ಕನ್ನಡಪ್ರಭ ವಾರ್ತೆ ಬೆಂಗಳೂರು
ಎಚ್ಎಸ್ಆರ್ಪಿ ಅಳವಡಿಕೆಗೆ ಮೇ 31ರವರೆಗೆ ವಿಧಿಸಲಾಗಿರುವ ಗಡವನ್ನು ವಿಸ್ತರಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಎಚ್ಎಸ್ಆರ್ಪಿ ತಯಾರಿಕಾ ಕಂಪನಿಯಾದ ಬಿಎನ್ ಡಿ ಎನರ್ಜಿ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂಜೆಎಸ್ ಕಮಲ್ ಅವರ ನ್ಯಾಯಪೀಠಕ್ಕೆ ಸರ್ಕಾರ ಈ ಭರವಸೆ ನೀಡಿದೆ.
ವಿಚಾರಣೆ ವೇಳೆ ಸರ್ಕಾರದ ಪರ ಹಾಜರಿದ್ದ ರಾಜ್ಯ ಹೆಚ್ಚುವರಿ ಅಡ್ವೋಕೇಟ್ ಜನರಲ್ ರೂಬೆನ್ ಜೇಕಬ್, ಪ್ರಕರಣಕ್ಕೆ ಸಂಬಂಧಿಸಿದ ಮೂಲ ದಾವೆ ಬರುವ ಜೂ.11ರಂದು ವಿಚಾರಣೆಗೆ ನಿಗದಿಯಾಗಿದೆ. ಹೀಗಾಗಿ, ಈ ಮಧ್ಯಂತರ ಅರ್ಜಿ ಸಂಬಂಧ ಯಾವುದೇ ಆದೇಶ ಹೊರಡಿಸಬಾರದು ಎಂದು ಕೋರಿದರು.ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಜೂ.11ರವರೆಗೂ ಎಚ್ಎಸ್ಆರ್ಪಿ ಅಳವಡಿಕೆಗೆ ಕಾಲಾವಕಾಶ ನೀಡಬಹುದೇ ಎಂದು ಪ್ರಶ್ನಿಸಿತು. ಇದಕ್ಕೆ ಹೆಚ್ಚುವರಿ ಅಡ್ವೋಕೇಟ್ ಜನರಲ್ ಉತ್ತರಿಸಿ, ಜೂ.12ರವರೆಗೆ ಎಚ್ಎಸ್ಆರ್ಪಿ ಅಳವಡಿಸದ ವಾಹನ ಸವಾರರ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಭರವಸೆ ನೀಡಿದರು. ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ, ವಿಚಾರಣೆ ಮುಂದೂಡಿತು.
ಆದರೆ, ಎಚ್ಎಸ್ಆರ್ಪಿ ಅಳವಡಿಕೆಗೆ ಅನುಮತಿ ನೀಡಿ ಹೈಕೋರ್ಟ್ ಮಧ್ಯಂತರ ಮಾಡಿ ವಿಚಾರಣೆ ಮುಂದೂಡಿತ್ತು. ಈ ಮಧ್ಯೆ ಸರ್ಕಾರ ಸಹ ಎಚ್ಎಸ್ಆರ್ಪಿ ಅಳವಡಿಕೆಗೆ ಮೇ 31ರವರೆಗೆ ಗಡುವು ವಿಧಿಸಿತ್ತು. ಈ ಹಿನ್ನೆಲೆಯಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿರುವ ಬಿಎನ್ ಡಿ ಎನರ್ಜಿ ಲಿಮಿಟೆಡ್, ಎಚ್ಎಸ್ಆರ್ಪಿ ಅಳವಡಿಕೆ ವಿಧಿಸಿರುವ ಗಡುವು ವಿಸ್ತರಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿತ್ತು.