ಮಾಗಡಿ: ಸಚಿವ ಸಂಪುಟ ವಿಸ್ತರಣೆಯಾದರೆ ನನಗೂ ಸಚಿವ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ವಿಶ್ವಾಸ ವ್ಯಕ್ತಪಡಿಸಿದರು.
ಶಾಸಕ ಯೋಗೇಶ್ವರ್ಗೆ ಸಚಿವ ಸ್ಥಾನ ನೀಡುತ್ತಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಾಸಕರು, ಎಲ್ಲರಿಗೂ ಸಚಿವ ಸ್ಥಾನದ ಮೇಲೆ ಆಸೆ ಇದ್ದೇ ಇರುತ್ತದೆ. ನಮಗೂ ಆಸೆ ಇದೆ, ಅವರಿಗೂ ಆಸೆ ಇದೆ, ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದು ಹೇಳಿದರು.
ಆರು ತಿಂಗಳಲ್ಲಿ ಅಭಿವೃದ್ಧಿ ತೋರಿಸುವೆ: ಸಾಲು ಸಾಲು ಚುನಾವಣೆ ಬಂದ ಹಿನ್ನೆಲೆಯಲ್ಲಿ ಅಭಿವೃದ್ಧಿ ಕುಂಠಿತವಾಗಿರುವ ಬಗ್ಗೆ ನನಗೂ ಬೇಸರವಿದೆ. ಅರಣ್ಯ ಇಲಾಖೆ ಮತ್ತು ಕೆರೆ ಅಭಿವೃದ್ಧಿ ನಿಗಮದಿಂದ ಅನುಮೋದನೆ ಸಿಕ್ಕಿದ್ದು ಕಾಮಗಾರಿ ಮುಂದುವರಿಸಲಾಗುತ್ತದೆ. ಜೊತೆಗೆ ಕೋಟೆ ಅಭಿವೃದ್ಧಿಗೆ 100 ಕೋಟಿ ಅನುದಾನ ಬಿಡುಗಡೆಯಾಗಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಂದಿನ ತಿಂಗಳಲ್ಲಿ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರು ಚಾಲನೆ ನೀಡಲಿದ್ದು, ಇನ್ನೂ ಆರು ತಿಂಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಪಥದಲ್ಲಿ ಸಾಗುತ್ತವೆ ಎಂದರು.ಎನ್ಡಿಎ ಮುಖಂಡರು ಹೋರಾಟ ತಡೆಯಲಿ:
ಪುರಸಭೆ ಸ್ಥಾಯಿ ಸಮಿತಿ ನೂತನ ಅಧ್ಯಕ್ಷ ಶಿವಕುಮಾರ್ ಅವರ ನೂತನ ಕಚೇರಿಯನ್ನು ಶಾಸಕ ಬಾಲಕೃಷ್ಣ ಉದ್ಘಾಟಿಸಿದರು. ಪುರಸಭಾಧ್ಯಕ್ಷೆ ರಮ್ಯಾ ನರಸಿಂಹಮೂರ್ತಿ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.
28ಮಾಗಡಿ4 :ಮಾಗಡಿ ಪುರಸಭೆ ಸ್ಥಾಯಿ ಸಮಿತಿ ನೂತನ ಅಧ್ಯಕ್ಷ ಶಿವಕುಮಾರ್ ಅವರ ನೂತನ ಕಚೇರಿಯನ್ನು ಶಾಸಕ ಬಾಲಕೃಷ್ಣ ಉದ್ಘಾಟಿಸಿದರು.