ಶ್ರೀಶೈಲ ಮಠದ
ಪ್ರಶ್ನೆ- ಬಿಜೆಪಿಯಲ್ಲಿ ಟಿಕೆಟ್ ಸಿಗದೆ ಶೆಟ್ಟರ್ ಕಾಂಗ್ರೆಸ್ ಸೇರಿ ಮತ್ತೆ ಬಿಜೆಪಿ ಸೇರಿದ್ದಾರೆ. ನೀವೊಬ್ಬ ಅವಕಾಶವಾದಿ ರಾಜಕಾರಣಿ ಎಂದು ಎದುರಾಳಿಗಳ ಆರೋಪಕ್ಕೆ ಏನು ಹೇಳ್ತೀರಿ?
ಉತ್ತರ: ನನ್ನ ವಿರುದ್ಧ ಮಾತನಾಡಲು ಕಾಂಗ್ರೆಸ್ಸಿಗರಿಗೆ ಯಾವುದೇ ವಿಷಯ ಇಲ್ಲ. ಯಾವ ಸಂದರ್ಭದಲ್ಲಿ ಕಾಂಗ್ರೆಸ್ಗೆ ಹೋದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಮರಳಿ ಬಿಜೆಪಿ ಸೇರಿದ್ದೂ ಆಗಿದೆ. ನಾನಂತು ಅವಕಾಶವಾದಿ ರಾಜಕಾರಣಿಯಲ್ಲ. ಪಕ್ಷಕ್ಕಾಗಿ 40 ವರ್ಷಗಳಿಂದ ದುಡಿದಿದ್ದೇನೆ. ನನ್ನ ಹಿರಿತನ ನೋಡಿ ಪಕ್ಷ ನನಗೆ ನೀಡಿದ್ದ ವಿವಿಧ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ.ಪ್ರಶ್ನೆ- ಬೆಳಗಾವಿಗೆ ಶೆಟ್ಟರ್ ಅವರು ಅನ್ಯಾಯ ಮಾಡುತ್ತಲೇ ಬಂದಿದ್ದಾರೆ ಎಂದು ಎದುರಾಳಿಗಳು ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದಾರಲ್ವ?
ಉತ್ತರ: ರಾಜ್ಯ ರಾಜಕಾರಣದಲ್ಲಿದ್ದವರು ರಾಷ್ಟ್ರರಾಜಕಾರಣಕ್ಕೆ ಹೋಗಬಾರದೆಂಬ ನಿಯಮವೇನಿಲ್ಲ. ಶಾಸಕನಾಗಿ ಈವರೆಗೂ ರಾಜ್ಯ ರಾಜಕಾರಣದಲ್ಲಿ ಸೇವೆ ಸಲ್ಲಿಸಿದ್ದೇನೆ. ಈಗ ಲೋಕಸಭೆಯಲ್ಲಿ ಮತ್ತೊಮ್ಮೆ ಜನ ಸೇವೆಗೆ ಮುಂದಾಗಿದ್ದೇನೆ. ಇದು ಜನ ಸೇವೆಗೆ ಹೊಸ ಅವಕಾಶ.
ಉತ್ತರ: ಕಾಂಗ್ರೆಸ್ನವರು ಗ್ಯಾರಂಟಿ ಮೇಲೆ ಹೋಗುತ್ತಾರೆ. ನಾವು ರಾಷ್ಟ್ರೀಯ ವಿಚಾರಧಾರೆ ಮತ್ತು ನಾಯಕತ್ವದ ಆಧಾರದ ಮೇಲೆ ಚುನಾವಣೆ ಎದುರಿಸುತ್ತೇವೆ. ದೇಶದ, ಜನರ ಸುರಕ್ಷತೆ, ಭದ್ರತೆ ಮತ್ತು ಅಭಿವೃದ್ಧಿ, ವಿದೇಶಿ ಆರ್ಥಿಕ ನೀತಿಯಂಥ ಗಟ್ಟಿ ನಿರ್ಧಾರ ಕೈಗೊಳ್ಳುವ ನಾಯಕ ಎಂದರೆ ಅದು ಮೋದಿ. ಮೋದಿ ಮತ್ತೊಂದು ಬಾರಿ ಪ್ರಧಾನ ಮಂತ್ರಿಯಾಗಬೇಕೆಂದು ದೇಶದ ಜನತೆ ಬಯಸಿದ್ದಾರೆ. ದೇಶದ ಅಭಿವೃದ್ಧಿಗೆ ಮೋದಿಯೇ ಗ್ಯಾರಂಟಿ ಆಗಿದ್ದಾರೆ.
ಉತ್ತರ: ಬೆಳಗಾವಿ ಕ್ಷೇತ್ರದಿಂದ ನನ್ನ ಹೆಸರು ಕೇಳಿ ಬಂದಾಗ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದು ನಿಜ. ಆದರೆ ಟಿಕೆಟ್ ಘೋಷಣೆಯಾದ ಬಳಿಕ ಎಲ್ಲರೂ ಕೂಡಿ ಒಂದಾಗಿ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಪಕ್ಷದ ಎಲ್ಲ ಪದಾಧಿಕಾರಿಗಳು ಪ್ರಚಾರ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಬಿಜೆಪಿ ನಾಯಕರಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ.ಪ್ರಶ್ನೆ- ಬೆಳಗಾವಿಗಿಂತಲೂ ಮೊದಲು ಹಾವೇರಿ, ಧಾರವಾಡ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಿರಿ ಎನ್ನಲಾಗಿತ್ತು. ಅಲ್ಲಿ ಟಿಕೆಟ್ ಸಿಗದ ಮೇಲೆ ಇಲ್ಲಿಗೆ ಬಂದಿದ್ದಾರೆಂಬ ಮಾತು ಕೇಳಿಬರುತ್ತಿರುವುದಕ್ಕೆ ಏನಂತೀರಿ?
ಪ್ರಶ್ನೆ- ನಿಮ್ಮ ಬೀಗರೇ ಸಂಸದರಾಗಿದ್ದವರು. ಅವರ ಬದಲು ಇದೀಗ ನೀವೇ ಕಣಕ್ಕಿಳಿದಿದ್ದೀರಿ. ಇದಕ್ಕೆ ಅವರ ಸಮ್ಮತಿ ಇತ್ತೇ?
ಉತ್ತರ: ಮೋದಿ ಮತ್ತು ಕೇಂದ್ರ ಸರ್ಕಾರದ 10 ವರ್ಷಗಳ ಸಾಧನೆಗಳ ಮೇಲೆ ನಾವು ಮತಯಾಚಿಸುತ್ತಿದ್ದೇವೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಇಂಡಿಯಾ ಕೂಟದಲ್ಲಿ ಪ್ರಧಾನಿಯಾಗುವ ಅಭ್ಯರ್ಥಿ ಯಾರೆಂಬುದನ್ನು ಮೊದಲು ಹೇಳಲಿ. ಅವರಿಗೆ ಮೋದಿ, ಬಿಜೆಪಿ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ.
ಉತ್ತರ: ಹುಬ್ಬಳ್ಳಿ ನನ್ನ ಜನ್ಮಭೂಮಿ ಆಗಿದ್ದರೂ ಬೆಳಗಾವಿ ನನ್ನ ಕರ್ಮಭೂಮಿ. 30 ವರ್ಷಗಳಿಂದ ಈ ನೆಲದ ಜತೆ ನಂಟಿದೆ. ಕಾಂಗ್ರೆಸ್ನವರಿಗೆ ಯಾವುದೇ ವಿಷಯ ಇಲ್ಲದೆ ಹೊರಗಿನವನು ಎಂದು ನನ್ನ ಬಗ್ಗೆ ಆರೋಪ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಕೇರಳದ ವಯನಾಡು, ಸಚಿವ ಶಿವಾನಂದ ಪಾಟೀಲ ಪುತ್ರಿ ಬಾಗಲಕೋಟೆ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರಲ್ವಾ? ಇದರ ಬಗ್ಗೆ ಯಾಕೆ ಮಾತನಾಡಲ್ಲ.
ಪ್ರಶ್ನೆ- ಕೇಂದ್ರ ಸರ್ಕಾರ ಉದ್ಯಮಿಗಳಿಂದ ಹಫ್ತಾ ವಸೂಲಿ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರಲ್ವಾ?ಉತ್ತರ: ಮೋದಿ ಆಡಳಿತದ 10 ವರ್ಷದಲ್ಲಿ ಭ್ರಷ್ಟಾಚಾರ ನಡೆದಿದ್ದರೆ ಆ ಬಗ್ಗೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಲೋಕಸಭೆಯಲ್ಲಿ ಮಾತನಾಡಿದ್ದಾರಾ? ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದ್ದಾರಾ? ಸುಮ್ಮನೆ ಟೀಕೆ ಮಾಡುತ್ತಿದ್ದಾರೆ. ಅವರಿಗೆ ಮಾತನಾಡಲು ವಿಷಯಗಳಿಲ್ಲ. ಯುಪಿಎ ಸರ್ಕಾರದ ಅವಧಿಯಲ್ಲಿ ಲಕ್ಷಾಂತರ ಕೋಟಿ ರು. ಹಗರಣ ನಡೆದಿವೆ. ಆ ಕುರಿತು ತನಿಖೆ ನಡೆಯುತ್ತಿವೆ.
ಪ್ರಶ್ನೆ- ಈ ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ನಿಮ್ಮ ಪಕ್ಷದ ನಾಯಕರು ಹೇಳುತ್ತಿದ್ದಾರೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ರಚನೆಯಾಗುವ ವಿಶ್ವಾಸ ಇದೆಯಾ?ಉತ್ತರ: ಕಾಂಗ್ರೆಸ್ನಲ್ಲಿ ಒಳ ಬೇಗುದಿ ಬಹಳ ಇದ್ದು, ಯಾವುದೇ ಸಂದರ್ಭದಲ್ಲೂ ಸ್ಫೋಟವಾಗಬಹುದು. ಕಾಂಗ್ರೆಸ್ನ ಗುಬ್ಬಿ ಶಾಸಕರೇ ಸರ್ಕಾರ ವಿರುದ್ಧ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಶಿಷ್ಯ ಬೈರತಿ ಸುರೇಶ್ ಈ ಚುನಾವಣೆಯಲ್ಲಿ ಹೆಚ್ಚು ಸೀಟು ಬಾರದಿದ್ದರೆ ಸಿಎಂ ಅಧಿಕಾರದಿಂದ ಕೆಳಗಿಳಿಯಬೇಕಾಗುತ್ತದೆ ಎಂದಿದ್ದಾರೆ. ಡಿಸಿಎಂ ಶಿವಕುಮಾರ್ ಕೂಡ ಸಿಎಂ ಬದಲಾವಣೆ ಹೈಕಮಾಂಡ್ ತೀರ್ಮಾನಿತ್ತದೆ ಎಂದು ಹೇಳಿದ್ದಾರೆ. ಡಿ.ಕೆ.ಶಿವಕಮಾರ್ ಸಿಎಂ ಆಗಬೇಕೆಂದುಕೊಂಡಿದ್ದಾರೆ. ಆಪರೇಷನ್ ಕಮಲ ಮಾಡುವ ಅಗತ್ಯವೂ ಇಲ್ಲ. ಸರ್ಕಾರ ತಾನಾಗಿಯೇ ಪತನವಾಗುತ್ತದೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುತ್ತದೆ.
ಪ್ರಶ್ನೆ-ಕೇಂದ್ರ ತೆರಿಗೆ ಹಣ ಕೊಟ್ಟಿಲ್ಲ, ಬರ ಪರಿಹಾರ ಕೊಟ್ಟಿಲ್ಲ ಎಂದು ಎದುರಾಳಿಗಳು ಪ್ರಚಾರ ನಡೆಸುತ್ತಿದ್ದಾರೆ. ಅದರಿಂದ ನಿಮಗೆ ಡ್ಯಾಮೇಜ್ ಆಗಲ್ವಾ?ಉತ್ತರ: ತೆರಿಗೆ ಹಣ, ಬರ ಪರಿಹಾರದ ಬಗ್ಗೆ ಲೋಕಸಭೆಯಲ್ಲಿ ಏಕೆ ಚರ್ಚಿಸುವುದಿಲ್ಲ. ನೀತಿ ಆಯೋಗದಲ್ಲಿ ಮುಖ್ಯಮಂತ್ರಿಗಳು ಆರ್ಥಿಕ ಸಮಿತಿ ಸದಸ್ಯರು. ಅಲ್ಲಿ ಕೇಳದೆ ಈಗ ಚುನಾವಣೆ ಹಿನ್ನೆಲೆಯಲ್ಲಿ ರಾಜಕಾರಣಕ್ಕಾಗಿ ಕೇಂದ್ರದ ವಿರುದ್ಧ ಪ್ರಚಾರ ಮಾಡುತ್ತಿದ್ದಾರೆ. ಅವರ ಆರೋಪದಲ್ಲಿ ಯಾವುದೇ ಸತ್ಯ ಇಲ್ಲ, ಇದರಿಂದ ನಮಗೆ ಡ್ಯಾಮೇಜ್ ಆಗುವ ಪ್ರಶ್ನೆಯೇ ಇಲ್ಲ.
ಪ್ರಶ್ನೆ- ಬೆಳಗಾವಿ ಕ್ಷೇತ್ರದಲ್ಲಿ ಜನರ ಪ್ರತಿಕ್ರಿಯೆ ಹೇಗಿದೆ?ಉತ್ತರ: ಬೆಳಗಾವಿ ಜನ ನನ್ನನ್ನು ಪ್ರೀತಿಯಿಂದ ಬರಮಾಡಿಕೊಂಡಿದ್ದಾರೆ, ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದೆ. ಜನ ಹೊರಗಿನವರಂತೆ ನೋಡುತ್ತಿಲ್ಲ. ನಮ್ಮವರೇ ಎಂಬಂತೆ ಬೆಂಬಲಿಸುತ್ತಿದ್ದಾರೆ. ನನ್ನ ಜೀವನದಲ್ಲಿ ಇಷ್ಟೊಂದು ಜನ ಬೆಂಬಲ ನೋಡಿರಲಿಲ್ಲ.
ಪ್ರಶ್ನೆ- ಎಂಇಎಸ್ ಸ್ಪರ್ಧೆಯಿಂದ ಮರಾಠ ಮತಗಳ ವಿಭಜನೆಯಾಗಿ ಬಿಜೆಪಿ ಮೇಲೆ ಪರಿಣಾಮ ಬೀಳಲಿದೆಯೇ?ಉತ್ತರ: ಬೆಳಗಾವಿ ಜನ ಯಾವಾಗಲೂ ಜಾತಿಬೇಧ ಮರೆತು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸುತ್ತಾ ಬಂದಿದ್ದಾರೆ. ಹಾಗಾಗಿ ಎಂಇಎಸ್ ಸ್ಪರ್ಧೆಯಿಂದಾಗಿ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವ ಪ್ರಶ್ನೆಯೇ ಇಲ್ಲ.ಬಾಕ್ಸ್ ಪ್ರಶ್ನೆ-ಜೆಡಿಎಸ್ ಜತೆಗೆ ಸಖ್ಯ ಬಿಜೆಪಿಗೆ ಅನಿವಾರ್ಯವಿತ್ತಾ? ಅದು ಪಕ್ಷಕ್ಕೆ ವರವಾಗಿದೆಯಾ?ಉತ್ತರ: ಪಕ್ಷದ ರಾಷ್ಟ್ರೀಯ ವರಿಷ್ಠರು ಸ್ಥಳೀಯ ಶಕ್ತಿಗಳನ್ನು ಕ್ರೋಡೀಕರಣ ಮಾಡಿಕೊಂಡು ಪಕ್ಷದ ಹಿತಾಸಕ್ತಿಗಾಗಿ ಹಲವೆಡೆ ಮೈತ್ರಿ ಮಾಡಿಕೊಂಡಿದ್ದಾರೆ. ಅದರಂತೆ ರಾಜ್ಯದಲ್ಲಿ ಜೆಡಿಎಸ್ನೊಂದಿಗೆ ಮೈತ್ರಿ ಮಾಡಿಕೊಳ್ಳಲಾಗಿದೆ. ಸ್ಥಳೀಯ ಮಟ್ಟದಲ್ಲಿ ಜೆಡಿಎಸ್ನ ಶಕ್ತಿ ಚುನಾವಣೆಯಲ್ಲಿ ಪಕ್ಷಕ್ಕೆವರವಾಗಲಿದೆ.
ಪ್ರಶ್ನೆ- ಕ್ಷೇತ್ರದಲ್ಲಿ ನಿಮ್ಮ ಎದುರಾಳಿ ಕಾಂಗ್ರೆಸ್ನ ಯುವಕ ಮೃಣಾಲ್ ಹೆಬ್ಬಾಳ್ಕರ್. ಅವರ ತಾಯಿ ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ಸಚಿವರು. ಅವರನ್ನು ಹೇಗೆ ಎದುರಿಸುತ್ತೀರಿ?ಉತ್ತರ: ಎದುರಾಳಿಗಳು ಬಲಿಷ್ಠರೋ, ಬಲಹೀನರೋ ಎಂಬುದರ ಬಗ್ಗೆ ನಾನು ಲೆಕ್ಕಹಾಕಲ್ಲ. ನಾನು ವಕೀಲನಾಗಿ ಕೆಲಸ ಮಾಡಿದ್ದೇನೆ. ಚುನಾವಣೆಯಲ್ಲೂ ನನ್ನ ಪರ ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದೇನೆ. ನನ್ನ ಅನುಭವ ಖಂಡಿತವಾಗಿಯೂ ಚುನಾವಣೆಯಲ್ಲಿ ಕೆಲಸ ಮಾಡುತ್ತದೆ.