ರಾಮನಗರ: ಮಕ್ಕಳಿಗೆ ಪೌಷ್ಟಿಕ ಆಹಾರ ಮತ್ತು ಪೂವ೯ ಪ್ರಾಥಮಿಕ ಶಿಕ್ಷಣ ನೀಡುವ ಸದುದ್ದೇಶದಿಂದ ತೆರೆಯಲಾಗಿರುವ ಹಲವಾರು ಅಂಗನವಾಡಿ ಕೇಂದ್ರಗಳಿಗೆ ಹೈಟೆಕ್ ಸ್ಪರ್ಶ ನೀಡಲಾಗಿದ್ದರೆ, ನೂರಾರು ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ.
ಸ್ವಂತ ಕಟ್ಟಡ ಇಲ್ಲದ ಅಂಗನವಾಡಿ ಕೇಂದ್ರಗಳು ಗ್ರಾಮೀಣ ಪ್ರದೇಶದಲ್ಲಿ ಶಾಲೆ, ಸಮುದಾಯ ಭವನ, ಗ್ರಾಮ ಪಂಚಾಯ್ತಿ ಕಟ್ಟಡಗಳು, ದೇವಸ್ಥಾನದ ಆವರಣಗಳಲ್ಲಿ ನಡೆಸಲಾಗುತ್ತಿದೆ. ಇನ್ನೂ ನಗರ ಪ್ರದೇಶಗಳಲ್ಲಿ ಪರಿಸ್ಥಿತಿ ಹದಗೆಟ್ಟಿದ್ದು, ಸಂಪೂರ್ಣ ವಿಭಿನ್ನವಾಗಿದೆ. ಚಿಣ್ಣರು ಕುಣಿದು ಕುಪ್ಪಳಿಸಲು ಜಾಗ, ಸಮರ್ಪಕ ಗಾಳಿ, ನೀರು, ಬೆಳಕು, ಶೌಚಾಲಯ ವ್ಯವಸ್ಥೆಯೂ ಇಲ್ಲ.ಅಂಗನವಾಡಿಗಳಿಗೆ ನಿವೇಶನ ಒದಗಿಸುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಮನವಿ ಮಾಡಿದ ಹೊರತಾಗಿಯೂ ನಿವೇಶನ ಲಭ್ಯತೆ ಇಲ್ಲದ ಕಾರಣ ಬಾಡಿಗೆ ಕಟ್ಟಡ ಇಲ್ಲವೇ, ಶಾಲಾ ಕೊಠಡಿಗಳಲ್ಲಿಯೇ ಅಂಗನವಾಡಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ.
ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಒಟ್ಟು 1596 ಅಂಗನವಾಡಿ ಕೇಂದ್ರಗಳಿದ್ದು, ಸಾವಿರಾರು ಮಕ್ಕಳು ಬಾಲ್ಯ ಕಳೆಯುತ್ತಿದ್ದಾರೆ. ಇದರಲ್ಲಿ 1,034 ಮಾತ್ರ ಸ್ವಂತ ಕಟ್ಟಡಗಳಿವೆ. ಉಳಿದ 562 ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳಿಲ್ಲ.ಬಾಡಿಗೆ ಕಟ್ಟಡ ಇಲ್ಲವೇ ಇತರ ಲಭ್ಯ ಜಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳ ಸ್ಥಿತಿ ಶೋಚನೀಯವಾಗಿದೆ. ಇರುವ ಚಿಕ್ಕ ಜಾಗದಲ್ಲಿಯೇ ಮಕ್ಕಳಿಗೆ ಪಾಠ ಹೇಳಿಕೊಡುವ ಜತೆಗೆ ಸರ್ಕಾರ ಜಾರಿಗೆ ತರುವ ಹಲವಾರು ಯೋಜನೆಗಳನ್ನು ಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು ಅಂಗನವಾಡಿ ಕಾರ್ಯಕರ್ತೆಯರು ಮಾಡಬೇಕು. ಕಿಷ್ಕಿಂದೆಯಂತಹ ಜಾಗದಲ್ಲೇ ಮಕ್ಕಳ ಕಲಿಕೆ, ನಿದ್ರೆ, ಆಟ, ಪೌಷ್ಟಿಕ ಆಹಾರವನ್ನು ತಯಾರಿಸಿ ನೀಡಬೇಕಿದೆ.
ನಿವೇಶನ ಲಭ್ಯವಿಲ್ಲದ ಹಾಗೂ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗವಾಡಿಗಳಲ್ಲಿ ಸಿಂಹಪಾಲನ್ನು ನಗರ ಪ್ರದೇಶ ಹೊಂದಿದೆ. ನಿವೇಶನರಹಿತ ಅಂಗನವಾಡಿಗಳಲ್ಲಿ ಶೇ. 80ರಷ್ಟು ಅಂಗನವಾಡಿಗಳಿಗೆ ನಗರ ಪ್ರದೇಶದಲ್ಲಿ ನಿವೇಶನ ಇಲ್ಲ. ಈ ಹಿನ್ನೆಲೆಯಲ್ಲಿ ಲಭ್ಯವಿರುವ ಸಣ್ಣ ಬಾಡಿಗೆ ಕೊಠಡಿಗಳಲ್ಲೇ ಅಂಗನವಾಡಿಗಳು ಕಾರ್ಯನಿರ್ವಹಿಸುತ್ತಿವೆ. ನಗರ ಪ್ರದೇಶದಲ್ಲಿ ಇರುವ ಬಡಾವಣೆಗಳ ಸಿಎ ನಿವೇಶನಗಳನ್ನು ಹಂಚಿಕೆ ಮಾಡಿದರೂ ಅಲ್ಲಿಗೆ ಪೋಷಕರು ತಮ್ಮ ಮಕ್ಕಳನ್ನು ಕಳಿಸಲು ಮುಂದಾಗುವುದಿಲ್ಲ.ಅಂಗನವಾಡಿಗಳಿಗೆ ಹೈಟೆಕ್ ಸ್ಪರ್ಶ:
ಜಿಲ್ಲೆಯಲ್ಲಿ ಸುಮಾರು 200ಕ್ಕೂ ಹೆಚ್ಚು ಅಂಗನವಾಡಿಗಳಿಗೆ ಹೈಟೆಕ್ ಸ್ಪರ್ಶ ನೀಡಲಾಗಿದೆ. ಮಕ್ಕಳ ಕಲಿಕೆಗೆ ಪೂರಕವಾಗುವಂತೆ ಸ್ಮಾರ್ಟ್ ಕ್ಲಾಸ್ಗಳನ್ನು ಆರಂಭಿಸಲಾಗಿದೆ. ಖಾಸಗಿ ಕಂಪನಿಗಳ ಸಿಎಸ್ಆರ್ ಅನುದಾನ ಬಳಕೆ ಮಾಡಿಕೊಂಡಿರುವ ಬಿಡದಿಯ 30ಕ್ಕೂ ಹೆಚ್ಚು ಅಂಗವಾಡಿಗಳು ಸಂಪೂರ್ಣ ಹೈಟೆಕ್ ರೂಪ ಪಡೆದುಕೊಂಡಿವೆ.ಅಂಗನವಾಡಿಗಳಿಗೆ ಬೇಕಾದ ನಿವೇಶನ, ಕಟ್ಟಡ ಹಾಗೂ ಮೂಲಸೌಕರ್ಯ ಒದಗಿಸುವುದು ಸರ್ಕಾರದ ಜತೆಗೆ ಸ್ಥಳೀಯ ಆಡಳಿತ ಸಂಸ್ಥೆಗಳ ಆಸಕ್ತಿ ತೋರಬೇಕಿದೆ. ನಗರ ವ್ಯಾಪ್ತಿಯಲ್ಲಿ ನಗರಸಭೆ, ಪುರಸಭೆಗಳ ಜನಪ್ರತಿನಿಧಿಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯಿತಿ ಪ್ರತಿನಿಧಿಗಳು ಗಮನ ಹರಿಸಬೇಕು. ಇದರಿಂದ ಬಾಲ್ಯದಲ್ಲಿಯೇ ಮಕ್ಕಳು ಉತ್ತಮ ವಾತಾವರಣದಲ್ಲಿ ಕಲಿಕೆ ಮಾಡಲು ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿಗಳು ಅಗತ್ಯ ನಿವೇಶನ ನೀಡುವ ಜತೆಗೆ ಪ್ರತಿ ಅಂಗನವಾಡಿ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುವಂತೆ ಮಾಡಬೇಕಿದೆ.
ಜಿಲ್ಲೆಯಲ್ಲಿ ಸ್ವಂತ ಕಟ್ಟಡ ಇಲ್ಲದ ಕೆಲ ಅಂಗನವಾಡಿ ಕೇಂದ್ರಗಳನ್ನು ಸರ್ಕಾರಿ ಶಾಲೆಗಳ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಗಿದೆ. ಸ್ವಂತ ನಿವೇಶನ ಕಲ್ಪಿಸಿ ಕಟ್ಟಡ ನಿರ್ಮಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಯೊಬ್ಬರು ಕನ್ನಡಪ್ರಭಕ್ಕೆ ಪ್ರತಿಕ್ರಿಯೆ ನೀಡಿದರು.ಬಾಕ್ಸ್ .............
ನಿವೇಶನ ಇಲ್ಲದ 259 ಕೇಂದ್ರಗಳು :ಜಿಲ್ಲೆಯಲ್ಲಿ 1301 ಅಂಗನವಾಡಿಗಳು ಹಾಗೂ 285 ಮಿನಿ ಅಂಗನವಾಡಿಗಳೂ ಸೇರಿ ಒಟ್ಟು 1586 ಕೇಂದ್ರಗಳಿವೆ. ಇವುಗಳಲ್ಲಿ 3ರಿಂದ 6 ವರ್ಷದೊಳಗಿನ 30 ಸಾವಿರದಷ್ಟು ಮಕ್ಕಳು ಪ್ರವೇಶ ಪಡೆದಿದ್ದಾರೆ. ಈ ಪೈಕಿ 1034 ಅಂಗನವಾಡಿಗಳು ಮಾತ್ರ ಸ್ವಂತ ಕಟ್ಟಡಗಳಲ್ಲಿ ನಡೆಯುತ್ತಿವೆ. ಉಳಿದ 552 ಕೇಂದ್ರಗಳಿಗೆ ಸ್ವಂತ ಕಟ್ಟಡವಿಲ್ಲ. 40ಕ್ಕೂ ಹೆಚ್ಚು ಅಂಗನವಾಡಿಗಳು ಸಮುದಾಯ ಭವನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೆ, 189 ಅಂಗನವಾಡಿಗಳು ಶಾಲಾ ಕಟ್ಟಡಗಳಲ್ಲಿ ಇವೆ. 303 ಅಂಗನವಾಡಿಗಳು ಬಾಡಿಗೆ ಮನೆ, ಸಮುದಾಯ ಭವನ, ಶಾಲಾ ಕೊಠಡಿಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ವಿಪರ್ಯಾಸವೆಂದರೆ ಸುಮಾರು 259 ಅಂಗನವಾಡಿಗಳಿಗೆ ನಿವೇಶನವೇ ಇಲ್ಲ.
ಬಾಕ್ಸ್ ...........ನಿವೇಶನ ಇಲ್ಲದ ಅಂಗನವಾಡಿಗಳು
ತಾಲೂಕು ನಿವೇಶನ ರಹಿತ ಅಂಗನವಾಡಿಗಳುರಾಮನಗ.
79ಚನ್ನಪಟ್ಟ.
51ಕನಕಪು.
72ಹಾರೋಹಳ್ಳ.
19ಮಾಗಡ.
38-----------------------
ಒಟ್ಟ.259
4ಕೆಆರ್ ಎಂಎನ್ 2.ಜೆಪಿಜಿಚನ್ನಪಟ್ಟಣ ತಾಲೂಕು ಹನುಮಾಪುರ ದೊಡ್ಡಿಯ ಅಂಗನವಾಡಿ ಕೇಂದ್ರ.