ಗದಗ:ಹುಬ್ಬಳ್ಳಿಯಲ್ಲಿ ಬಾಲಕಿ ಅತ್ಯಾಚಾರ ಹಾಗೂ ಕೊಲೆಯನ್ನು ಬಿಹಾರದವನು ಬಿಟ್ಟು ಯಾವನೋ ಕರಿಮನೋ, ರಹಿಮನೋ ಮಾಡಿದ್ದರೆ ಶೂಟೌಟ್ ಆಗುತ್ತಿರಲ್ಲ. ಇದೊಂದು ಸರ್ಕಾರಿ ಪ್ರಾಯೋಜಿಕ ಶೂಟೌಟ್ ಎಂದು ಶಾಸಕ, ಮಾಜಿ ಸಚಿವ ಸಿ.ಸಿ. ಪಾಟೀಲ ಆರೋಪಿಸಿದರು.
ಈ ಹಿಂದೆ ಇಂತಹ ಸಾಕಷ್ಟು ಪ್ರಕರಣಗಳು ಆದಾಗ ಏನೂ ಆಗಿಲ್ಲ. ಹಳೇ ಹುಬ್ಬಳ್ಳಿಯಲ್ಲಿ ಪೊಲೀಸ್ ಜೀಪ್ಗೆ ಬೆಂಕಿ ಹಚ್ಚಿ, ಜೀಪ್ ಮೇಲೆ ಹತ್ತಿ ಕುಣಿದಾಡಿದರು. ಕಾಂಗ್ರೆಸ್ ಸರ್ಕಾರ ಅಂತವರ ಪ್ರಕರಣ ವಾಪಸ್ ತೆಗೆದುಕೊಂಡಿತು. ಇಂತವರ ಕೈಯಲ್ಲಿ ಸಂವಿಧಾನ ಪುಸ್ತಕ. ನಾನು ನಾಲ್ಕು ಬಾರಿ ಶಾಸಕ ಆಗಿದ್ದೀನಿ, ಇಂತಹ ಸರ್ಕಾರ ಎಂದೂ ನೋಡಿಲ್ಲ ಎಂದು ಕಿಡಿಕಾರಿದರು.ಈ ಸರ್ಕಾರದಲ್ಲಿ ಯಾವ ಗಂಡಸರ ಬಳಿ ಪಿಸ್ತೂಲ್ ಇರಲಿಲ್ಲವಾ? ಎಲ್ಲೋ ಕರಕೊಂಡು ಹೋಗಿ ಆ ಆರೋಪಿಗೆ ಒಬ್ಬ ಹೆಣ್ಣುಮಗಳ ಕಡೆ ಫೈರ್ ಮಾಡಿಸಿದ್ದಾರೆ. ಪೊಲೀಸರು ತಮ್ಮ ಪಿಸ್ತೂಲ್ಗಳನ್ನು ಆಯುಧ ಪೂಜೆ ದಿನ ಪೂಜೆ ಮಾಡಲಿಕ್ಕೆ ಇಟ್ಟಿದ್ದರಾ? ಎಂದು ಪ್ರಶ್ನಿಸಿದರು.
ಕಾನೂನಾತ್ಮಕವಾಗಿ ಏನೇ ಆಗಲಿ. ಆದರೆ ಇಂತಹ ಕೃತ್ಯ ಎಸಗುವರಿಗೆ ಭಯ ಹುಟ್ಟುವಂತೆ ಮಾಡಿರೋ ಪಿಎಸ್ಐ ಅನ್ನಪೂರ್ಣಗೆ ಸೆಲ್ಯೂಟ್ ಹೇಳುವೆ ಎಂದು ಶ್ಲಾಘಿಸಿದರು.ಹುಬ್ಬಳ್ಳಿ ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಒಂದು ವರ್ಷವಾಗಿದೆ. ಸ್ಪೇಶಲ್ ಕೋರ್ಟ್ ಸ್ಥಾಪಿಸಿ ಆರೋಪಿಗೆ ಶಿಕ್ಷೆಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.