ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನಗರದ ಜಿಲ್ಲಾ ಪಂಚಾಯಿತಿ ಬಳಿಯ ಕ್ರೀಡಾ ಭವನದ ಸಭಾಂಗಣದಲ್ಲಿ, ಗುರುವಾರ ವಿಶ್ವ ಪರಿಸರ ದಿನಾಚರಣೆ ಘೋಷವಾಕ್ಯ ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು ಕುರಿತು, ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಚಿತ್ರಕಲೆ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭೂಮಿಯ ಮೇಲೆ ಸಕಲ ಜೀವರಾಶಿಗಳಿಗೆ ಗಾಳಿ, ಬೆಳಕು, ನೀರು ಸಮಾನವಾಗಿ ದೊರಕಬೇಕು. ಶುದ್ದವಾದ ಗಾಳಿ,ಬೆಳಕು, ನೀರು ಮಲಿನಗೊಂಡಿವೆ. ಇದಕ್ಕೆ ಮುಖ್ಯ ಕಾರಣ ಪೆಟ್ರೋಲಿಯಂ ಉತ್ಪನ್ನಗಳ ದಹನ ಹಾಗೂ ಸಿಂಥಟಿಕ್ ಪ್ಲಾಸ್ಟಿಕ್ ಬಳಕೆ ಆಗಿದೆ. ಪೆಟ್ರೋಲಿಯಂ ಉತ್ಪನ್ನಗಳ ಮಿತವಾದ ಬಳಕೆ ಹಾಗೂ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಪೂರ್ಣವಾಗಿ ತಿರಸ್ಕರಿಸಿ ಪರಿಸರ ರಕ್ಷಣೆಗೆ ಎಲ್ಲರೂ ಒತ್ತು ನೀಡುವಂತೆ ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಮಂಜುನಾಥ, ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಪರಿಸರ ರಕ್ಷಣೆ ಹಾಗೂ ಸ್ವಚ್ಛತೆಯ ಪರಿಕಲ್ಪನೆಯನ್ನು ಮೂಡಿಸಲಾಗುತ್ತಿದೆ. ಗಿಡ ಮರಗಳು ಪರಿಸರ ಸಮತೋಲನ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಮಕ್ಕಳು ತಪ್ಪದೇ ಗಿಡ ಮರಗಳಿಗೆ ನೀರುಣಿಸುವ ಕೆಲಸ ಮಾಡಬೇಕು ಎಂದು ಹೇಳಿದರು.ನಗರಸಭೆ ಪರಿಸರ ಅಧಿಕಾರಿ ಜಾಫರ್ ಮಾತನಾಡಿ, ಪ್ಲಾಸ್ಟಿಕ್ ದಹನದಿಂದ ಕಾರ್ಸೋಜನಿಕ್ ಅನಿಲ ಪರಿಸರ ಸೇರುತ್ತದೆ. ಇದು ಅಪಾಯಾರಿಯಾಗಿದ್ದು ಮನುಷ್ಯರಲ್ಲಿ ಹಲವಾರು ಕಾಯಿಲೆಗಳಿಗೆ ಕಾರಣವಾಗುತ್ತದೆ. ಪ್ರತಿಯೊಬ್ಬರು ಮನೆಯಲ್ಲಿ ಹಸಿ ಹಾಗೂ ಒಣ ಕಸಗಳನ್ನು ಬೇರ್ಪಡಿಸಿ ಪೌರ ಕಾರ್ಮಿಕರಿಗೆ ನೀಡಬೇಕು ಎಂದು ಹೇಳಿದರು.
ಜಿಲ್ಲಾ ಪರಿಸರ ಅಧಿಕಾರಿ ಆಸಿಫ್ ಖಾನ್ ಮಾತನಾಡಿ, ಪ್ಲಾಸ್ಟಿಕ್ ಉತ್ಪನ್ನಗಳನ್ನು ಕಡಿಮೆ ಬಳಸುವುದು, ಮರು ಬಳಸುವುದು, ಪುನರ್ ಬಳಸುವುದರಿಂದ ಪರಿಸರ ಮಾಲಿನ್ಯ ತಡೆಗಟ್ಟಬಹುದು ಎಂದು ಹೇಳಿದರು.
10ನೇ ತರಗತಿ ವಿಭಾಗದಲ್ಲಿ ಸರ್ಕಾರಿ ಪ್ರೌಢಶಾಲೆಯ ನಂದಿನಿ.ಎಸ್ ಸಮಾಧಾನಕರ, ಎಸ್ಆರ್ಎಸ್ ಶಾಲೆಯ ಕಿಶೋರ್.ವಿ.ಎಸ್ ತೃತೀಯ, ರಿಜನಲ್ ಇಂಗ್ಲೀಷ್ ಶಾಲೆ ಹುರಿಯಾ ಅರ್ಫನ್ ದ್ವೀತಿಯ ಬಹುಮಾನ, ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಪ್ರಿಯಾಂಕ.ಎಂ ಪ್ರಥಮ ಬಹುಮಾನಕ್ಕೆ ಭಾಜನಾರಾದರು. ಸಭೆಯಲ್ಲಿ ಪರಿಸರ ಸ್ನೇಹಿ ಬಟ್ಟೆ ಬ್ಯಾಗುಗಳನ್ನು ಬಿಡುಗಡೆ ಗೊಳಿಸಲಾಯಿತು. ಉಪ ಪರಿಸರಾಧಿಕಾರಿ ರಾಜೇಶ್, ಕಲಾ ಚೈತನ್ಯ ಸಂಸ್ಥೆಯ ನಾಗರಾಜ ಬೇಂದ್ರೆ ಸೇರಿದಂತೆ ವಿವಿಧ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.