ಜ್ಞಾನಸುಧಾ ಸ್ಕಾಲರ್‌ಶಿಪ್‌ಗೆ ಭಾರೀ ಸ್ಪಂದನೆ: ಸಂಸದ ಡಾ. ಸುಧಾಕರ್‌

KannadaprabhaNewsNetwork |  
Published : Jun 27, 2026, 01:45 AM IST
      ಸಿಕೆಬಿ-4 ಸಂಸದ ಡಾ.ಕೆ.ಸುಧಾಕರ್ | Kannada Prabha

ಸಾರಾಂಶ

ಜ್ಞಾನಸುಧಾ ಸ್ಕಾಲರ್‌ಶಿಪ್ ನೋಂದಣಿಗೆ ನಮ್ಮ ನಿರೀಕ್ಷೆಗೂ ಮೀರಿ ಅಭೂತಪೂರ್ವ ಪ್ರತಿಕ್ರಿಯೆ ಬಂದಿದ್ದು, ಸುಮಾರು 20,000ಕ್ಕೂ ಹೆಚ್ಚು ಅರ್ಜಿಗಳು ಸ್ವೀಕೃತವಾಗಿವೆ. ನಮ್ಮ ಕ್ಷೇತ್ರದ ವಿದ್ಯಾರ್ಥಿಗಳಲ್ಲಿ ಕಂಡುಬಂದಿರುವ ಈ ಶೈಕ್ಷಣಿಕ ಉತ್ಸಾಹ ನಿಜಕ್ಕೂ ಹೆಮ್ಮೆ ತಂದಿದೆ. ಯಾವೊಬ್ಬ ಅರ್ಹ ವಿದ್ಯಾರ್ಥಿಯೂ ಜ್ಞಾನಸುಧಾ ಸ್ಕಾಲರ್‌ಶಿಪ್‌ನಿಂದ ವಂಚಿತರಾಗಬಾರದು ಎಂಬುದು ನಮ್ಮ ಮುಖ್ಯ ಉದ್ದೇಶವಾಗಿದೆ.

ಕನ್ನಡಪ್ರಭ ವಾರ್ತೆ, ಚಿಕ್ಕಬಳ್ಳಾಪುರ:

ಜ್ಞಾನಸುಧಾ ಸ್ಕಾಲರ್‌ಶಿಪ್ ನೋಂದಣಿಗೆ ನಮ್ಮ ನಿರೀಕ್ಷೆಗೂ ಮೀರಿ ಅಭೂತಪೂರ್ವ ಪ್ರತಿಕ್ರಿಯೆ ಬಂದಿದ್ದು, ಸುಮಾರು 20,000ಕ್ಕೂ ಹೆಚ್ಚು ಅರ್ಜಿಗಳು ಸ್ವೀಕೃತವಾಗಿವೆ. ನಮ್ಮ ಕ್ಷೇತ್ರದ ವಿದ್ಯಾರ್ಥಿಗಳಲ್ಲಿ ಕಂಡುಬಂದಿರುವ ಈ ಶೈಕ್ಷಣಿಕ ಉತ್ಸಾಹ ನಿಜಕ್ಕೂ ಹೆಮ್ಮೆ ತಂದಿದೆ. ಯಾವೊಬ್ಬ ಅರ್ಹ ವಿದ್ಯಾರ್ಥಿಯೂ ಜ್ಞಾನಸುಧಾ ಸ್ಕಾಲರ್‌ಶಿಪ್‌ನಿಂದ ವಂಚಿತರಾಗಬಾರದು ಎಂಬುದು ನಮ್ಮ ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ, ಪ್ರತಿಯೊಂದು ಅರ್ಜಿಯ ದಾಖಲಾತಿಗಳ ಪರಿಶೀಲನೆಯನ್ನು ಅತ್ಯಂತ ಕ್ರಮಬದ್ಧವಾಗಿ ಮತ್ತು ಪಾರದರ್ಶಕವಾಗಿ ಮಾಡಲಾಗುತ್ತಿದೆ ಎಂದು ಸಂಸದ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಕಾರ್ಯಕ್ರಮ ಮುಂದೂಡಿಕೆ: ಈ ಪರಿಶೀಲನಾ ಪ್ರಕ್ರಿಯೆಯನ್ನು ಯಾವುದೇ ಲೋಪದೋಷಗಳಿಲ್ಲದೆ ಅತ್ಯಂತ ನಿಖರವಾಗಿ ಪೂರ್ಣಗೊಳಿಸಲು ಇನ್ನೂ ಕೆಲವು ದಿನಗಳ ಕಾಲಾವಕಾಶದ ಅಗತ್ಯವಿದೆ. ಈ ಕಾರಣದಿಂದಾಗಿ, ಜೂ. 27ರಂದು ನಡೆಯಬೇಕಿದ್ದ ಸ್ಕಾಲರ್‌ಶಿಪ್ ವಿತರಣೆ ಕಾರ್ಯಕ್ರಮವನ್ನು ಕೆಲವು ದಿನಗಳ ಕಾಲ ಮುಂದೂಡಲಾಗಿದೆ.

ದಾಖಲೆಗಳ ಪರಿಶೀಲನೆ: ಅರ್ಜಿ ಸಲ್ಲಿಸಿರುವ ಬಹುತೇಕ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳನ್ನು ಯಶಸ್ವಿಯಾಗಿ ಸಲ್ಲಿಸಿದ್ದಾರೆ. ಇನ್ನು ಕೆಲವು ವಿದ್ಯಾರ್ಥಿಗಳ ಅರ್ಜಿಗಳ ಅಂತಿಮ ಪರಿಶೀಲನೆಗೆ ಕೆಲವು ಪೂರಕ ದಾಖಲೆಗಳ ಅಗತ್ಯವಿದ್ದು, ನಮ್ಮ ತಂಡ ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ.

ಸ್ಕಾಲರ್‌ಶಿಪ್ ವಿತರಣೆಯ ಪರಿಷ್ಕೃತ ದಿನಾಂಕ ಹಾಗೂ ಇನ್ನೂ ಹೆಚ್ಚಿನ ಮಾಹಿತಿಯನ್ನು ಶೀಘ್ರದಲ್ಲೇ ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೇನೆ. ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಕೈಗೊಂಡಿರುವ ಈ ಪಾರದರ್ಶಕ ಪ್ರಕ್ರಿಯೆಗೆ ನಿಮ್ಮ ಸಹಕಾರ ಹೀಗೆಯೇ ಇರಲಿ. ನಿಮ್ಮ ಸಹಕಾರಕ್ಕೆ ಧನ್ಯವಾದಗಳು ಎಂದು ಸಂಸದ ಡಾ.ಕೆ. ಸುಧಾಕರ್ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಿಕೆಬಿ-4 ಸಂಸದ ಡಾ.ಕೆ.ಸುಧಾಕರ್

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುತ್ತತ್ತಿಯಲ್ಲಿ ಆಯುರ್ವೇದ ವೈದಾಧಿಕಾರಿ ಆತ್ಮಹತ್ಯೆ
ವಿಧಾನಸೌಧ ವ್ಯಾಪಾರಿ ಕೇಂದ್ರವಾಗಿ ಪರಿವರ್ತನೆ: ಹೆಚ್.ವಿಶ್ವನಾಥ್