ಮಾನವ ಹಕ್ಕುಗಳು ಪ್ರಜಾಪ್ರಭುತ್ವದ ಪ್ರತೀಕ: ಪ್ರಶಾಂತ ನೀಲಾವರ

KannadaprabhaNewsNetwork |  
Published : Dec 25, 2024, 12:50 AM IST
24ರೆಡ್‌ಕ್ರಾಸ್ | Kannada Prabha

ಸಾರಾಂಶ

ತೆಂಕನಿಡಿಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಇಲ್ಲಿನ ರೆಡ್ ರಿಬ್ಬನ್ ಕ್ಲಬ್ ಕಿರಿಯ ಯುವ ರೆಡ್ ಕ್ರಾಸ್ ಘಟಕ ಆಶ್ರಯದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ವಿಶ್ವದ ಚರಿತ್ರೆಯಲ್ಲಿ ಮಾನವ ಹಕ್ಕುಗಳ ಹೋರಾಟಕ್ಕೆ ಬಹುದೊಡ್ಡ ಇತಿಹಾಸವಿದೆ. ಇಂದು ನಾವು ಬದುಕುವ ನೆಮ್ಮದಿಯ ಬದುಕಿಗೆ ಮಾನವ ಹಕ್ಕುಗಳೇ ತಳಹದಿ. ಮಾನವ ಹಕ್ಕುಗಳು ಪ್ರಜಾಪ್ರಭುತ್ವದ ನೈಜ ಪ್ರತೀಕ ಎಂದು ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರಶಾಂತ ನೀಲಾವರ ಹೇಳಿದರು.

ಅವರು ಸೋಮವಾರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಇಲ್ಲಿನ ರೆಡ್ ರಿಬ್ಬನ್ ಕ್ಲಬ್ ಕಿರಿಯ ಯುವ ರೆಡ್ ಕ್ರಾಸ್ ಘಟಕ ಆಶ್ರಯದಲ್ಲಿ ಆಯೋಜಿಸಲಾದ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.ಕಾರ್ಯಕ್ರಮವನ್ನು ಜಿಲ್ಲಾ ರೆಡ್ ಕ್ರಾಸ್ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಉದ್ಘಾಟಿಸಿ, ಮಾತನಾಡಿದರು.ಕಾಲೇಜಿನ ಪ್ರಾಂಶುಪಾಲೆ ಲೀಲಾಬಾಯಿ ಭಟ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ರೆಡ್‌ಕ್ರಾಸ್ ಖಜಾಂಚಿ ರಮಾದೇವಿ, ನಿಕಟಪೂರ್ವ ಖಜಾಂಚಿ ಚಂದ್ರಶೇಖರ್, ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.ಜಿಲ್ಲಾ ರೆಡ್ ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಿರಿಯ ರೆಡ್‌ಕ್ರಾಸ್ ಸ್ವಯಂ ಸೇವಕಿಯರು ಪ್ರಾರ್ಥಿಸಿದರು. ಉಪನ್ಯಾಸಕಿ ಪ್ರಿಯಕಾರಿಣಿ ಜೈನ್ ನಿರೂಪಿಸಿದರು. ರೆಡ್ ರಿಬ್ಬನ್ ಕ್ಲಬ್ ಸಂಯೋಜಕಿ ಸುಮನಾ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ