ಹೌಸಿಂಗ್‌ ಸೊಸೈಟಿ ಚುನಾವಣೆ: ಬ್ಯಾಟ್ಸ್ ಮನ್ ಚಿಹ್ನೆಗೆ ಮತ ನೀಡುವಂತೆಸೊಸೈಟಿಯ ಸದಸ್ಯ ಎಸ್.ತಂಗರಾಜ್ ಮನವಿ

KannadaprabhaNewsNetwork |  
Published : Jan 10, 2025, 12:50 AM IST
ಪೊಟೋ: 09ಎಸ್‌ಎಂಜಿಕೆಪಿ08ಶಿವಮೊಗ್ಗದ ಪತ್ರಿಕಾಭವನದಲ್ಲಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯ ಸದಸ್ಯ ಎಸ್. ತಂಗರಾಜ್ ಮಾತನಾಡಿದರು. | Kannada Prabha

ಸಾರಾಂಶ

ಶಿವಮೊಗ್ಗ ಹೌಸಿಂಗ್ ಕೋ- ಆಪರೇಟಿವ್ ಸೊಸೈಟಿಯ ನಿರ್ದೇಶಕರ ಚುನಾವಣೆಯು ಜ.12 ರಂದು ನಡೆಯಲಿದೆ. ಈ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುತ್ತಿದ್ದು, ಕ್ರಮ ಸಂಖ್ಯೆ 7 ರ ಬ್ಯಾಟ್ಸ್ ಮನ್ ಚಿಹ್ನೆಯ ಗುರುತಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯ ಸದಸ್ಯ ಎಸ್.ತಂಗರಾಜ್ ಮನವಿ ಮಾಡಿದರು. ಶಿವಮೊಗ್ಗ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

12ಕ್ಕೆ ನಡೆವ ಹೌಸಿಂಗ್‌ ಕೋ ಆಪರೇಟಿವ್‌ಗೆ ಮತದಾನ । ಸೊಸೈಟಿಯಲ್ಲಿ 6,912 ಸದಸ್ಯರು

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಶಿವಮೊಗ್ಗ ಹೌಸಿಂಗ್ ಕೋ- ಆಪರೇಟಿವ್ ಸೊಸೈಟಿಯ ನಿರ್ದೇಶಕರ ಚುನಾವಣೆಯು ಜ.12 ರಂದು ನಡೆಯಲಿದೆ. ಈ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುತ್ತಿದ್ದು, ಕ್ರಮ ಸಂಖ್ಯೆ 7 ರ ಬ್ಯಾಟ್ಸ್ ಮನ್ ಚಿಹ್ನೆಯ ಗುರುತಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಕೇಂದ್ರ ಕಾರಾಗೃಹ ಸಂದರ್ಶಕ ಮಂಡಳಿಯ ಮಾಜಿ ಸದಸ್ಯ ಹಾಗೂ ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯ ಸದಸ್ಯ ಎಸ್.ತಂಗರಾಜ್ ಮನವಿ ಮಾಡಿದರು.

ನಗರದಲ್ಲಿ ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಸುಮಾರು 100 ವರ್ಷ ಇತಿಹಾಸವುಳ್ಳ ಈ ಸೊಸೈಟಿಯಲ್ಲಿ 6,912 ಜನ ಸದಸ್ಯರಿದ್ದಾರೆ. 3,063 ಜನ ಮತದಾರರಿದ್ದಾರೆ. ಅತಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಆಸಕ್ತಿ ತೋರಿ ಬರುತ್ತಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಹಲವು ಸ್ಪರ್ಧಿಗಳು ಹಣ,ಆಮಿಷಗಳನ್ನು ಒಡ್ಡುತ್ತಿದ್ದು, ಮತದಾರರು ಆಮಿಷಗಳಿಗೆ ಒಳಗಾಗದೆ ಸೂಕ್ತ ಅಭ್ಯರ್ಥಿಯನ್ನು ಗೆಲ್ಲಿಸಿಕೊಡಬೇಕು ಎಂದರು.

ನಾನು ಹಲವಾರು ಸಂಘ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದೇನೆ. ಈಗ ಹೊಸ ಚಿಂತನೆ, ಹೊಸ ಆಲೋಚನೆಯೊಂದಿಗೆ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ನಿರ್ಧರಿಸಿದ್ದೇನೆ. ಸರ್ವಸದಸ್ಯರ ಧ್ವನಿಯಾಗಲು ನನಗೆ ಮತ ನೀಡಬೇಕು ಎಂದು ಮನವಿ ಮಾಡಿದರು.

ಶಿವಮೊಗ್ಗ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಮರಣ ಹೊಂದಿದವರು ಕೂಡ ಮತದಾರರ ಪಟ್ಟಿಯಲ್ಲಿದ್ದಾರೆ. ಕಳೆದ ಬಾರಿ ಸುಮಾರು 700ರಷ್ಟು ಇದ್ದ ಮತದಾರರು ಈ ಬಾರಿ ಇದ್ದಕ್ಕಿದ್ದಂತೆ 3 ಸಾವಿರ ದಾಟಿದ್ದಾರೆ. 300 ರಿಂದ 400 ರಷ್ಟು ಜನ ಮರಣ ಹೊಂದಿದವರು ಕೂಡ ಪಟ್ಟಿಯಲ್ಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಟ್ಟು 32 ಜನ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದು, ಈ ಬಾರಿ ಅತಿಹೆಚ್ಚು ಹೊಸಬರಿಗೆ, ಯುವಕರಿಗೆ ಆದ್ಯತೆ ನೀಡಬೇಕು. ಕಳೆದ ಅವಧಿಯಲ್ಲಿ ಆಡಳಿತದಲ್ಲಿದ್ದವರು ನಿವೇಶನ ಸೇರಿದಂತೆ ಸದಸ್ಯರಿಗೆ ಯಾವ ಅನುಕೂಲವನ್ನೂ ಮಾಡಲಿಲ್ಲ ಎಂದು ಆರೋಪಿಸಿದರು.

ಚುನಾವಣೆಯು ಜ.12ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಬಾಲರಾಜ್ ರಸ್ತೆ ಕೋರ್ಟ್ ಮುಂಭಾಗದಲ್ಲಿರುವ ನ್ಯಾಷನಲ್ ಹೈಸ್ಕೂಲ್ ಆವರಣದಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಶ್ರೀನಾಥ್, ಹರ್ಷ ಭೋವಿ, ಕೆ.ಈಶ್ವರ್, ಮಂಜುನಾಥ್, ಕುಮಾರ್, ದಿನೇಶ್, ಅಜಯ್, ಆದಿತ್ಯ, ಇತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೇಲ್ಮನೆಗೆ ಪತ್ರಕರ್ತರ ಕರೆತರಲು ಎಂಎಲ್‌ಸಿ ಆಫರ್‌!
ಬಂಗಾಳಕ್ಕೆ ದೀದಿ, ತಮಿಳ್ನಾಡಿಗೆ ಅಣ್ಣಾ, ಅಸ್ಸಾಂಗೆ ಮಾಮಾ, ಕೇರಳಕ್ಕೆ ದಾದಾ!