ಭದ್ರಾವತಿ: ಸಾಗರ ಗಡಿಭಾಗದ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹೋರಾಟಗಾರರಿಗೆ ಬೆಂಬಲ ಸೂಚಿಸಿ ಶರಾವತಿ ಪಂಪ್ಡ್ ಸ್ಟೋರೇಜ್ ವಿರುದ್ಧ ಗುರುವಾರ ನಗರದಲ್ಲಿ ಪರಿಸರಪ್ರೇಮಿಗಳು ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು. ಬಳಿಕ ತಹಸೀಲ್ದಾರ್ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಈ ಯೋಜನೆಯನ್ನು ಖಾಸಗಿ ಸಹಭಾಗಿತ್ವದಲ್ಲಿ ಕೈಗೆತ್ತಿಕೊಂಡಿರುವುದು ಸರಿಯಲ್ಲ. ಅಲ್ಲದೆ ಯೋಜನೆಯಿಂದ ಯಾವುದೇ ರೀತಿ ಲಾಭವಿಲ್ಲ. ನಷ್ಟದ ಜೊತೆಗೆ ಪರಿಸರ ನಾಶವಾಗಲಿದೆ ತಕ್ಷಣ ಜಿಲ್ಲಾಧಿಕಾರಿಗಳು ಈ ಸಂಬಂಧ ಗಮನ ಹರಿಸಿ ಯೋಜನೆ ಸ್ಥಗಿತಗೊಳಿಸಲು ಸರ್ಕಾರಕ್ಕೆ ವರದಿ ಸಲ್ಲಿಸಬೇಕೆಂದು ಮನವಿಯಲ್ಲಿ ಕೋರಲಾಯಿತು.
ತಹಸೀಲ್ದಾರ್ ಮಂಜಾನಾಯ್ಕ ಅವರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಪರಿಸರಪ್ರೇಮಿಗಳು ಹೋರಾಟದಲ್ಲಿ ಪಾಲ್ಗೊಂಡಿದ್ದರು.