ಚಿಕ್ಕಮಗಳೂರು: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನ ಮನಸೋ ಇಚ್ಛೆ 10 ಬಾರಿ ಚಾಕುವಿನಲ್ಲಿ ಚುಚ್ಚಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರ ಗ್ರಾಮದಲ್ಲಿ ಬುಧವಾರ ನಡೆದಿದೆ. ಕೀರ್ತಿ (26) ಮೃತ ದುರ್ದೈವಿ, ಅವಿನಾಶ್ (32) ಪತ್ನಿಯನ್ನ ಕೊಂದ ಪತಿ. ಒಂದೇ ಊರಿನ ಒಂದೇ ಬೀದಿಯ ಕೀರ್ತಿ ಹಾಗೂ ಅವಿನಾಶ್ 4 ವರ್ಷದ ಹಿಂದೆ ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಇವರಿಗೆ ಎರಡೂವರೆ ವರ್ಷದ ಹೆಣ್ಣು ಮಗು ಕೂಡ ಇದೆ. ಗಂಡ-ಹೆಂಡತಿ ನಡುವೆ ಕೆಲ ದಿನಗಳಿಂದ ವೈಮನಸ್ಸು ಉಂಟಾಗಿ ಜಗಳವಾಗುತ್ತಿತ್ತು. ಬುಧವಾರ ಮಧ್ಯಾಹ್ನ ಜಗಳ ಜೋರಾಗಿದ್ದು, ಗಂಡ ಅವಿನಾಶ್ ತನ್ನ ಪತ್ನಿ ಕೀರ್ತಿಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ.
ಜಿಲ್ಲಾಸ್ಪತ್ರೆಯ ಶವಾಗಾರದ ಮುಂದೆ ಕೀರ್ತಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.