ಉಡುಪಿ ಕಲಾರಂಗದ 83ನೇ ಮನೆ ಹಸ್ತಾಂತರ

KannadaprabhaNewsNetwork |  
Published : Jan 05, 2026, 02:45 AM IST
ಉಳ್ಳೂರಿನ ತೃಪ್ತಿಗೆ ನಿರ್ಮಿಸಿಕೊಟ್ಟ ಮನೆಯನ್ನುದಾನಿಗಳಾದ ಅರುಣ್ ಕುಮಾರ್ ಹಸ್ತಾಂತರಿಸಿದರು. | Kannada Prabha

ಸಾರಾಂಶ

ಪ್ರತಿಭಾವಂತ ವಿದ್ಯಾರ್ಥಿನಿ, ಉಳ್ಳೂರಿನ ತೃಪ್ತಿಗೆ ದೀಪಾ ಮತ್ತು ಅರುಣ ಕುಮಾರ್ ಅವರುನಿರ್ಮಿಸಿಕೊಟ್ಟ ''ಶ್ರೀ ಸಿದ್ಧಿವಿನಾಯಕ'' ಮನೆಯನ್ನು ಭಾನುವಾರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಿದರು.

ಕುಂದಾಪುರ: ಉಡುಪಿ ಕಲಾರಂಗ ಸಂಸ್ಥೆಯ ವಿದ್ಯಾಪೋಷಕ್ ಯೋಜನೆಯ ಪ್ರಥಮ ಪಿಯು ಪ್ರತಿಭಾವಂತ ವಿದ್ಯಾರ್ಥಿನಿ, ಇಲ್ಲಿನ ಉಳ್ಳೂರಿನ ತೃಪ್ತಿ (ಲತಾ- ಕೃಷ್ಣ ಅವರ ಪುತ್ರಿ)ಗೆ ದೀಪಾ ಮತ್ತು ಅರುಣ ಕುಮಾರ್ ಅವರು 7 ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಿಕೊಟ್ಟ ''''''''ಶ್ರೀ ಸಿದ್ಧಿವಿನಾಯಕ'''''''' ಮನೆಯನ್ನು ಭಾನುವಾರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಉಧ್ಘಾಟಿಸಿದರು.ಶ್ರೀ ಸಿದ್ಧಿವಿನಾಯಕ ಕ್ಯಾಶ್ಯು ಇಂಡಸ್ಟ್ರೀಸ್ ಮಾಲೀಕ ಅರುಣ್ ಕುಮಾರ್ ಶೆಟ್ಟಿ ಮಾತನಾಡಿ, ನಾನೇನು ದೊಡ್ಡ ಶ್ರೀಮಂತನಲ್ಲ. ಸಾಲದಲ್ಲೇ ಮನೆ ಕಟ್ಟಲು ಆರಂಭಿಸಿದ್ದು, ನನ್ನ ನೂತನ ಮನೆಯ ಪ್ರವೇಶಕ್ಕೂ ಮೊದಲು ಕಷ್ಟದಲ್ಲಿರುವವರಿಗೊಂದು ಸೂರು ನಿರ್ಮಿಸಿ ಕೊಡಬೇಕೆಂದು ಸಂಕಲ್ಪಿಸಿದ್ದೆ. ಅರ್ಹ ಫಲಾನುಭವಿಯನ್ನು ಆಯ್ದು ಆ ಅವಕಾಶ ಕಲ್ಪಿಸಿದ ಕಲಾ ರಂಗಕ್ಕೆ ಕೃತಜ್ಞನಾಗಿದ್ದೇನೆ ಎಂದು ಹೇಳಿದರು.ಶಾಸಕ ಕಿರಣ ಕುಮಾರ್ ಕೊಡ್ಗಿ ಮಾತನಾಡಿ, ವಾಟ್ಸಪ್ ಸಂದೇಶವನ್ನು ಅಷ್ಟಾಗಿ ನೋಡದ ನಾನು ಸದಾ ರಚನಾತ್ಮಕ ಕೆಲಸದಲ್ಲೇ ನಿರತವಾಗಿರುವ ಕಲಾರಂಗದ ಗ್ರೂಪ್‌ನಲ್ಲಿ ಬರುವ ಸುದ್ದಿಯನ್ನು ನೋಡುತ್ತೇನೆ. ಅದರಲ್ಲಿ ಸಮಾಜಕ್ಕೆ ಒಳ್ಳೆಯ ಸಂದೇಶವಿರುತ್ತದೆ ಎಂದರು.

ಅತಿಥಿಗಳಾಗಿ ವಿಠ್ಠಲ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ನ ಪ್ರವರ್ತಕ ಕೊರ್ಗಿ ವಿಠ್ಠಲ ಶೆಟ್ಟಿ, ತೆಕ್ಕಟ್ಟೆ ರೋಟರಿ ಅಧ್ಯಕ್ಷ ಮಲ್ಯಾಡಿ ಸುಧೀರ್ ಕುಮಾರ್ ಶೆಟ್ಟಿ, ಗ್ರಾಪಂ ಉಪಾಧ್ಯಕ್ಷೆ ಬೇಬಿ ಉಪಸ್ಥಿತರಿದ್ದರು.

ಅರುಣ್ ಕುಮಾರರ ಸ್ನೇಹಿತರು, ಗ್ರಾಪಂ ಸದಸ್ಯರಾದ ರಾಮಚಂದ್ರ ಶೇರಿಗಾರ್, ಜಯಶ್ರೀ ಶೆಟ್ಟಿ ಹಾಗೂ ಯಕ್ಷಗಾನ ಕಲಾರಂಗದ ಎಸ್.ವಿ. ಭಟ್, ಕೆ. ಸದಾಶಿವ ರಾವ್, ಯು. ವಿಶ್ವನಾಥ ಶೆಣೈ, ಭುವನ ಪ್ರಸಾದ ಹೆಗ್ಡೆ, ಅನಂತರಾಜ ಉಪಾಧ್ಯ, ಸಂತೋಷ ಕುಮಾರ್ ಶೆಟ್ಟಿ, ಕಿಶೋರ್ ಸಿ. ಉದ್ಯಾವರ, ಗಣಪತಿ ಭಟ್, ಜಯರಾಮ ಪಡಿಯಾರ್, ಅಜಿತ್ ಕುಮಾರ್, ವಿಶ್ವನಾಥ, ವೈಷ್ಣವಿ, ಸನಕ ಕಡೆಕಾರ್ ಉಪಸ್ಥಿತರಿದ್ದರು. ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ನಾರಾಯಣ ಎಂ. ಹೆಗಡೆ ವಂದಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವನೆಯ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೀರ್ಘಾವಧಿ ಸಿಎಂ ಸಂಭ್ರಮಕ್ಕೆ ಗೃಹಲಕ್ಷ್ಮಿ ಹಣ ನೀಡಿದ ಮಹಿಳೆ!
4 ಜಿಲ್ಲೆಗಳಲ್ಲಿ 13 ಸಾವಿರ ಕೇಸ್‌ ಬಾಕಿ : ಸಚಿವ ತರಾಟೆ