ನಾಗಮಂಗಲದಲ್ಲಿ ಕೆಲಸ ಮಾಡುವ ಸೌಭಾಗ್ಯ ಸಿಕ್ಕಿದ್ದು ನನ್ನ ಅದೃಷ್ಟ: ಬಿಇಒ ಕೆ.ಯೋಗೇಶ್

KannadaprabhaNewsNetwork |  
Published : Jul 27, 2025, 12:00 AM IST
26ಕೆಎಂಎನ್ ಡಿ23 | Kannada Prabha

ಸಾರಾಂಶ

ನಾಗಮಂಗಲ ತಾಲೂಕಿನ ಶಿಕ್ಷಕರ ಪೈಕಿ ನಾನೂ ಕೂಡ ಒಬ್ಬ ಶಿಕ್ಷಕ ಹೊರತು ಅಧಿಕಾರಿಯಲ್ಲ. ಎಲ್ಲರೂ ಒಟ್ಟಾಗಿ ಸೇರಿ ಶೈಕ್ಷಣಿಕ ಪರಿಸರವನ್ನು ಉತ್ತಮಗೊಳಿಸೋಣ ಎಂದು ಇಲ್ಲಿ ಕಾರ್ಯಾಭಾರ ಆರಂಭಿಸಿದಾಗ ಹೇಳಿದ್ದೆ. ಅದರಂತೆ ನಡೆದಿದ್ದೇನೆ ಎಂಬ ಸಾರ್ಥಕತೆ ಇದೆ.

ಕನ್ನಡಪ್ರಭ ವಾರ್ತೆ ನಾಗಮಂಗಲ

ಅತ್ಯಲ್ಪ ಅವಧಿಯಲ್ಲಿ ಕರ್ತವ್ಯ ನಿರ್ವಹಿಸಿದ ನನಗೆ ಇಲ್ಲಿನ ಶಿಕ್ಷಕರು ತೋರಿರುವ ಪ್ರೀತಿಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಶಿಕ್ಷಕರ ಸಂಘಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಈ ತಾಲೂಕಿನಲ್ಲಿ ಕೆಲಸ ಮಾಡುವ ಸೌಭಾಗ್ಯ ಸಿಕ್ಕಿದ್ದು ನನ್ನ ಅದೃಷ್ಟವೇ ಸರಿ ಎಂದು ಉಪನಿರ್ದೇಶಕರಾಗಿ ಬಡ್ತಿ ಹೊಂದಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಯೋಗೇಶ್ ಅಭಿಪ್ರಾಯಪಟ್ಟರು.

ಪಟ್ಟಣದ ಶಿಕ್ಷಕರ ಭವನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ, ಪ್ರಾಥಮಿಕ ಮತ್ತು ಪ್ರೌಢಶಾಲಾ ವೃಂದದ ಎಲ್ಲಾ ಸಂಘಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿ ಸಹಭಾಗಿತ್ವದಲ್ಲಿ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ತಾಲೂಕಿನ ಶಿಕ್ಷಕರ ಪೈಕಿ ನಾನೂ ಕೂಡ ಒಬ್ಬ ಶಿಕ್ಷಕ ಹೊರತು ಅಧಿಕಾರಿಯಲ್ಲ. ಎಲ್ಲರೂ ಒಟ್ಟಾಗಿ ಸೇರಿ ಶೈಕ್ಷಣಿಕ ಪರಿಸರವನ್ನು ಉತ್ತಮಗೊಳಿಸೋಣ ಎಂದು ಇಲ್ಲಿ ಕಾರ್ಯಾಭಾರ ಆರಂಭಿಸಿದಾಗ ಹೇಳಿದ್ದೆ. ಅದರಂತೆ ನಡೆದಿದ್ದೇನೆ ಎಂಬ ಸಾರ್ಥಕತೆ ಇದೆ ಎಂದರು.

ನಾಗಮಂಗಲ ಶೈಕ್ಷಣಿಕವಾಗಿ ಹಿಂದುಳಿದ ತಾಲೂಕೇನಲ್ಲ. ಇಲ್ಲಿಯೂ ಪ್ರತಿಭಾವಂತರಿದ್ದು ಉತ್ತಮ ವಿದ್ಯಾರ್ಥಿಗಳನ್ನು ತಯಾರು ಮಾಡುವ ಉತ್ತಮ ಶಿಕ್ಷಕರಿದ್ದಾರೆ. ಈ ಕಾರ್ಯವನ್ನು ಸಮರ್ಪಕವಾಗಿ ಮಾಡಿದ್ದೇನೆ ಎನ್ನುವ ಸಂತೃಪ್ತ ಭಾವನೆ ನನಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜೆ.ವೈ.ಮಂಜುನಾಥ್ ಮಾತನಾಡಿ, ಉಪನಿರ್ದೇಶಕರಾಗಿ ಬಡ್ತಿ ಹೊಂದಿರುವ ಯೋಗೇಶ್ ಅವರಿಗೆ ಶಿಕ್ಷಣ ಇಲಾಖೆಯಲ್ಲಿ ಇನ್ನೂ ಉನ್ನತ ಸ್ಥಾನ ದೊರಕಲೆಂದು ಆಶಿಸುವುದಾಗಿ ತಿಳಿಸಿದರು.

ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಎನ್.ಎಸ್.ಜಗನ್ನಾಥ್ ಪ್ರಾಸ್ತಾವಿಕ ನುಡಿ ನುಡಿದರು. ಕ್ಷೇತ್ರ ಸಮನ್ವಯಾಧಿಕಾರಿ ಕೆ.ರವೀಶ್, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಮಂಜುನಾಥ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರುದ್ರೇಶ್, ಶಿಕ್ಷಕರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಾಗೇಶ್, ಕಾರ್ಯದರ್ಶಿ ಮಂಜೇಗೌಡ, ಸಾವಿತ್ರಿ ಬಾಯಿಪುಲೆ ಸಂಘದ ಜಿಲ್ಲಾಧ್ಯಕ್ಷೆ ಸರಸ್ವತಿ, ತಾಲೂಕು ಘಟಕದ ಅಧ್ಯಕ್ಷೆ ಪದ್ಮ, ಜಿಪಿಟಿ ಸಂಘದ ಅಧ್ಯಕ್ಷ ನಿಂಗರಾಜು, ಕಾರ್ಯದರ್ಶಿ ಪಿ.ಮಹೇಶ್, ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ವಿಶ್ವಮಂಜುಸ್ವಾಮಿ, ಕಾರ್ಯದರ್ಶಿ ಡಿ.ಕೆ.ವಿನಯ್, ಪ್ರೌಢಶಾಲೆ ಮುಖ್ಯ ಶಿಕ್ಷಕ ಹಾಗೂ ಸಾಹಿತಿ ತಿಮ್ಮರಾಯಿಗೌಡ, ಮೈಲಾರಪಟ್ಟಣ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಎಂ.ಎನ್.ಮಂಜುನಾಥ್ ಸೇರಿದಂತೆ ಮುನ್ನೂರಕ್ಕೂ ಹೆಚ್ಚು ಶಿಕ್ಷಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ