ಶಿರಸಿ: ಪ್ರಾಣಿಗಳು ತಮ್ಮ ಪಾಡಿಗೆ ತಾವು ಬದುಕನ್ನು ಕಟ್ಟಿಕೊಳ್ಳುತ್ತವೆ. ಆದರೆ ಮನುಷ್ಯ ಯಾವಾಗಲೂ ಸಂಘ ಜೀವಿ ಮತ್ತು ಜನರ ಮಧ್ಯ ಇದ್ದು ತನಗೆ ಬೇಕಾದ ಎಲ್ಲವನ್ನೂ ಜನರಿಂದ ಪಡೆದು ಕೊಳ್ಳುತ್ತಾನೆ ಎಂದು ಹಿರಿಯ ಸಹಕಾರಿ ಧುರೀಣ ಪ್ರಮೋದ್ ಹೆಗಡೆ ಅಭಿಪ್ರಾಯಪಟ್ಟರು.
ಸಂಘದ ಅಡಾವೆ ಪತ್ರ ನೋಡಿದಾಗ ಈ ಸಂಘವು ಅತ್ಯಂತ ವ್ಯವಸ್ಥಿತವಾಗಿ ಪ್ರತಿ ವರ್ಷವೂ ಲಾಭದಲ್ಲಿ ಮುನ್ನುಗ್ಗುತ್ತಿದೆ. ಸಂಘದ ಕಾರ್ಯವೈಖರಿಗಳು ಜನರ ಮೆಚ್ಚುಗೆಯನ್ನು ಎಷ್ಟೊಂದು ಪ್ರಮಾಣದಲ್ಲಿ ಪಡೆದುಕೊಂಡಿದೆ ಎಂದು ಇದರಿಂದ ತಿಳಿದು ಬರುತ್ತದೆ ಎಂದು ಹೇಳಿದರು.
ಸಹಕಾರಿ ಸಂಘದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾಗಿವೆ ಮತ್ತು ಪ್ರತಿ ವರ್ಷ ಸುಮಾರು 10 ಸಾವಿರ ಪದವೀಧರರು ನಾನಾ ರೀತಿಯಲ್ಲಿ ಉದ್ಯೋಗ ಪಡೆಯಲು ಶಕ್ತರಾಗಿದ್ದಾರೆ ಎಂದರು.ಉತ್ತರ ಕನ್ನಡ ಜಿಲ್ಲೆಗೆ ಬರಿ ದೊಡ್ಡ ದೊಡ್ಡ ಕಾರ್ಖಾನೆಗಳನ್ನು ತರುವುದರ ಮೂಲಕ ಉದ್ಯೋಗ ಸೃಷ್ಟಿ ಮಾಡಲು ನೋಡಬಾರದು ಇಲ್ಲಿಯ ಪರಿಸರಕ್ಕೆ ತಕ್ಕಂತೆ ಜಿಲ್ಲೆಯಲ್ಲಿ ಹೆಚ್ಚೆಚ್ಚು ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಬೇಕು ಮತ್ತು ಉತ್ತಮ ಶಿಕ್ಷಣ ವ್ಯವಸ್ಥೆಯನ್ನು ರೂಪಿಸಬೇಕು ಅಂದಾಗ ಮಾತ್ರ ವಲಸೆ ಹೋಗುವುದನ್ನು ತಪ್ಪಿಸಿ ಹೆಚ್ಚಿನ ಉದ್ಯೋಗ ಅವಕಾಶಗಳನ್ನು ಸೃಷ್ಟಿಸಬಹುದು ಎಂದರು.
ನಮ್ಮ ಕುಟುಂಬ ಸುಮಾರು 120 ವರ್ಷಗಳಿಂದ ನಿರಂತರವಾಗಿ ಕಾನೂನು ಕ್ಷೇತ್ರದಲ್ಲಿ ವಕೀಲ ವೃತ್ತಿಯನ್ನು ಮಾಡುತ್ತಾ ಬಂದಿದೆ ನಾನು 3ನೇ ತಲೆಮಾರಿನವನು ಎಂದರು.
ನಿರಂತರವಾಗಿ 16 ವರ್ಷಗಳಿಂದ ಹೈಕೋರ್ಟ್ ನ್ಯಾಯವಾದಿಯಾಗಿ ಕೆಲಸ ಕೊಡುತ್ತಿದ್ದೇನೆ. ಜೊತೆಗೆ ಶಿರಸಿಯ ಕಕ್ಷಿದಾರರ ಹಿತ ದೃಷ್ಟಿಯಿಂದ ಟ್ರಯಲ್ ಕೋರ್ಟ್ ಗಳ ಪ್ರಕರಣಗಳನ್ನು ನೋಡಿಕೊಳ್ಳುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಭಾಸ್ಕರ್ ಶೆಟ್ಟಿ, ಕಾರ್ಯ ನಿರ್ವಹಣಾಧಿಕಾರಿ ವಿನಾಯಕ್ ಶೆಟ್ಟಿ, ಸಿಬ್ಬಂದಿಗಳು, ಸದಸ್ಯರು ಹಾಗೂ ಸಾರ್ವಜನಿಕರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.