ಗರ್ಭಕೋಶ ಆಪರೇಷನ್‌: ಸಂತ್ರಸ್ತೆಯರಿಂದ ಅನಿರ್ದಿಷ್ಟ ಉಪವಾಸ ಬೆದರಿಕೆ

KannadaprabhaNewsNetwork |  
Published : Sep 21, 2024, 02:00 AM IST
ಫೋಟೊ ಶೀರ್ಷಿಕೆ: 20ಆರ್‌ಎನ್‌ಆರ್2ರಾಣಿಬೆನ್ನೂರಿನಲ್ಲಿ ಅನಧಿಕೃತವಾಗಿ ಗರ್ಭಕೋಶ ಶಸ್ತ್ರ ಚಿಕಿತ್ಸೆಗೆ ಗುರಿಯಾದ ಮಹಿಳೆಯರು ವಿಶೇಷ ಆರ್ಥಿಕ ನೆರವು ಘೋಷಣೆ ಮತ್ತು ಪ್ರಕರಣದ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ತಹಸೀಲ್ದಾರ ಆರ್.ಎಚ್.ಭಾಗವಾನ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ತಮ್ಮ ಒಪ್ಪಿಗೆ ಇಲ್ಲದೆಯೇ ಗರ್ಭಕೋಶ ಶಸ್ತ್ರ ಚಿಕಿತ್ಸೆಗೆ ಗುರಿಯಾದ ಸಂತ್ರಸ್ತೆಯರು ವಿಶೇಷ ಆರ್ಥಿಕ ನೆರವು ಘೋಷಣೆ ಮತ್ತು ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಅ. 2ರಿಂದ ಅನಿರ್ಧಿಷ್ಟ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

ರಾಣಿಬೆನ್ನೂರು: ತಮ್ಮ ಒಪ್ಪಿಗೆ ಇಲ್ಲದೆಯೇ ಗರ್ಭಕೋಶ ಶಸ್ತ್ರ ಚಿಕಿತ್ಸೆಗೆ ಗುರಿಯಾದ ಸಂತ್ರಸ್ತೆಯರು ವಿಶೇಷ ಆರ್ಥಿಕ ನೆರವು ಘೋಷಣೆ ಮತ್ತು ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಅ. 2ರಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

ಶುಕ್ರವಾರ ನಗರದ ಪೋಸ್ಟ್ ಸರ್ಕಲ್ ಬಳಿ ತಹಸೀಲ್ದಾರ್‌ ಆರ್.ಎಚ್. ಭಾಗವಾನ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿರುವ ಸಂತ್ರಸ್ತೆಯರು, ನಗರದ ಸರ್ಕಾರಿ ಆಸ್ಪತ್ರೆಯಲ್ಲಿ 2010ರಿಂದ 2016ರವರೆಗೂ ನಿರಂತರವಾಗಿ ಡಾಕ್ಟರ್ ಶಾಂತ ಪಿ. ಎಂಬ ವೈದ್ಯರು 1522ಕ್ಕೂ ಹೆಚ್ಚು ಬಡ ಮಹಿಳೆಯರಿಗೆ ಅವರ ಒಪ್ಪಿಗೆ ಇಲ್ಲದೆಯೇ ಗರ್ಭಕೋಶದ ಆಪರೇಷನ್‌ ಮಾಡಿದ್ದಾರೆ. ಇವರ ಸೇವಾ ಅವಧಿಯಲ್ಲಿ ಹೊಟ್ಟೆ ನೋವಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದ ಬಡ ಮಹಿಳೆಯರಿಗೆ ಗರ್ಭಕೋಶದಲ್ಲಿ ಸಮಸ್ಯೆಯಿದ್ದು ಕೂಡಲೇ ಅದನ್ನು ಆಪರೇಷನ್‌ ಮಾಡಿ ತೆಗೆಯಬೇಕು ಇಲ್ಲವಾದರೆ ಪ್ರಾಣಕ್ಕೆ ಸಂಚಕಾರವಾಗುತ್ತದೆ ಎಂದು ಹೆದರಿಸಿ ಆಪರೇಷನ್‌ ಮಾಡಿದ್ದಾರೆ. ಆಪರೇಷನ್‌ ಮಾಡಲು ಖಾಸಗಿ ಔಷಧಿ ಅಂಗಡಿ ಮೂಲಕ ಹಣ ಪಡೆದಿದ್ದಾರೆ.

ಹೀಗೆ ಆಪರೇಷನ್‌ ಗೆ ಒಳಗಾದ ಮಹಿಳೆಯರು ಇದೀಗ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಈ ವಿಚಾರವಾಗಿ ಸಂತ್ರಸ್ತ ಮಹಿಳೆಯರು 2016ರಿಂದ ಹೋರಾಟ ನಡೆಸುತ್ತಾ ಬಂದಿದ್ದರೂ ಇದುವರೆಗೂ ಸರ್ಕಾರದಿಂದ ಯಾವುದೇ ರೀತಿ ನ್ಯಾಯ ದೊರಕಿಲ್ಲ. ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಹಿಳೆಯರ ಪೈಕಿ ಎಂಟು ಜನರು ಈಗಾಗಲೇ ಸಾವನ್ನಪ್ಪಿದ್ದಾರೆ. ಆದ್ದರಿಂದ ಅ. 2ರಿಂದ ನಗರದ ತಹಸೀಲ್ದಾರ್ ಕಚೇರಿ ಎದುರು ವಿವಿಧ ಸಂಘಟನೆಗಳು, ಮಠಾಧೀಶರುಗಳ ಬೆಂಬಲದಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ಕೈಗೊಳ್ಳುವುದಾಗಿ ಮನವಿಯಲ್ಲಿ ತಿಳಿಸಲಾಗಿದೆ. ಲಲಿತವ್ವ ಲಮಾಣಿ, ಶೈಲಾ ರಂಗರೆಡ್ಡಿ, ಪಕ್ಕೀರವ್ವ ಮಲ್ಲಾಪುರ, ಲಕ್ಷ್ಮವ್ವ ಲಮಾಣಿ, ಗಿರಿಜವ್ವ ಚಕ್ರಸಾಲಿ, ಲಲಿತಾ ಘಂಟಿ, ಗಂಗವ್ವ ಲಮಾಣಿ, ಶಂಕ್ರಮ್ಮ ಹಾವೇರಿ, ಲಕ್ಷ್ಮವ್ವ ಮಣಕೂರ, ಡ್ಯಾಮವ್ವ ಲಮಾಣಿ, ಶಾಂತವ್ವ ಲಮಾಣಿ, ಬಸವ್ವ ಮಣಕೂರ, ಗೀತಾ ಲಮಾಣಿ, ಸುಮಂಗಲ ಪಾಟೀಲ, ಕಾಮಾಕ್ಷಿವ್ವ ಮಣಕೂರ ಮತ್ತಿತರರಿದ್ದರು.

PREV

Recommended Stories

KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?