ್ರಮ್ಮ, ರೇಣುಕಾ, ನಿಂಗಮ್ಮ, ಪದ್ಮಮ್ಮ ಸೇರಿದಂತೆ ಇತರರಿದ್ದರು.

-----

28ವೈಡಿಆರ್6: ಹಾಸ್ಟೆಲ್ ಕಾರ್ಮಿಕರನ್ನು ನಿಯಮಬಾಹಿರವಾಗಿ ಸೇವೆಯಿಂದ ವಜಾ ಕ್ರಮ ಖಂಡಿಸಿ ಎಐಯುಟಿಯುಸಿ ಸಂಯೋಜಿತ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಯಾದಗಿರಿ ನಗರದ ಜಿಲ್ಲಾಡಳಿತ ಕಚೇರಿ ಎದುರು ಪ್ರತಿಭಟನೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜಕೀಯವಾಗಿ ಗೂಗ್ಲಿ ಹಾಕ್ಬೇಕು, ಇಲ್ಲದಿದ್ರೆ ಯಶಸ್ಸು ಸಿಗಲ್ಲ: ಸತೀಶ್‌
ಮರ್ಯಾದಾ ಹತ್ಯೆಯಂಥ ಕೃತ್ಯ ತಡೆಗೆ ವಿಶೇಷ ಕಾನೂನು : ಸಿಎಂ