ಉಡುಪಿ - ಹೋಟೆಲ್ ಉದ್ದಿಮೆದಾರರ ಸಹಕಾರ ಸಂಘದ ಮಹಾಸಭೆ

KannadaprabhaNewsNetwork |  
Published : Aug 27, 2026, 03:00 AM IST
 ಹಿರಿಯ ಹೋಟೆಲ್ ಉದ್ಯಮಿ  ಶ್ರೀಧರ್ ಶೇಣವ ದಂಪತಿಯನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

: ಉಡುಪಿ ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಹಕಾರ ಸಂಘದ 2025 - 26ನೇ ಸಾಲಿನ ವಾರ್ಷಿಕ ಮಹಾಸಭೆ ಬುಧವಾರ ಸಂಸ್ಥೆಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಉಡುಪಿ: ಉಡುಪಿ ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಹಕಾರ ಸಂಘದ 2025 - 26ನೇ ಸಾಲಿನ ವಾರ್ಷಿಕ ಮಹಾಸಭೆ ಬುಧವಾರ ಸಂಸ್ಥೆಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ತಲ್ಲೂರು ಅವರು, ಸಂಸ್ಥೆಯು ಯಶಸ್ವಿಯಾಗಿ ಇದೀಗ 10ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ಅತ್ಯಂತ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುತ್ತಿರುವ ಸಂಘವು ಚಿನ್ನಾಭರಣ ಈಡಿನ ಸಾಲ, ವೈಯಕ್ತಿಕ ಸಾಲ, ವಾಹನ ಖರೀದಿ ಸಾಲ, ವ್ಯಾಪಾರ ಅಭಿವೃದ್ಧಿ ಸಾಲ, ಜಮೀನು ಅಡಮಾನ ಸಾಲ ಸೇರಿದಂತೆ ವಿವಿಧ ಸಾಲ ಸೌಲಭ್ಯಗಳನ್ನು ನೀಡುತ್ತಿದೆ. ಅಲ್ಲದೆ ಉಳಿತಾಯ ಖಾತೆಯ ಜೊತೆಗೆ ವಿವಿಧ ಠೇವಣಿಗಳು, ಉತ್ತಮ ಆಕರ್ಷಕ ಬಡ್ಡಿ ದರದೊಂದಿಗೆ ನೀಡಲಾಗುತ್ತಿದೆ. ಹಿರಿಯ ನಾಗರಿಕರಿಗೂ ಸರ್ಕಾರದ ನಿಯಮಾವಳಿಯಂತೆ ಅಧಿಕ ಬಡ್ಡಿ ದರ ನೀಡಲಾಗುತ್ತಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ಹೋಟೆಲ್ ಉದ್ಯಮಿ, ಲಯನ್ಸ್ ಮಾಜಿ ಜಿಲ್ಲಾ ಗವರ್ನರ್ ಶ್ರೀಧರ್ ಶೇಣವ - ಜ್ಯೋತಿ ಶೇಣವ ದಂಪತಿಯನ್ನು ಸನ್ಮಾನಿಸಲಾಯಿತು. ಅಲ್ಲದೆ ಸಂಘದ ನಿರ್ದೇಶಕ ಎಂ.ವಿಠಲ ಪೈ ಹಾಗೂ ಉತ್ತಮ ಸೇವೆ ಸಲ್ಲಿಸಿದ ಸಂಘದ ಸಿಬ್ಬಂದಿ ರೇಷ್ಮಾ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು. ಸಂಘದ ಉಪಾಧ್ಯಕ್ಷ ಕೆ. ನಾಗೇಶ್ ಭಟ್, ನಿರ್ದೇಶಕರಾದ ಹರೀಶ್ ಹೆಗ್ಡೆ, ಬಿ .ಅಶೋಕ್ ಪೈ, ತಲ್ಲೂರು ಶಿವಪ್ರಸಾದ್ ಎಸ್. ಶೆಟ್ಟಿ, ಗಿರಿಜಾ ಶಿವರಾಮ ಶೆಟ್ಟಿ ಹಾಗೂ ಗೋಪಾಲ ಸಿ. ಬಂಗೇರ ಉಪಸ್ಥಿತರಿದ್ದರು .

ಸಂಘದ ಕಾರ್ಯದರ್ಶಿ ರೇಷ್ಮಾ ಶೆಟ್ಟಿ ವರದಿ ಮಂಡಿಸಿ, ನಿರ್ದೇಶಕರಾದ ಸುನಿಲ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಚಂದ್ರಹಾಸ ಶೆಟ್ಟಿ ಸ್ವಾಗತಿಸಿದರು. ಎಂ . ಕೃಷ್ಣ ಆಳ್ವ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸೆ. 8, ಮೊಂತಿ ಫೆಸ್ತ್‌ಗೆ ರಜೆ ನೀಡಲು ಸಿಎಂಗೆ ಕಥೊಲಿಕ್ ಸಭಾ ಮನವಿ
ಯಶ್ಪಾಲ್ ಸುವರ್ಣ ಹುಟ್ಟುಹಬ್ಬ: ಗೋಶಾಲೆಗೆ ಮೇವು ಹಸ್ತಾಂತರ