ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ದೇವಾಲಯ ಸಮಿತಿ ಅಧ್ಯಕ್ಷ ಜೆ.ಸೋಮಶೇಖರ್ ಹಾಗೂ ಇಒ ಉಮಾ ನೇತೃತ್ವದಲ್ಲಿ ನಡೆದ ಏಣಿಕೆಯಲ್ಲಿ ದೇವಾಲಯದ 12 ಹುಂಡಿಗಳನ್ನು ತೆರೆದು ಏಣಿಕೆ ಮಾಡಲಾಯಿತು. ಎಣಿಕೆ ವೇಳೆ ಹಣ ಜೊತೆಗೆ ಭಕ್ತರಿಂದ 40 ಗ್ರಾಂ ಬೆಳ್ಳಿ ದೊರೆತಿದೆ. ಇದಲ್ಲದೆ ವಿವಿಧ ದೇಶಗಳ 8 ಕರೆನ್ಸಿ ನೋಟುಗಳು ಸಹ ದೊರೆತಿವೆ.
ಕಳೆದ 2025ರ ಅ.30ರಂದು ಎಣಿಕೆ ಕಾರ್ಯ ಮಾಡಲಾಗಿತ್ತು. ಧನುರ್ಮಾಸ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಲಕ್ಷಾಂತರ ಜನ ಭೇಟಿ ನೀಡಿದ್ದರು. ಕರ್ನಾಟಕ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕ ಹಾಗೂ ಸಿಬ್ಬಂದಿ ಜೊತೆಗೆ ದೇವಾಲಯದ ಸಿಬ್ಬಂದಿ, ಬೆಂಗಳೂರಿನ ಶ್ರೀಭ್ರಮ್ಮರಾಂಭ ಸೇವಾ ಸಂಘದ ಸದಸ್ಯರು, ದೇವಾಲಯದ ಸಮಿತಿ ಸದಸ್ಯರು ಹುಂಡಿ ಎಣಿಕೆಯಲ್ಲಿ ಭಾಗವಹಿಸಿದ್ದರು.ನಂತರ ಕರ್ನಾಟಕ ಗ್ರಾಮೀಣ ಬ್ಯಾಂಕ್ಗೆ ಹಣವನ್ನು ಜಮೆ ಮಾಡಲಾಯಿತು. ದೇವಾಲಯ ಸಮಿತಿ ಸದಸ್ಯರಾದ ಅರ್ಚಕ ವಿಜಯಸಾರಥಿ, ಸದಸ್ಯರಾದ ಟಿ.ಆನಂದ್, ಸತೀಶ್, ಕಮಲಮ್ಮ, ಆಶಾ ಲತಾಪುಟ್ಟೇಗೌಡ, ಸುಬ್ರಮಣ್ಯ ಹಾಗೂ ರಘು ಸೇರಿದಂತೆ ಇತರರು ರು ಇತರರು ಉಪಸ್ಥಿತರಿದ್ದರು. ಹುಂಡಿ ಎಣಿಕೆ ನಡೆಯುವ ವೇಳೆ ನಾಲ್ಕು ಭಾಗಗಳಲ್ಲಿ ವಿಡಿಯೋ ಕ್ಯಾಮೆರಾಗಳ ಅಳವಡಿಸಿ ಚಿತ್ರೀಕರಿಸಲಾಯಿತು.ಜ.೨೪ರಂದು ನಗರದಲ್ಲಿ ಹಿಂದೂ ಸಮಾಜೋತ್ಸವ
ಹಿಂದೂ ಸಮಾಜೋತ್ಸವ ಆಯೋಜನಾ ಸಮಿತಿಯಿಂದ ಜ.೨೪ರಂದು ಮಧ್ಯಾಹ್ನ ೩.೩೦ಕ್ಕೆ ನಗರದ ಗುತ್ತಲು ಬಡಾವಣೆಯ ಕುವೆಂಪು ಶತಮಾನೋತ್ಸವ ಶಾಲಾ ಆವರಣದಲ್ಲಿ ಬೃಹತ್ ಹಿಂದೂ ಸಮಾಜೋತ್ಸವ ನಡೆಯಲಿದೆ ಎಂದು ಸಮಿತಿಯ ರಾಜಶೇಖರ್ ತಿಳಿಸಿದರು.
ಜಿಲ್ಲಾದ್ಯಂತ ಸುಮಾರು ೬೦ಕ್ಕೂ ಹೆಚ್ಚು ಹಿಂದೂ ಸಮಾಜೋತ್ಸವ ಆಯೋಜಿಸಲಾಗಿದ್ದು, ಇದರ ಭಾಗವಾಗಿ ಮಂಡ್ಯದಲ್ಲೂ ಸಹ ಬೃಹತ್ ಹಿಂದೂ ಸಮಾಜೋತ್ಸವ ನಡೆಯಲಿದೆ ಎಂದರು.
ವಾಗ್ಮಿ ಹಾಗೂ ಸಾಮಾಜಿಕ ಕಾರ್ಯಕರ್ತ ನವೀನ್ ಸುಬ್ರಹ್ಮಣ್ಯ ಸಮಾಜದ ಏಕತೆ ಮತ್ತು ಧರ್ಮದ ರಕ್ಷಣೆ ಕುರಿತು ಮಾತನಾಡುವರು. ಸಮಾರಂಭದಲ್ಲಿ ಸುಮಾರು ೧೫೦೦ಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಸಂಸ್ಕೃತಿ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು, ಸಮಾಜದಲ್ಲಿ ಸಂಘಟಿತ ಶಕ್ತಿಯನ್ನು ಪ್ರದರ್ಶಿಸುವ ಕಾರ್ಯಕ್ರಮ ಇದಾಗಿದ್ದು, ಹಿಂದೂಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.