ಕರೆಂಟ್ ಶಾರ್ಟ್ ಸರ್ಕ್ಯೂರ್ಟ್ನಿಂದಾಗಿ ಶಿವಮೊಗ್ಗ ನಗರದ ಶಂಕರ ಮಠ ರಸ್ತೆಯ ರಾಹುಲ್ ಹ್ಯೂಂಡಾಯ್ ಕಾರ್ ಶೋ ರೂಂಗೆ ಬೆಂಕಿ ತಗುಲಿದ್ದು, ಲಕ್ಷಾಂತರ ರು. ಮೌಲ್ಯವ ಕಾರು ಮತ್ತು ಇತರೆ ವಸ್ತುಗಳು ಸುಟ್ಟು ಕರಕಲಾಗಿವೆ. ರಾತ್ರಿ 10 ಗಂಟೆಗೆ ಅಗ್ನಿ ಅವಘಡ ಸಂಭವಿಸಿದ್ದು, ಶೋ ರೂಂ ನಲ್ಲಿದ್ದ ಹೊಸ ಕಾರುಗಳು ಹಾಗೂ ಸರ್ವಿಸ್ ಗೆ ಬಂದಿದ್ದ ಲಕ್ಷಾಂತರ ರು. ಮೌಲ್ಯದ ಕಾರುಗಳು ಭಾಗಶಃ ಅಥವಾ ಪೂರ್ಣ ಬೆಂಕಿಗೆ ಆಹುತಿಯಾಗಿರುವುದಾಗಿ ತಿಳಿದುಬಂದಿದೆ.
ಶಿವಮೊಗ್ಗ: ಕರೆಂಟ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ನಗರದ ಶಂಕರಮಠ ರಸ್ತೆಯಲ್ಲಿರುವ ರಾಹುಲ್ ಹ್ಯೂಂಡಾಯ್ ಕಾರ್ ಶೋ ರೂಂಗೆ ಬೆಂಕಿ ತಗುಲಿದ್ದು, ಲಕ್ಷಾಂತರ ರು. ಮೌಲ್ಯವ ಕಾರು ಮತ್ತು ಇತರೆ ವಸ್ತುಗಳು ಸುಟ್ಟು ಕರಕಲಾಗಿವೆ.
ರಾತ್ರಿ 10 ಗಂಟೆಗೆ ಅಗ್ನಿ ಅವಘಡ ಸಂಭವಿಸಿದ್ದು, ಶೋ ರೂಂ ನಲ್ಲಿದ್ದ ಹೊಸ ಕಾರುಗಳು ಹಾಗೂ ಸರ್ವಿಸ್ ಗೆ ಬಂದಿದ್ದ ಲಕ್ಷಾಂತರ ರು. ಮೌಲ್ಯದ ಕಾರುಗಳು ಭಾಗಶಃ ಅಥವಾ ಪೂರ್ಣ ಬೆಂಕಿಗೆ ಆಹುತಿಯಾಗಿರುವುದಾಗಿ ತಿಳಿದು ಬಂದಿದೆ. ಶೋ ರೂಂನ ಮೇಲ್ಛಾವಣಿಯಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದೆ. ಶೋ ರೂಂ ಸಿಬ್ಬಂದಿಗಳು, ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರು.ಈ ವೇಳೆ ಬೆಂಕಿ ಜೋರಾಗಿದ್ದು, ಪಕ್ಕದ ಸೋನಾ ಹೊಂಡಾ ಶೋ ರೂಂಗೂ ಬೆಂಕಿ ತಗುಲಿದ್ದು, ಕೂಡಲೇ ಅಗ್ನಿ ಶಾಮಕದಳದವರು ಬೆಂಕಿಯನ್ನು ನಂದಿಸಿದ್ದಾರೆ. ವಿಷಯ ತಿಳಿದು ದೊಡ್ಡ ಸಂಖ್ಯೆಯ ಜನರು ಶೋ ರೂಂ ಬಳಿ ಜಮಾಯಿಸಿದ್ದಾರೆ.ಕೋಟೆ ಠಾಣೆಯಲ್ಲಿ ದೂರು ದಾಖಲಾಗಿದೆ.- - - (ಫೋಟೋಗಳು):
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.