ಮಾಗಡಿ: ಶಾಸಕ ಬಾಲಕೃಷ್ಣ ಸಹೋದರ ಹರ್ಷಿತ್ ಗೌಡ (ರಾಜು) 40 ಎಕರೆಗೂ ಹೆಚ್ಚು ಜಮೀನಿನಲ್ಲಿ ರಾಗಿ ಹಾಗೂ ಭತ್ತ ಬೆಳೆದು ತಾಲೂಕಿನ ಅತಿ ಹೆಚ್ಚು ರಾಗಿ ಬೆಳೆ ಬೆಳೆದ ರೈತ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಮಾಗಡಿ: ಶಾಸಕ ಬಾಲಕೃಷ್ಣ ಸಹೋದರ ಹರ್ಷಿತ್ ಗೌಡ (ರಾಜು) 40 ಎಕರೆಗೂ ಹೆಚ್ಚು ಜಮೀನಿನಲ್ಲಿ ರಾಗಿ ಹಾಗೂ ಭತ್ತ ಬೆಳೆದು ತಾಲೂಕಿನ ಅತಿ ಹೆಚ್ಚು ರಾಗಿ ಬೆಳೆ ಬೆಳೆದ ರೈತ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ತಾಲೂಕಿನ ಹುಲಿಕಟ್ಟೆಯಲ್ಲಿ ಶಾಸಕ ಬಾಲಕೃಷ್ಣರ ಚಿಕ್ಕಪ್ಪ, ಬಿಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ದಿ.ನಾರಾಯಣಸ್ವಾಮಿ ಪುತ್ರ ಹರ್ಷಿತ್ಗೌಡ ತಂದೆಯ ಆಸೆಯಂತೆ ಕೃಷಿಯಲ್ಲಿ ತೊಡಗಿಕೊಂಡು ಪ್ರಸಕ್ತ ವರ್ಷದಲ್ಲಿ 40 ಎಕರೆಗೂ ಹೆಚ್ಚು ಜಮೀನಿನಲ್ಲಿ ಎಂಆರ್ಆರ್ ತಳಿಯ ರಾಗಿ ಬೆಳೆದಿದ್ದು ಹೊಲ ಉಳುಮೆಗೆ ಮಾತ್ರ ಟ್ರ್ಯಾಕ್ಟರ್ ಬಳಸಿದ್ದು ಬಿಟ್ಟರೆ ರಾಗಿ ಚೆಲ್ಲಲು, ಕುಂಟೆ ಹೊಡೆಯಲು ಎತ್ತುಗಳನ್ನೇ ಬಳಸಿರುವುದು ವಿಶೇಷ. ಯಾವುದೇ ರಾಸಾಯನಿಕ ಗೊಬ್ಬರ ಬಳಸದೆ ಹಸುವಿನ ಗೊಬ್ಬರ ಹಾಕಿ ಸಮೃದ್ಧ ಬೆಳೆ ಬೆಳೆದಿದ್ದು ಈಗ ಕಣದಲ್ಲಿ 30 ಮಾರು ಉದ್ದದ ಎರಡು ಮೆದೆಗಳು ಆಕರ್ಷಣೀಯವಾಗಿವೆ. ರಾಗಿ ಕುಯ್ಯಲು ಯಾವುದೇ ಯಂತ್ರಗಳನ್ನು ಬಳಸದೆ ಅಳುಗಳನ್ನೇ ಬಳಸಿ ರಾಗಿ ಕಟಾವು ಮಾಡಿಸಿದ್ದಾರೆ. ದೊಡ್ಡ ಮೆದೆ ಹಾಕಿ ಇನ್ನೊಂದು ವಾರದಲ್ಲಿ ಹಣ ಮಾಡಲು ಆರಂಭಿಸಿ ಒಂದು ತಿಂಗಳ ಸತತ ಕಾಲ ಕಣ ಮಾಡಿ 400 ಮೂಟೆ ರಾಗಿ ತೆಗೆಯುವ ನಿರೀಕ್ಷೆ ಇದೆ. ಮಾದರಿ ಕೃಷಿಕರಾಗಿ ಪೂರ್ವಿಕರ ಕುಲಕಸುಬು ವ್ಯವಸಾಯವನ್ನು ಮುಂದುವರಿಸಿದ್ದಾರೆ.
ಕೋಟ್..............
40 ಎಕರೆ ಜಮೀನಿನಲ್ಲಿ ಎಂಆರ್ಆರ್ ತಳಿಯ ರಾಗಿ ಬೆಳೆದಿದ್ದು ಉತ್ತಮ ಬೆಳೆ ಬಂದಿದೆ. 30 ಮಾರು ಉದ್ದದ ರಾಗಿಮೆದೆ ಹಾಕಿದ್ದು, 400 ಮೂಟೆಗೂ ಹೆಚ್ಚು ರಾಗಿ ಫಸಲು ನಿರೀಕ್ಷೆ ಇದೆ. ಆಳುಗಳ ಸಮಸ್ಯೆ ನಡುವೆಯೂ ಕೈಯಲ್ಲೇ ಕಟಾವು ಮಾಡಿಸಿದ್ದೇವೆ. ಸಹೋದರರಾದ ಶಾಸಕ ಬಾಲಕೃಷ್ಣ ಹಾಗೂ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಶೋಕ್ ಮಾರ್ಗದರ್ಶನದಲ್ಲಿ ರಾಗಿ ಹಾಗೂ ಸೋನಾಮಸೂರಿ ಭತ್ತ ಬೆಳೆದಿರುವೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.