ಧರಣಿಗೆ ಹೈದ್ರಾಬಾದ ಕರ್ನಾಟಕ ಯುವಶಕ್ತಿ ಸಂಘಟನೆ ಬೆಂಬಲ

KannadaprabhaNewsNetwork |  
Published : Feb 14, 2025, 12:32 AM IST
ಪೋಟೊ13.6: ಕುಷ್ಟಗಿ ಪಟ್ಟಣದ ತಹಸೀಲ್ದಾರ ಕಾರ್ಯಾಲಯದ ಮುಂದೆ ಧರಣಿ ನಿರತರಾದ ಗ್ರಾಮ ಆಡಳಿತಾಧಿಕಾರಿಗಳ ಪ್ರತಿಭಟನೆಗೆ ಬೆಂಬಲಿಸಿ ಸಂಘಟನೆಯವರು ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಮೂಲಭೂತ ಸೌಲಭ್ಯ ಬೇಡಿಕೆ ಈಡೇರಿಕೆಗಾಗಿ ಪಟ್ಟಣದ ತಹಸೀಲ್ದಾರ ಕಾರ್ಯಾಲಯದ ಮುಂದೆ ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ 4ನೇ ದಿನದ ಧರಣಿಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಸಂಘಟನೆಯ ಪದಾಧಿಕಾರಿಗಳು ಬೆಂಬಲ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಕುಷ್ಟಗಿ

ಮೂಲಭೂತ ಸೌಲಭ್ಯ ಬೇಡಿಕೆ ಈಡೇರಿಕೆಗಾಗಿ ಪಟ್ಟಣದ ತಹಸೀಲ್ದಾರ ಕಾರ್ಯಾಲಯದ ಮುಂದೆ ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ 4ನೇ ದಿನದ ಧರಣಿಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಸಂಘಟನೆಯ ಪದಾಧಿಕಾರಿಗಳು ಬೆಂಬಲ ವ್ಯಕ್ತಪಡಿಸಿದರು. ತಹಸೀಲ್ದಾರ್ ಮೂಲಕ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು.

ಹೈ-ಕ ಯುವಶಕ್ತಿ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಕಿರಣ ಜ್ಯೋತಿ ಮಾತನಾಡಿ, ಇತ್ತೀಚಿನ ಸರ್ಕಾರಗಳು ಕೆಳಹಂತದ ಸಿಬ್ಬಂದಿ ವರ್ಗದವರನ್ನು ಜೀತದಾಳುಗಳಂತೆ ನಡೆಸಿಕೊಳ್ಳುತ್ತಿರುವುದು ಖಂಡನಾರ್ಹ. ಕಂದಾಯ ಇಲಾಖೆಯ ಸಾಕಷ್ಟು ಮೊಬೈಲ್ ಆ್ಯಪ್ ಹಾಗೂ ಗ್ರಾಮೀಣ ಪ್ರದೇಶದ ಸೇವೆಗಳನ್ನು ಒದಗಿಸುತ್ತಿರುವ ವಿಎಗಳ ಬೇಡಿಕೆಗಳನ್ನು ಕೂಡಲೇ ಸರ್ಕಾರ ಈಡೇರಿಸಬೇಕಿದೆ ಎಂದರು.

ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಗಾಣಿಗೇರ ಮಾತನಾಡಿ, ಪ್ರಸ್ತುತ ಸರ್ಕಾರ ಗ್ಯಾರಂಟಿಗಳಿಗೆ ಜೋತುಬಿದ್ದು ಸಾರ್ವಜನಿಕರಿಗೆ ಕೆಲವೊಂದು ಇಲಾಖೆಗಳ ಮೂಲಕ ಪರೋಕ್ಷ ಆರ್ಥಿಕ ಹೊರೆ ಉಂಟು ಮಾಡುವುದರ ಜೊತೆಗೆ, ಗೊಂದಲ ಸೃಷ್ಟಿಸಿದೆ.

ಸಿ ಮತ್ತು ಡಿ ನೌಕರರ ವರ್ಗಗಳಿಗೆ ಸಮರ್ಪಕ ಸೌಲಭ್ಯ ಕೊಡದೆ, ಧೋರಣೆ ಖಂಡಿಸಿ ಹೋರಾಟ ನಡೆಸಿದರೆ, ಹೋರಾಟಗಳನ್ನು ಹತ್ತಿಕುವ ಇಲ್ಲವೇ, ಪರೋಕ್ಷ ರೀತಿಯ ಭೀತಿ ಉಂಟುಮಾಡುವ ಹುನ್ನಾರ ನಡೆಸುತ್ತಿರುವುದು ಅಮಾನವೀಯವಾಗಿದೆ ಎಂದರು.

ಸದ್ಯ ಮನವೊಲಿಸಿ ಮುಂಬರುವ ಬಜೆಟ್ ಅಧಿವೇಶನದಲ್ಲಿ ಅಂತಿಮ ಆದೇಶದೊಂದಿಗೆ ಸದರಿ ನೌಕರರ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿಸರು.

ಸಂಘಟನೆಯ ಮುಖಂಡರಾದ ರಾಮಣ್ಣ ಭಜಂತ್ರಿ, ಸಂಚಾಲಕ ಜಗದೀಶ ನಾಗರಾಳ, ವಿರೂಪಾಕ್ಷ ಚೂರಿ, ಗ್ರಾಮಾಡಳಿತಧಿಕಾರಿ ಸಂಘದ ತಾಲೂಕು ಅಧ್ಯಕ್ಷ ಶರಣಪ್ಪ ಹುಡೇದ ಸೇರಿದಂತೆ ಅನೇಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ