ಕೆಸರುಮಯವಾದ ಎಚ್‌ಪಿಸಿಎಲ್‌ ಬಂಕ್‌

KannadaprabhaNewsNetwork |  
Published : May 22, 2025, 01:01 AM IST
21ಎಚ್ಎಸ್ಎನ್11 : ಪಟ್ಟಣದ ಹೃದಯಭಾಗದಲ್ಲಿರುವ ಪೆಟ್ರೋಲ್ ಬಂಕ್ ಸ್ಥಿತಿ. | Kannada Prabha

ಸಾರಾಂಶ

ಹಿಂದೂಸ್ಥಾನ್‌ ಪೆಟ್ರೋಲಿಯಂ ಕಾರ್ಪೋರೇಷನ್ ಕಂಪನಿಯ ಪೆಟ್ರೋಲ್ ಬಂಕ್ ಕೆಸರುಮಯಗೊಂಡಿದ್ದು ಸಾರ್ವಜನಿಕರಿಗೆ ಸಮಸ್ಯೆಯಾಗಿ ಪರಿಣಮಿಸಿದೆ. ಗ್ರಾಹಕರ ಸೇವೆಯನ್ನು ಸ್ಥಗಿತಗೊಳಿಸಿದ್ದು ಕಳೆದೊಂದು ವಾರದ ಹಿಂದೆ ಅಲ್ಪ ನವೀಕರಣದ ನಂತರ ಬಂಕ್ ಸೇವೆಯನ್ನು ಗ್ರಾಹಕರಿಗ ಮುಕ್ತಗೊಳಿಸಿದೆ. ಆದರೆ, ಮಳೆಯಿಂದಾಗಿ ಕೆಸರುಮಯಗೊಂಡಿರುವ ಬಂಕ್‌ಗೆ ಹೋಗುವುದೇ ದುಸ್ಥರವಾಗಿದ್ದು ದ್ವಿಚಕ್ರವಾಹನ ಸಾವರರು ಕೆಸರಿಗೆ ಸಿಲುಕಿ ಬೀಳುತ್ತಿದ್ದರೆ, ಲಘು ವಾಹನಗಳು ಕೆಸರಿನಲ್ಲಿ ಸಿಲುಕಿ ಪರದಾಡುವಂತಾಗಿದೆ.

ಕನ್ನಡಪ್ರಭ ವಾರ್ತೆ ಸಕಲೇಶಪುರ

ಪಟ್ಟಣದ ಹೃದಯ ಭಾಗದಲ್ಲಿರುವ ಹಿಂದೂಸ್ಥಾನ್‌ ಪೆಟ್ರೋಲಿಯಂ ಕಾರ್ಪೋರೇಷನ್ ಕಂಪನಿಯ ಪೆಟ್ರೋಲ್ ಬಂಕ್ ಕೆಸರುಮಯಗೊಂಡಿದ್ದು ಸಾರ್ವಜನಿಕರಿಗೆ ಸಮಸ್ಯೆಯಾಗಿ ಪರಿಣಮಿಸಿದೆ.

ಸಾವಿರಾರು ವಾಹನಗಳಿಗೆ ಸೇವೆ ಒದಗಿಸುವ ಎಚ್‌ಪಿಸಿಎಲ್ ಪೆಟ್ರೋಲ್ ಬಂಕ್ ನವೀಕರಣಕ್ಕಾಗಿ ಕಳೆದ ಮೂರು ತಿಂಗಳ ಹಿಂದೆ ಕಂಪನಿ, ಗ್ರಾಹಕರ ಸೇವೆಯನ್ನು ಸ್ಥಗಿತಗೊಳಿಸಿದ್ದು ಕಳೆದೊಂದು ವಾರದ ಹಿಂದೆ ಅಲ್ಪ ನವೀಕರಣದ ನಂತರ ಬಂಕ್ ಸೇವೆಯನ್ನು ಗ್ರಾಹಕರಿಗ ಮುಕ್ತಗೊಳಿಸಿದೆ. ಆದರೆ, ಮಳೆಯಿಂದಾಗಿ ಕೆಸರುಮಯಗೊಂಡಿರುವ ಬಂಕ್‌ಗೆ ಹೋಗುವುದೇ ದುಸ್ಥರವಾಗಿದ್ದು ದ್ವಿಚಕ್ರವಾಹನ ಸಾವರರು ಕೆಸರಿಗೆ ಸಿಲುಕಿ ಬೀಳುತ್ತಿದ್ದರೆ, ಲಘು ವಾಹನಗಳು ಕೆಸರಿನಲ್ಲಿ ಸಿಲುಕಿ ಪರದಾಡುವಂತಾಗಿದೆ.

ಕೆಸರಿನಲ್ಲೆ ಕೆಲಸ ಮಾಡ ಬೇಕಾಗಿರುವುದರಿಂದ ಬಂಕ್ ನೌಕರರ ಸ್ಥಿತಿ ಭತ್ತದ ಗದ್ದೆಯಲ್ಲಿ ನಾಟಿ ಮಾಡಿದಂತಾಗುತ್ತಿದೆ. ಕೇವಲ ನಲ್ವತ್ತೈದು ದಿನಗಳಲ್ಲಿ ಕಾಮಗಾರಿ ಮುಕ್ತಾಯಗೊಳಿಸುವ ಕರಾರಿನೊಂದಿಗೆ ಕಾಮಗಾರಿ ಆರಂಭಿಸಿದ್ದ ಹರಿಯಾಣ ಮೂಲದ ಗುತ್ತಿಗೆದಾರ ಮೂರು ತಿಂಗಳು ಮುಗಿದರೂ ಕಾಮಗಾರಿ ಮುಕ್ತಾಯಗೊಳಿಸದ ಪರಿಣಾಮ ಮಳೆಯಿಂದಾಗಿ ಪೆಟ್ರೋಲ್ ಬಂಕ್ ಕೆಸರು ಮಯವಾಗಿದೆ ಎಂಬುದು ಬಂಕ್ ಮಾಲೀಕರ ಸ್ಪಷ್ಟನೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌