ಬೇಡಿಕೆ ಈಡೇರಿಸಲು ಒತ್ತಾಯಿಸಿ ಬಿಸಿಯೂಟ ತಯಾರಕರ ಪ್ರತಿಭಟನೆ

KannadaprabhaNewsNetwork |  
Published : Sep 22, 2024, 01:49 AM IST
21ಕೆಪಿಎಲ್27 ಜಿಲ್ಲೆಯ ಬಿಸಿಯೂಟ ತಯಾರಕರು ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಒಕ್ಕೂಟದ (A I T U C) ನೇತೃತ್ವದಲ್ಲಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ | Kannada Prabha

ಸಾರಾಂಶ

ಜಿಲ್ಲೆಯ ಬಿಸಿಯೂಟ ತಯಾರಕರು ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಒಕ್ಕೂಟದ (ಎಐಟಿಯುಸಿ) ನೇತೃತ್ವದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಕೊಪ್ಪಳ

ಜಿಲ್ಲೆಯ ಬಿಸಿಯೂಟ ತಯಾರಕರು ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಒಕ್ಕೂಟದ (ಎಐಟಿಯುಸಿ) ನೇತೃತ್ವದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ನಗರದ ಇಂದಿರಾ ಕ್ಯಾಂಟೀನ್ ಮುಂಭಾಗದಿಂದ ತಹಶೀಲ್ದಾರ ಕಚೇರಿಯವರಿಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಸೀಲ್ದಾರ ಕಚೇರಿ ತಲುಪಿ, ಶಿರಸ್ತೇದಾರ್ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

2O23ರ ವಿಧಾನಸಭೆ ಚುನಾವಣೆ ಸಂದರ್ಭ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಬಿಸಿಯೂಟ ನೌಕರರ ಗೌರವಧನವನ್ನು 6000 ರೂಪಾಯಿಗೆ ಹೆಚ್ಚಿಸುವುದಾಗಿ ಹೇಳಿದ್ದರು. 6ನೇ ಗ್ಯಾರಂಟಿ ಜಾರಿ ಮಾಡುವುದಾಗಿ ಭರವಸೆ ನೀಡಿದ್ದು, ತಕ್ಷಣ ಜಾರಿಯಾಗಲಿ ಆಗ್ರಹಿಸಿದರು.

ಬೇಸಿಗೆ ರಜೆಯಲ್ಲಿ ನೌಕರರು ಎರಡು ತಿಂಗಳು ಕೆಲಸ ಮಾಡಿದ್ದು, ಆ ಎರಡು ತಿಂಗಳ ಗೌರವಧನವನ್ನು ತಕ್ಷಣ ಪಾವತಿಸಬೇಕು.

ತರಬೇತಿಗೆ ಹಾಜರಾದವರ ಪ್ರಯಾಣ ಭತ್ಯೆ ಸಮರ್ಪಕವಾಗಿ ಖಾತೆಗೆ ಜಮಾ ಆಗಿಲ್ಲ. ಕೇಳಿದರೆ ಅಧಿಕಾರಿಗಳು ಹಾರಿಕೆಯ ಉತ್ತರ ನೀಡುತ್ತಿದ್ದಾರೆ. ಈ ಭ್ರಷ್ಟಾಚಾರ ಕುರಿತಂತೆ ತನಿಖೆ ನಡೆಸಬೇಕು. ಶೀಘ್ರ ಪ್ರಯಾಣ ಭತ್ಯೆ ಅವರವರ ಖಾತೆಗೆ ಜಮಾ ಮಾಡಬೇಕು ಒತ್ತಾಯಿಸಿದರು.

ಶಾಲಾ ಮುಖ್ಯೋಪಾಧ್ಯಾಯರು ಮತ್ತು ಮುಖ್ಯ ಅಡುಗೆಯವರ ಹೆಸರಲ್ಲಿ ಜಂಟಿ ಬ್ಯಾಂಕ್ ಇತ್ತು. ಈಗ ಮುಖ್ಯ ಅಡುಗೆಯವರನ್ನು ಕೈಬಿಟ್ಟು ಎಸ್‌ಡಿಎಂಸಿ ಅವರನ್ನು ಸೇರಿಸಿ ಆದೇಶ ಹೊರಡಿಸಿದ್ದಾರೆ. ಈ ಹೊಸ ಆದೇಶ ಕೈಬಿಟ್ಟು ಸರ್ಕಾರ ಮೊದಲಿದ್ದಂತೆ ಮುಖ್ಯ ಅಡುಗೆಯವರ ಜೊತೆಗಿನ ಜಂಟಿ ಖಾತೆಯನ್ನೇ ಮುಂದುವರಿಸಬೇಕು. ಮಕ್ಕಳ ಸಂಖ್ಯೆಗೆ ಅನುಗುಣವಾಗಿ ನೇಮಕಾತಿ ನಡೆಯಬೇಕು. ಬಳಸಲು ಯೋಗ್ಯವಲ್ಲದ ಒಲೆ, ಅಡುಗೆ ಸಾಮಗ್ರಿಗಳನ್ನು ತಕ್ಷಣ ಬದಲಾಯಿಸಲು ಕ್ರಮವಹಿಸಬೇಕು. ನೌಕರರಿಂದ ಅಡುಗೆ ಕೆಲಸವನ್ನು ಬಿಟ್ಟು ಬೇರೆ ಯಾವುದೇ ಕೆಲಸ ಹಚ್ಚಬಾರದು.

ಅಡುಗೆಗೆ ಬಳಸಲು ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳು ವಿತರಣೆ ಆಗಬೇಕು. ಆಹಾರ (ರೇಷನ್) ಸಾಮಗ್ರಿಗಳನ್ನು ವಿತರಿಸುವ ವೇಳೆ ತೂಕ ಮಾಡಬೇಕು. ಬಿಸಿಯೂಟ ತಯಾರಕರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿವೆ. ನೆಪಗಳನ್ನು ಹುಡುಕಿ ಬಿಸಿಯೂಟ ತಯಾರಕರನ್ನು ಕೆಲಸದಿಂದ ತೆಗೆದು ಹಾಕುತ್ತಿದ್ದಾರೆ. ಇದು ನಿಲ್ಲಬೇಕು ಒತ್ತಾಯಿಸಿದರು.

ಬಸವರಾಜ ಶೀಲವಂತರ, ಗಾಳೆಪ್ಪ ಮುಂಗೋಲಿ, ಸಂಜಯದಾಸ್, ರಾಮಲಿಂಗಾ ಶಾಸ್ತ್ರಿ, ಮುತ್ತು ಹಡಪದ, ಮಕ್ಬೂಲ್ ರಾಯಚೂರು, ಶೇಖಪ್ಪ ಬೇಟಗೇರಿ, ಪುಷ್ಪಾ ಮೇಸ್ತ್ರಿ, ಸುಮಂಗಲಾ ಕೊತಬಾಳ, ನೀಲಮ್ಮ ಕಾರಟಗಿ, ತಾಹೇರಾ ಗಂಗಾವತಿ, ರೇಣುಕಾ ಕಾರಟಗಿ, ನಿರ್ಮಲಾ, ಪ್ರೇಮಾ, ದುರ್ಗಮ್ಮ, ಶರಣಮ್ಮ ಮುಂತಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವಶಂಕರಪ್ಪ ಕರ್ನಾಟಕ ರತ್ನಕ್ಕೆ ಅರ್ಹ : ಶ್ರೀ
ಮೈಸೂರು ಹೀಲಿಯಂ ಸಿಲಿಂಡರ್‌ ಸ್ಫೋಟ : ಎನ್‌ಐಎ ಭೇಟಿ