ವಿಶ್ವನಾಥ ಮಲೇಬೆನ್ನೂರು
ನಗರದಲ್ಲಿ ಹಲವಾರು ವರ್ಷದಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಂಪರ್ ಆಫರ್ ನೀಡುವುದರೊಂದಿಗೆ ಅತ್ಯಧಿಕ ಪ್ರಮಾಣದ ಆಸ್ತಿ ತೆರಿಗೆ ವಸೂಲಿಗೆ ಬಿಬಿಎಂಪಿ ಮಾಸ್ಟರ್ ಪ್ಲಾನ್ ರೂಪಿಸಿದೆ.
ಬಿಬಿಎಂಪಿಯೂ ಈ ಬಾರಿಗೆ ಆಸ್ತಿ ತೆರಿಗೆ ಸಂಗ್ರಹಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು, ಈ ನಿಟ್ಟಿನಲ್ಲಿ ಹಲವು ಸರ್ಕಸ್ ಮಾಡುತ್ತಿದೆ. ಇದರ ಫಲವಾಗಿ ಈಗಾಗಲೇ ಕಳೆದ ವರ್ಷಕ್ಕಿಂತ ₹500 ಕೋಟಿಗೂ ಅಧಿಕ ಪ್ರಮಾಣದ ಆಸ್ತಿ ತೆರಿಗೆ ಸಂಗ್ರಹಿಸಿದೆ. ಇದೀಗ ಬಾಕಿ ವಸೂಲಿಗೆ ಇನ್ನಷ್ಟು ರಿಯಾಯಿತಿ ನೀಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದ್ದು, ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಅದರಲ್ಲಿ ಬಿಬಿಎಂಪಿಯ 2020ರ ಕಾಯ್ದೆಯಲ್ಲಿ ಆಸ್ತಿ ತೆರಿಗೆ ಸಂಬಂಧಿಸಿದಂತೆ ಕೆಲವು ನ್ಯೂನ್ಯತೆಗಳಿಗೆ ತಿದ್ದುಪಡಿ ಸಹ ಒಳಗೊಂಡಿದೆ.ಆಸ್ತಿ ತೆರಿಗೆಗೆ ಓಟಿಎಸ್ ಆಫರ್?:
ದಂಡ ಪ್ರಮಾಣ ಇಳಿಕೆ:
ಈ ಸೌಲಭ್ಯವನ್ನು ವಸತಿ ಕಟ್ಟಡಗಳಿಗೆ ಮಾತ್ರ ನೀಡುವುದಕ್ಕೆ ಚರ್ಚೆ ನಡೆಸಲಾಗಿತ್ತು. ಆದರೆ, ಇದರಿಂದ ಸಮಸ್ಯೆ ಆಗಲಿದೆ. ಹಾಗಾಗಿ, ವಸತಿ ಮತ್ತು ವಾಣಿಜ್ಯ ಕಟ್ಟಡ ಎರಡಕ್ಕೂ ಅನ್ವಯವಾಗುವಂತೆ ಕ್ರಮ ಕೈಗೊಳ್ಳುವುದಕ್ಕೆ ಚರ್ಚೆ ನಡೆಸಲಾಗಿದೆ.
ಬಡ್ಡಿ ಅಥವಾ ದಂಡ ವಸೂಲಿ:ಬಡ್ಡಿ ಮತ್ತು ದಂಡ ಮೊತ್ತ ಹೆಚ್ಚಾಗಿದೆ. ಈ ಪ್ರಮಾಣ ಕಡಿಮೆ ಮಾಡಬೇಕೆಂದು ಆಸ್ತಿ ತೆರಿಗೆ ಸುಸ್ತಿದಾರರು ಒತ್ತಾಯಿಸುತ್ತಿದ್ದಾರೆ. ಈ ಬಗ್ಗೆ ನಗರದ ಶಾಸಕರು ಮತ್ತು ಸಚಿವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಸಕ್ತ ಸುಸ್ತಿದಾರರಿಗೆ ಒಂದು ಬಾರಿ ಅವಕಾಶ ನೀಡಿ ಬಡ್ಡಿ ಅಥವಾ ದಂಡ ಮೊತ್ತವನ್ನು ಮಾತ್ರ ವಸೂಲಿ ಮಾಡುವ ಬಗ್ಗೆ ಚರ್ಚೆ ನಡೆಸಲಾಗಿದೆ. ಆದರೆ, ಯಾವುದು ಎಂಬುದನ್ನು ಸರ್ಕಾರದ ಮಟ್ಟದಲ್ಲಿ ತೀರ್ಮಾನಿಸಲಾಗುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಗಳು ‘ಕನ್ನಡಪ್ರಭ’ಕ್ಕೆ ಮಾಹಿತಿ ನೀಡಿದ್ದಾರೆ.