ಕನ್ನಡಪ್ರಭ ವಾರ್ತೆ ಕಲಬುರಗಿ
ಶೆಟ್ಟರ್ ಗೂಡಿಗೆ ಮರಳುತ್ತಾರೆಂಬ ಮಾತುಗಳಿವೆಯಲ್ಲ ಎಂದು ಸುದ್ದಿಗಾರರು ಗಮನ ಸೆಳೆದಾಗ, ಅಂತಹ ಯಾವುದೇ ಬೆಳವಣಿಗೆ ಇಲ್ಲ, ತಮಗೆ ಯಾರೂ ಸಂಪರ್ಕ ಮಾಡಿಲ್ಲ. ಕಾಂಗ್ರೆಸ್ನಲ್ಲಿ ಸಮಾಧಾನದಿಂದಲೇ ಇರುವಾಗ ಇಂತಹ ಪ್ರಶ್ನೆಗಳೆ ಉದ್ಭವಿಸೋದಿಲ್ಲವೆಂದು ಹೇಳಿದ್ದಾರೆ.
ಕಸಾಪ ಆಯೋಜಿಸಿದ್ದ ವಚನ ಸಾಹಿತ್ಯ ಸಮ್ಮೇಳನದಲ್ಲಿ ಮುಖ್ಯಅತಿಥಿಗಳಾಗಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು, ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡುತ್ತ, ನಾನೂ ಯಾವುದೇ ಷರತ್ತು ಹಾಕಿ ಬಂದವನಲ್ಲ. ಕಾಂಗ್ರೆಸ್ನಲ್ಲಿ ಸಮಾಧಾನದಿಂದಲೇ ಇದ್ದೇನಲ್ಲ ಎಂದು ಹೇಳಿದರು.ಧಾರವಾಡ ಲೋಕ ಸಮರದ ಆಕಾಂಕ್ಷಿ ನಾನಲ್ಲವೆಂದು ಸ್ಪಷ್ಟಪಡಿಸಿದ ಶೆಟ್ಟರ್, ಬಸವಣ್ಣನವರನ್ನು ರಾಜ್ಯ ಸರ್ಕಾರ ಸಾಂಸ್ಕತಿಕ ನಾಯಕನೆಂದು ಘೋಷಿಸಿರೋದು ಚುನಾವಣೆ ಗಿಮಿಕ್ ಅಲ್ಲ. ತುಂಬ ದಿನದ ಬೇಡಿಕೆಗೆ ಸರ್ಕಾರ ಸೂಕ್ತ ಹಾಗೂ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದರು.
ಅಯೋಧ್ಯೆಗೆ ಆಹ್ವಾನ ನೀಡಿ ಕರೆಯುತ್ತಿದ್ದಾರೆ ತಮಗಂತೂ ಆಹ್ವಾನ ಬಂದಿಲ್ಲ. ಹೀಗಾಗಿ ಈ ಸಮಯದಲ್ಲಿ ಸದ್ಯ ಅಯೋಧ್ಯೆಗೆ ಹೋಗೋದಿಲ್ಲ ಎಂದು ಹೇಳಿದ ಶೆಟ್ಟರ್ ಬರುವ ದಿನಗಳಲ್ಲಿ ರಾಮ ಮಂದಿರಕ್ಕೆ ಹೋಗಿ ಸಂದರ್ಶಿಸೋದು, ಅಲ್ಲಿನ ಕಲಾತ್ಮಕತೆ ಆಸ್ವಾದಿಸೋದು ಅಯೋಧ್ಯೆ ಭೇಟಿ ನೀಡೋದು ನಿಶ್ಚಿತ ಎಂದರು.
ರಾಮ ಮಂದಿರ ಉದ್ಘಾಟನೆಗೆ ಹೋಗದೆ ಕಾಂಗ್ರೆಸ್ ಹಿಂದು ವಿರೋಧಿತನ ತೋರುತ್ತಿದೆ ಎಂಬ ಮಾತಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಹಿಂದು ವಿರೋಧಿಯಾಗಿದ್ದರೆ ಅಸೆಂಬ್ಲಿಯಲ್ಲಿ ಬಹುಮತ ಹೇಗೆ ಬರುತ್ತಿತ್ತು? ಕಾಂಗ್ರೆಸ್ಗೆ ಹಿಂದುಗಳು ಮತ ಹಾಕಿಲ್ಲವೆ? ಇಂತಹ ಚರ್ಚೆಗಳಲ್ಲಿ ತಮಗೆ ಆಸಕ್ತಿ ಇಲ್ಲ ಎಂದರು.ರಾಜಕೀಯದಲ್ಲಿ ಧರ್ಮ ಬೇಕು, ಧರ್ಮದಲ್ಲಿ ರಾಜಕಾರಣ ಬೇಡ. ಆದರೆ ಲೋಕಸಭೆ ಚುನಾವಣೆ ಮುಂದಿರೋದರಿಂದ ರಾಮ ಮಂದಿರ ಉದ್ಘಾಟನೆಯ ಈ ಬೆಳವಣಿಗೆ ರಾಜಕೀಕರಣವಾಗುತ್ತಿದೆ ಎಂದರಲ್ಲದೆ, ಈ ವಿಚಾರ ರಾಜಕೀಯಕ್ಕೆ ಎಳೆದು ತಂದವರೆ ಬಿಜೆಪಿ ಮುಖಂಡರು ಎಂದರು.