)
ಕನ್ನಡಪ್ರಭ ವಾರ್ತೆ, ಬೆಂಗಳೂರು
ಇದೇ ವೇಳೆ, ವಿಜಯಪುರ, ರಾಯಚೂರಿನಲ್ಲಿ 40 ಡಿಗ್ರಿ ಸೆಲ್ಸಿಯಸ್, ಬೀದರ್, ಗದಗದಲ್ಲಿ 39 ಡಿಗ್ರಿ ಸೆಲ್ಸಿಯಸ್, ಬಾಗಲಕೋಟೆ, ಧಾರವಾಡಗಳಲ್ಲಿ 38 ಡಿಗ್ರಿ ಸೆಲ್ಸಿಯಸ್, ದಾವಣಗೆರೆ, ಹಾವೇರಿ, ಬೆಳಗಾವಿ, ಚಿತ್ರದುರ್ಗ, ಶಿವಮೊಗ್ಗಗಳಲ್ಲಿ 37 ಡಿಗ್ರಿ ಸೆಲ್ಸಿಯಸ್, ಮೈಸೂರು, ಬೆಂಗಳೂರಿನಲ್ಲಿ 36 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು.
ವಿಪರೀತ ಬಿಸಿಲು, ಸೆಖೆ, ಝಳದಿಂದಾಗಿ ಕಲಬುರಗಿ ಜಿಲ್ಲಾಡಳಿತ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಬೆಳಗ್ಗೆ 11ರಿಂದ ಮನೆಯಿಂದ ವಿನಾಕಾರಣ ಹೊರಗೆ ಬಾರದಂತೆ ಜನತೆಗೆ ಜಿಲ್ಲಾಡಳಿತ ಮನವಿ ಮಾಡಿದೆ. ಹೆಚ್ಚಿನ ನೀರು ಸೇವನೆ, ನೆರಳಲ್ಲೇ ಹೆಚ್ಚಿನ ಸಮಯ ಕಳೆಯುವುದು ಸೇರಿದಂತೆ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತ ಹೇಳಿದೆ.ಕಲಬುರಗಿ ಸೇರಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಿಗೆ ಏ.15 ರಿಂದ ಏ.17ರ ವರೆಗೂ ಉಷ್ಣ ಅಲೆ ಬೀಸಲಿರುವ ಬಗ್ಗೆ ಮುಂಜಾಗ್ರತೆ ನೀಡಲಾಗಿತ್ತಾದರೂ ಏಕಾಏಕಿ ತಾಪಮಾನ ಈ ಪರಿ ಹೆಚ್ಚಿರೋದರಿಂದಾಗಿ ಜನಜೀವನ ತತ್ತರಿಸಿದೆ. ಬೆಳಗ್ಗೆ 8 ಆಗುತ್ತಿದ್ದಂತೆ ಬಿಸಿಲು ಶುರುವಾಗುತ್ತಿದ್ದು, ಉರಿ ಬಿಸಿಲಿನ ಝಳ ಹೆಚ್ಚುತ್ತಿದ್ದಂತೆ ರಸ್ತೆಗಳು ಬೀಕೋ ಎನ್ನುತ್ತಿವೆ. ಸಂಜೆ 6 ಗಂಟೆ ಬಳಿಕ, ಬಿಸಿಲು ತಗ್ಗಿದ ನಂತರವೇ ಜನ ಮನೆಯಿಂದ ಹೊರ ಬೀಳುತ್ತಿದ್ದಾರೆ.