ತುರುವೇಕೆರೆ ತಾಲೂಕಿನಲ್ಲಿ ವರುರ್ಣಾಭಟಕ್ಕೆ ಮನೆ ಗೋಡೆ ಕುಸಿತ

KannadaprabhaNewsNetwork |  
Published : May 12, 2024, 01:21 AM IST
ಮನೆ ಗೋಡೆ ಕುಸಿದಿರುವುದು | Kannada Prabha

ಸಾರಾಂಶ

ತಾಲೂಕಿನ ಹಲವೆಡೆ ಶುಕ್ರವಾರ ತಡರಾತ್ರಿ ಮಿಂಚು, ಬಿರುಗಾಳಿ ಸಹಿತ ಸುರಿದ ಭರಣಿ ಮಳೆಯಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಕನ್ನಡಪ್ರಭ ವಾರ್ತೆ ತುರುವೇಕೆರೆತಾಲೂಕಿನ ಹಲವೆಡೆ ಶುಕ್ರವಾರ ತಡರಾತ್ರಿ ಮಿಂಚು, ಬಿರುಗಾಳಿ ಸಹಿತ ಸುರಿದ ಭರಣಿ ಮಳೆಯಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಈ ವರ್ಷದ ಮೊದಲ ಭರಣೆ ಮಳೆ ಉತ್ತಮ ಆರಂಭ ನೀಡದಿದ್ದರೂ ಕೊನೆ ಹಂತದಲ್ಲಿ ತಾಲೂಕಿನ ಅಲ್ಲಲ್ಲಿ ಹದ ಮಳೆಯಾಗಿದೆ. ಮಧ್ಯರಾತ್ರಿ ಒಂದು ಗಂಟೆಗೂ ಹೆಚ್ಚು ಹೊತ್ತು ಮಳೆ ಸುರಿದಿದೆ.

ಅಂರ್ತಜಲದ ಮಟ್ಟ ಕುಸಿದು ಕೊಳವೆ ಬಾವಿಗಳಲ್ಲಿ ನೀರಿಲ್ಲದೆ ತೆಂಗು ಮತ್ತು ಅಡಿಕೆ ಬೆಳೆಗಳು ಒಣಗಿ ರೈತರು ಕಂಗಾಲಾಗಿದ್ದರು. ಈ ಮಳೆಯಿಂದ ಅನುಕೂಲವಾಗಿದೆಂದು ರೈತ ಚಂದ್ರಣ್ಣ ವಿಶ್ವಾಸ ವ್ಯಕ್ತಪಡಿಸಿದ್ದರು. ತಾಲೂಕಿನ ಸಂಪಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಗದೇವನಹಳ್ಳಿ, ಅಂಗರೇಖನಹಳ್ಳಿ, ಬಸವನಹಳ್ಳಿ, ಹಂಪಲಾಪುರ, ತಳವಾರನಹಳ್ಳಿ, ಮಲ್ಲೇನಹಳ್ಳಿ, ಮಾಸ್ಕನಹಳ್ಳಿ ಇನ್ನಿತರ ಗ್ರಾಮಗಳಲ್ಲಿ ಉತ್ತಮ ಮಳೆಯಾಗಿದೆ.

ಕಸಬಾ ವ್ಯಾಪ್ತಿಯ ತುರುವೇಕೆರೆ ಪಟ್ಟಣ, ತಾವರೇಕೆರೆ, ಪುರ, ಚಂಡೂರು, ಶ್ರೀರಾಂಪುರ, ತಾಳ್ಕೆರೆ ಹಾವಾಳ, ದಂಡಿನಶಿವರ ಹೋಬಳಿಯ ದಂಡಿನಶಿವರ, ಹಡವನಹಳ್ಳಿ ಸಾಧಾರಣ ಮಳೆಯಾಗಿದೆ.‘ಹುಲ್ಲೇಕೆರೆ, ಬಳ್ಳೆಕಟ್ಟೆ ಮತ್ತು ಹಟ್ಟಿಹಳ್ಳಿಯಲ್ಲಿ ಹದ ಮಳೆಯಾಗಿ ತೋಟ ಸಾಲುಗಳಲ್ಲಿ ನೀರು ಸಂಗ್ರಹವಾಗಿದೆ ಎಂದು ಹುಲ್ಲೇಕೆರೆ ರೈತ ಎಚ್.ಬಿ.ಗಂಗಾಧರ್ ತಿಳಿಸಿದರು.ಮಳೆಗಾಳಿಗೆ ಮರ ಮುರಿದು ಬಿದ್ದು ತಂಡಗ ವ್ಯಾಪ್ತಿಯ ಮಾವಿನಹಳ್ಳಿ ಗೋವಿಂದಘಟ್ಟ 3, ಹಿಂಡುಮಾರನಹಳ್ಳಿಯಲ್ಲಿ 11 ಕೆವಿ 2 ಕಂಬಗಳು, ಹಡವನಹಳ್ಳಿ ಗೊಲ್ಲರಹಟ್ಟಿ ವ್ಯಾಪ್ತಿ 12, ಹೆಗ್ಗೆ 2 ವಿದ್ಯುತ್ ಕಂಬಗಳು ಮುರಿದಿವೆ. ಹುಲಿಕೆರೆ, ತೊರೆಮಾವಿನಹಳ್ಳಿ ಸೇರಿದಂತೆ ಕೆಲವೆಡೆ ಮರದ ಕೊಂಬೆಗಳು ಮುರಿದು ಬಿದ್ದು ವಿದ್ಯುತ್ ಲೈನ್‌ಗಳು ತುಂಡರಿಸಿ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಸ್ಥಳಕ್ಕೆ ಬೆಸ್ಕಾಂ ಸಿಬ್ಬಂದಿಗಳು ಭೇಟಿ ನೀಡಿ ತೆರೆವು ಕಾರ್ಯದ ಮಾಡಿದ್ದಾರೆಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ಸಿ.ರಾಜಶೇಖರ್ ತಿಳಿಸಿದರು.ಮನೆ ಗೋಡೆ ಕುಸಿತ: ಮಳೆಯಿಂದಾಗಿ ಕಸಬಾ ವ್ಯಾಪ್ತಿಯ ಪುರಗ್ರಾಮದ ಯಶೋದಮ್ಮ ಅವರ ವಾಸದ ಗೋಡೆ ಕುಸಿದು ಬಿದ್ದಿದೆ. ಮನೆಯ ಸಣ್ಣ ಪುಟ್ಟ ವಸ್ತುಗಳು ಹಾಳಾಗಿದ್ದು, ಕುಟುಂಬದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಕಸಬಾ ಕಂದಾಯ ಅಧಿಕಾರಿ ಎಂ.ಬಿ.ಶಿವಕುಮಾರ ಸ್ವಾಮಿ ಹೇಳಿದರು.ಕೆಲವೆಡೆ ತೆಂಗಿನ ಮರಗಳು, ಅಡಿಕೆ ಮರಗಳು ಹಾಗು ಇನ್ನಿತರ ಮರಗಳು ಸಹ ಬಿರುಗಾಳಿಗೆ ಧರೆಗುರುಳಿವೆ. ಹಾನಿಯಾದ ಸ್ಥಳಕ್ಕೆತಂಡಗ ಬೆಸ್ಕಾಂ ಶಾಖಾಧಿಕಾರಿ ಎಂ.ಎಲ್.ಉಮೇಶ್ವರಯ್ಯ, ದಂಡಿನಶಿವರ ಬೆಸ್ಕಾಂ ಶಾಖಾಧಿಕಾರಿ ಸೋಮಶೇಖರ್, ಸಿಬ್ಬಂದಿ ಶಿವಕುಮಾರ್, ಶರತ್, ಮಹಾಂತೇಶ್ ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯ ಅಗತ್ಯ
ಪಂ.ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಯೋಜನಾ ಸಭೆ