ಅರಸೀಕೆರೆ: ಮಾನವನ ಬದುಕು ಮತ್ತು ಜೀವಕ್ಕೆ ಉತ್ತಮ ಪರಿಸರ ನಿರ್ವಹಣೆಯಿಂದ ಮಾತ್ರ ಸಾಧ್ಯ ಎಂದು ಹಬ್ಬನಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಸಂತ ಕುಮಾರಿ ಅಭಿಪ್ರಾಯಪಟ್ಟರು.
ಪತ್ರಕರ್ತ ಎಚ್. ಡಿ. ಸೀತಾರಾo ಶ್ರೀ ಧರ್ಮಸ್ಥಳ ಕ್ಷೇತ್ರವು ಹಲವು ಜನಪರ ಯೋಜನೆಗಳನ್ನು ಕೆಲಸಗಳನ್ನು ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಮಾಡುತ್ತಾ ಬಂದಿದೆ. ಮದ್ಯವ್ಯಸನಿಗಳನ್ನು ಅದರಿಂದ ಹೊರ ತರುವಂತಹ ಶಿಬಿರಗಳು ಶ್ಲಾಘನೀಯ. ಶೈಕ್ಷಣಿಕ ಸಾಮಾಜಿಕ ಆರ್ಥಿಕವಾಗಿ ಸಮಾಜವನ್ನು ಅದರಲ್ಲೂ ಮಹಿಳೆಯರನ್ನು ಸದೃಢರನ್ನಾಗಿ ಮಾಡುವಲ್ಲಿ ಅನೇಕ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಮಾಡಿ ಯಶಸ್ವಿ ಆಗುತ್ತಿದೆ. ಸ್ವಾಸ್ಥ್ಯ ಸಮಾಜಕ್ಕಾಗಿ ತಂಬಾಕು ಮತ್ತು ಮಧ್ಯದಿಂದ ದೂರ ಇರುವಂತೆ ಸಮಾಜವನ್ನು ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಸಹ ನಿರಂತರವಾಗಿ ನಡೆಯುತ್ತಿದೆ ಎಂದರು.
ಧರ್ಮಸ್ಥಳ ಗ್ರಾಮ್ಯ ಅಭಿವೃದ್ಧಿ ಯೋಜನೆ ಕೃಷಿ ಅಧಿಕಾರಿ ಗುರುಮೂರ್ತಿ ಶ್ರೀ ಕ್ಷೇತ್ರದ ವತಿಯಿಂದ ಕೃಷಿಗೆ ಸಂಬಂಧಿಸಿದಂತೆ ಮತ್ತು ಕೆರೆಕಟ್ಟೆಗಳ ಅಭಿವೃದ್ಧಿ ದೇವಾಲಯಗಳ ಅಭಿವೃದ್ಧಿ ಮಹಿಳೆಯರಿಗೆ ಸ್ವಾವಲಂಬಿಗಳಾಗಲು ಆರ್ಥಿಕ ನೆರವು ಆರೋಗ್ಯ ತಪಾಸಣಾ ಶಿಬಿರಗಳು ಶಾಲೆಗಳಿಗೆ ಅಗತ್ಯ ಪೀಠ ಪ್ರಕರಣ ಶಿಕ್ಷಕರ ನೇಮಕ ಮೊದಲಾದವನ್ನು ಮಾಡುತ್ತಾ ಬರುತ್ತಿದೆ ಎಂದರು.ಶಾಲಾ ಮುಖ್ಯ ಶಿಕ್ಷಕ ಶಿವಣ್ಣ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಜನಪದ ಕಾರ್ಯಗಳನ್ನು ಮಾಡುತ್ತಿದೆ. ಇಂದು ನಮ್ಮ ಮಕ್ಕಳಲ್ಲಿ ಸಹ ಪರಿಸರ ಬಗ್ಗೆ ಒಂದು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಮಾಡಿರುವುದು ನಿಜಕ್ಕೂ ಸಂತೋಷ ತಂದಿದೆ ಎಂದರು.
ಧರ್ಮಸ್ಥಳ ಶ್ರೀ ಕ್ಷೇತ್ರದ ಒಕ್ಕೂಟದ ಅಧ್ಯಕ್ಷೆ ಮಹಾಲಕ್ಷ್ಮಿ, ಮೇಲ್ವಿಚಾರಕಿ ಸುನೀತ, ಗ್ರಾಮಸ್ಥರು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.