ಶಿರಸಿ: ನಾನು ಕಾಲಹರಣ ಮಾಡುವ ಶಾಸಕ ಅಲ್ಲ. ಜನರ ತೆರಿಗೆ ಹಣ ದುರುಪಯೋಗವಾಗದಂತೆ ನೋಡಿಕೊಳ್ಳುವುದು ನನ್ನ ಜವಾಬ್ದಾರಿ. ಸುಪ್ರವೈಸರ್ ಹೇಳಿರುವುದಕ್ಕೆ ಧನ್ಯವಾದ ಹೇಳುತ್ತೇನೆ ಎಂದು ಶಾಸಕ ಭೀಮಣ್ಣ ನಾಯ್ಕ ಬಿಜೆಪಿ ಮುಖಂಡರಿಗೆ ತಿರುಗೇಟು ನೀಡಿದರು.
ಪ್ರಧಾನಿ ನರೇಂದ್ರ ಮೋದಿ ಹೇಳಿದ ಭರವಸೆ ಯಾವುದನ್ನು ಈಡೇರಿಸಿದ್ದಾರೆ ಎಂಬುದನ್ನು ತಿಳಿಸಲಿ. ೧೦ ವರ್ಷದಲ್ಲಿ ೨೦ ಕೋಟಿ ಜನರಿಗೆ ಉದ್ಯೋಗ ಸೃಷ್ಟಿಯಾಗಬೇಕಿತ್ತು. ಆದರೆ ನಿರುದ್ಯೋಗ ಸೃಷ್ಟಿ ಮಾಡಿರುವುದು ಕೇಂದ್ರ ಸರ್ಕಾರದ ದೊಡ್ಡ ಸಾಧನೆ ಎಂದು ಆರೋಪಿಸಿದ ಶಾಸಕ, ಗೃಹಲಕ್ಷ್ಮೀ ಯೋಜನೆ ಮೂಲಕ ಮನೆಯ ಯಜಮಾನಿಗೆ ಪ್ರತಿ ತಿಂಗಳು ₹೨ ಸಾವಿರ, ವಿದ್ಯುತ್ ಬಿಲ್, ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣ, ಅನ್ನಭಾಗ್ಯ ಯೋಜನೆ, ಯುವನಿಧಿ ಯೋಜನೆಯನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಸಮರ್ಪಕವಾಗಿ ಅನುಷ್ಠಾನಗೊಳಿಸಿದೆ. ಬಿಜೆಪಿಗರಿಗೆ ತಾಕತ್ತು ಇದ್ದರೆ ಗ್ಯಾರಂಟಿ ಯೋಜನೆಗಳನ್ನು ಬೇಡ ಎಂದು ಜನರ ಬಳಿ ಹೇಳಲಿ. ಆಗ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಸುದ್ದಿಗೋಷ್ಠಿಯಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಗೌಡ, ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಪ್ರಸನ್ನ ಶೆಟ್ಟಿ, ನಗರಸಭಾ ಸದಸ್ಯರಾದ ಖಾದರ್ ಆನವಟ್ಟಿ, ಶಮೀಮಾ ಬಾನು ಶಿಕಾರಿಪುರ, ರುಬೇಕಾ, ಗೀತಾ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಶ್ರೀನಿವಾಸ ನಾಯ್ಕ ಗಾಯತ್ರಿ ನೇತ್ರೇಕರ ಮತ್ತಿತರರು ಇದ್ದರು.ವಸೂಲಿ ಮಾಡುತ್ತಿದ್ದರೆ ಗಮನಕ್ಕೆ ತನ್ನಿಲಕ್ಷ ಲಕ್ಷ ಹಣ ಕೊಟ್ಟರೆ ಮಾತ್ರ ಫಾರಂ ನಂಬರ್- ೩ ಪಡೆಯಲು ಸಾಧ್ಯವಿದೆ ಎಂದು ಸಾರ್ವಜನಿಕರು ಆರೋಪ ಮಾಡುತ್ತಿದ್ದಾರೆ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಶಾಸಕ, ಫಾರಂ ನಂಬರ್- ೩, ಇ ಸ್ವತ್ತು ಸೇರಿದಂತೆ ನಗರಸಭೆಯಲ್ಲಿ ಇನ್ನಿತರ ಕೆಲಸಕ್ಕೆ ಸಾರ್ವಜನಿಕರಿಂದ ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವುದನ್ನು ನನ್ನ ಗಮನಕ್ಕೆ ತಂದರೆ, ನಾನೇ ಸ್ವತಃ ಅವರ ಕೆಲಸ ಮಾಡಿಕೊಡುತ್ತೇನೆ ಎಂದರು.