ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ಅವರು ಇಲ್ಲಿನ ಪ್ರವಾಸಿ ಮಂದಿರದಲ್ಲಿ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಧಾರವಾಡ, ಹು-ಧಾ ಮಹಾನಗರ ಪಾಲಿಕೆ, ರೈಲ್ವೆ, ಎನ್ಡಬ್ಲೂಕೆಎಸ್ಆರ್ಟಿಸಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಜತೆ ಘನ ತ್ಯಾಜ್ಯ ನಿರ್ವಹಣೆ ಮತ್ತು ವಿಲೇವಾರಿ ಕುರಿತು ಸೋಮವಾರ ಸಂಜೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದರು.
ನಗರದ ಹಲವು ಕಡೆಗಳಲ್ಲಿ ಸಂಚರಿಸಿದ್ದೇನೆ. ಪುಟ್ಪಾತ್ಗಳೆಲ್ಲ ಸಂಪೂರ್ಣ ಹಾಳಾಗಿ ಹೋಗಿವೆ. ಎಲ್ಲೆಂದರಲ್ಲಿ ಕಸ ಸಂಗ್ರಹಗೊಂಡಿದೆ. ಇನ್ನು ಕೆಲವು ಕಡೆಗಳಲ್ಲಿ ಪುಟ್ಪಾತ್ ಮೇಲೆಯೇ ಡಬ್ಬಾ ಅಂಗಡಿಗಳನ್ನು ಇರಿಸಲಾಗಿದೆ. ಈ ಕುರಿತು ಪಾಲಿಕೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಬೇಕು. ಮಹಾನಗರದ ಎಲ್ಲ ಪುಟ್ಪಾತ್ಗಳ ದುರಸ್ತಿ, ಸ್ವಚ್ಛತೆಗೆ ಮೊದಲು ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಪುನರ್ ಬಳಕೆ ಪ್ಲಾಸ್ಟಿಕ್ ಹೆಚ್ಚಾಗಿ ಬಳಕೆ ಮಾಡಬೇಕು. ಪ್ಲಾಸ್ಟಿಕ್ ಘನ ತ್ಯಾಜ್ಯ, ಮರು ಬಳಕೆ ಮಾಡಲಾಗದ ಪ್ಲಾಸ್ಟಿಕ್ಗೆ ಕಡಿವಾಣ ಹಾಕಲು ಅಧಿಕಾರಿಗಳು ಮುಂದಾಗಬೇಕಿದೆ. ಶಾಲೆಗಳಲ್ಲಿ ಹಸಿರು ಕ್ಯಾಂಪಸ್ ನಿರ್ಮಾಣ ಮಾಡಲು ಕ್ರಮ ವಹಿಸಬೇಕು. ಅದರಂತೆ ಬಸ್ ನಿಲ್ದಾಣ, ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಖಾಸಗಿ ಶಾಲಾ ಕಾಲೇಜುಗಳು, ವಿಶ್ವವಿದ್ಯಾಲಯ, ಬ್ಯಾಂಕ್ಗಳು ಮುಂತಾದ ಕಡೆಗಳಲ್ಲೂ ಸಹ ಹಸಿರೀಕರಣ ನಿರ್ಮಾಣಕ್ಕೆ ಒತ್ತು ನೀಡಬೇಕು.ರೈಲ್ವೆ ನಿಲ್ದಾಣಗಳಲ್ಲಿ ಹಸರೀಕರಣಕ್ಕೆ ಒತ್ತು ನೀಡಬೇಕು. ಅಲ್ಲದೇ ಜಾಹೀರಾತುಗಳನ್ನು ಪ್ರಕಟಿಸುವ ಮೂಲಕ ಪ್ರಯಾಣಿಕರಿಗೆ ಅರಿವು ಮೂಡಿಸಬೇಕಿದೆ. ಧ್ವನಿವರ್ಧಕಗಳ ಮೂಲಕ ರೈಲ್ವೆಗಳ ಬಗ್ಗೆ ಮಾಹಿತಿ ನೀಡುವಾಗ ತ್ಯಾಜ್ಯ ನಿರ್ವಹಣೆ ಕುರಿತು ಮಾಹಿತಿ ನೀಡಬೇಕು ಎಂದು ರೈಲ್ವೆ ಅಧಿಕಾರಿಗಳಿಗೆ ಸೂಚಿಸಿದರು.
ಬಸ್ ನಿಲ್ದಾಣಗಳಲ್ಲಿ ಸ್ವಚ್ಛತೆ ಕಾಪಾಡಿ:
ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣಪತಿಗಳ ಮಾರಾಟ ತಡೆಗಟ್ಟಬೇಕು. ಅಲ್ಲದೇ ಪಿಒಪಿ ಗಣಪತಿ ತಯಾರಿಸುವ ಅಂಗಡಿಗಳನ್ನು ಮುಚ್ಚುವುದಾಗಿ ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಿ. ಜನರು ಮಣ್ಣಿನ ಗಣಪತಿಗಳನ್ನು ಖರೀದಿಸುವಂತೆ ಪ್ರೇರೆಪಿಸಬೇಕು ಎಂದರು.