- ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ನಡೆದ ಸುವರ್ಣ ಮಹೋತ್ಸವದಲ್ಲಿ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಕನ್ನಡಪ್ರಭ ವಾರ್ತೆ, ಶೃಂಗೇರಿ
ಪಟ್ಟಣದ ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ನಡೆದ 50 ನೇ ಸುವರ್ಣ ಮಹೋತ್ಸವ, ಸುವರ್ಣ ಪಟ್ಟಾಭಿ ಷೇಕದಲ್ಲಿ ಸತ್ಸಂಗ ಕಾರ್ಯಕ್ರಮ, ಚುಂಚೋತ್ಸವ ಹಾಗೂ ಸಾಂಸ್ಕೃತಿಕ ಸಮಾಗಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಜನ, ಸಾಮಾಜಿಕ ಉನ್ನತಿ ಹಾಗೂ ದೇಶದ ಉನ್ನತಿ ಬಯಸುವುದೇ ನಿಜವಾದ ಧರ್ಮ. ಮಾನವೀಯ, ನೈತಿಕ ಮೌಲ್ಯ ಗಳನ್ನು ಎತ್ತಿ ಹಿಡಿಯಬೇಕು. ಹಿಂದಿನ ಋಷಿಮುನಿಗಳು ನೀಡಿದ ಜ್ಞಾನದ ಮಾರ್ಗದಲ್ಲೆ ಮುನ್ನಡೆಯಬೇಕು. ಇಲ್ಲದಿದ್ದರೆ ಸಾಧನೆ ಮಾಡಲು ಸಾದ್ಯವಿಲ್ಲ. ಯುವಪೀಳಿಗೆ ಶಿಸ್ತಿನ ಜೊತೆಗೆ ಅಗತ್ಯವಾಗಿ ಧಾರ್ಮಿಕ ಮೌಲ್ಯಗಳನ್ನು ತಿಳಿದು ಕೊಳ್ಳಬೇಕು. ಹಿರಿಯರು ಇದರ ಬಗ್ಗೆ ಮಾರ್ಗದರ್ಶನ ನೀಡಿ ಹೇಳಿ ಕೊಡಬೇಕು.ಮಕ್ಕಳಲ್ಲಿ ಉತ್ತಮ ಸಂಸ್ಕಾರಗಳನ್ನು ಬೆಳೆಸಬೇಕು. ಅವರಲ್ಲಿ ಜ್ಞಾನದ ಅರಿವು ಮೂಡಿಸಬೇಕು. ನಾಟ್ಯ ಪರಂಪರೆ ಅದ್ವೈತ ಪರಂಪರೆ ಹಿನ್ನೆಲೆಯ ಮೂಲಕ ಬಂದಿದೆ. ದ್ವೈತ, ಅದ್ವೈತ, ವಿಶಿಷ್ಟಾದ್ವೈತಗಳಲ್ಲಿ ಭಿನ್ನತೆಯಿದ್ದರೂ ಎಲ್ಲವು ಒಂದೇ. ನಮ್ಮ ಧರ್ಮ, ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು ಎಂದರು.
ಕಾರ್ಯಕ್ರಮದಲ್ಲಿ ಶಾಸಕ ಟಿ.ಡಿ.ರಾಜೇಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಧರ್ಮಪಾಲನಾಥ ಸ್ವಾಮೀಜಿ, ಶೃಂಗೇರಿ ಆದಿಚುಂಚನಗಿರಿ ಶಾಖಾ ಮಠದ ಗುಣನಾಥ ಸ್ವಾಮೀಜಿ, ಮಂಗಳನಾಥ ಸ್ವಾಮೀಜಿ, ಚೈತನ್ಯನಾಥ ಸ್ವಾಮೀಜಿ, ಶಿವಪುತ್ರನಾಥ ಸ್ವಾಮೀಜಿ, ಶ್ರೀ ಶೈಲನಾಥ ಸ್ವಾಮೀಜಿ ಉಪಸ್ಥಿತರಿದ್ದರು. --- ಬಾಕ್ಸ್---
ಶೃಂಗೇರಿ: ರಾಜಕೀಯ, ರಾಜಕಾರಣದಲ್ಲಿ ಪರಸ್ಪರ ಸೈದ್ಧಾಂತಿಕ ಸಂಘರ್ಷಗಳಿದ್ದರೂ ರಾಜ್ಯ, ದೇಶದ ಅಬಿವೃದ್ಧಿ ವಿಚಾರದಲ್ಲಿ ಎಲ್ಲಾ ರಾಜಕಾರಣಿಗಳ ಭಾವನೆಗಳು ಒಂದೇ ಆಗಿರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು.
ನಮಗೆ ರಾಮ, ಆಂಜನೇಯನ ಮೇಲೆ ಭಕ್ತಿಯಿದೆ. ರಾಮ ರಾಜ್ಯ ಗಾಂಧಿಜಿಯವರ ಪರಿಕಲ್ಪನೆಯಾಗಿತ್ತು. ಶಾಂತಿ , ಸೌಹಾರ್ದತೆ ಮೂಲಮಂತ್ರವಾಗಿತ್ತು. ಒಕ್ಕಲಿಗರು ಕೃಷಿಕರು ಅನ್ನ ದಾನಿಗಳು, ಅವರ ಕೊಡುಗೆ ಅಪಾರವಾಗಿದೆ. ಸರ್ಕಾರ ಅನೇಕ ಗ್ಯಾರಂಟಿಗಳನ್ನು ನೀಡಿದೆ. ಕಷ್ಟದಲ್ಲಿರುವ ಸಾಮಾನ್ಯ ಜನರಿಗೆ ಸ್ಪಂದಿಸುವುದು ಮುಖ್ಯ ಗುರಿಯಾಗಿದೆ. ಅಧಿಕಾರ ಕೇವಲ ಜನಪ್ರತಿನಿದಿಗಳ ಕೆಲಸವಲ್ಲ. ಜನಹಿತ ಕೆಲಸಗಳು ಮುಖ್ಯ ಎಂದರು.
27 ಶ್ರೀ ಚಿತ್ರ 1-
27 ಶ್ರೀ ಚಿತ್ರ 2- ಶೃಂಗೇರಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ನಡೆದ 50 ನೇ ಸುವರ್ಣ ಮಹೋತ್ಸವ ದಲ್ಲಿ ಸಚಿವ ಕೆ.ಜೆ.ಜಾರ್ಜ ಮಾತನಾಡಿದರು.