ಸೇವಾ ಯೋಜನಾ ಶಿಬಿರ
ವಿದ್ಯಾರ್ಥಿ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡು ಪರಸ್ಪರ ಸ್ನೇಹ, ಸೌಹಾರ್ದತೆಯಿಂದ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬದುಕಬೇಕು ಎಂದು ಪುಷ್ಪಗಿರಿ ಮಹಾಸಂಸ್ಥಾನದ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮಿ ಹೇಳಿದರು.
ತಾಲೂಕಿನ ಮಾದೀಹಳ್ಳಿ ಹೋಬಳಿಯ ಗುರುಪರಂಪರೆಯ ಚಿಲ್ಕೂರು ಗ್ರಾಮದಲ್ಲಿ ಬೇಲೂರು ಸರ್ಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ ನಡೆದ ರಾಷ್ಟ್ರೀಯ ಸೇವಾ ಯೋಜನಾ ಶಿಬಿರದಲ್ಲಿ ಮಾತನಾಡಿ, ಭಾರತವು ಸರ್ವಧರ್ಮಗಳ ರಾಷ್ಟ್ರವಾಗಿದ್ದು ಸಂಸ್ಕೃತಿ, ಕಲೆ, ಪರಂಪರೆ, ಜಾತಿ, ಧರ್ಮಗಳನ್ನು ಒಗ್ಗೂಡಿಸುವ ಶಕ್ತಿ ಹೊಂದಿದೆ. ಭೇದವನ್ನು ಮರೆತು ಸಾಮರಸ್ಯದಿಂದ ಇರುವುದನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶಾಲೆ ಕಾಲೇಜುಗಳಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಸಮನ್ವಯ ಮನೋಭಾವನೆ ಬೆಳೆಯುತ್ತದೆ ಎಂದು ಅಭಿಪ್ರಾಯಪಟ್ಟರು.ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಅತ್ಯಂತ ಮುಖ್ಯವಾದ ವಿಷಯಗಳಲ್ಲಿ ಒಂದಾಗಿದೆ. ಶಾಲೆಯಲ್ಲಿ ಶಿಸ್ತು ಪಾಲಿಸುವುದು ಮುಖ್ಯ. ಶಿಕ್ಷಣದ ವಿದ್ಯಾರ್ಥಿಗಳು ಶಾಲೆಯಲ್ಲಿ ಶಿಸ್ತನ್ನು ಕಲಿಯಬೇಕು. ಏಕೆಂದರೆ ಶಿಸ್ತು ಇಲ್ಲದೆ ವಿದ್ಯಾರ್ಥಿಗಳು ಸುಶಿಕ್ಷಿತರಾಗಲು ಸಾಧ್ಯವಿಲ್ಲ ಎಂದರು.
ಕಾಲೇಜು ಪ್ರಾಂಶುಪಾಲರಾದ ಹರೀಶ್, ಗಾಯಕ ಚಂದನ ಕುಮಾರ್, ಉಪನ್ಯಾಸಕ ಭಕ್ತರ್ ಸಾಬ್, ಲಕ್ಷ್ಮೀನಾರಾಯಣ, ಚಂದ್ರಕಲಾ ಹಾಗೂ ಗ್ರಾಮಸ್ಥರಾದ ರಾಣಿರವಿ, ಚೇತನ್, ಕಲ್ಲೇಶ್, ಮೊಗಣ್ಣ ಗೌಡ, ಪರಮೇಶ್ವರಪ್ಪ, ಸುನಿತಾ ಪ್ರಭು, ಚಂದ್ರಶೇಖರ, ಸುನೀಲ್ ದೊಡ್ಡಿಹಳ್ಳಿ ಹಾಜರಿದ್ದರು.