ನಂದಿನಿ ಉತ್ಪನ್ನಗಳಿಗೆ ನಾನೇ ಬ್ರ್ಯಾಂಡ್ ಅಂಬಾಸಿಡರ್: ಡಿಕೆಸು

KannadaprabhaNewsNetwork |  
Published : Jul 15, 2025, 11:45 PM IST

ಸಾರಾಂಶ

ರಾಮನಗರ: ನಂದಿನಿ ಉತ್ಪನ್ನಗಳಿಗೆ ಬೇರೆ ಯಾರೂ ಅಲ್ಲ, ನಾನೇ ಬ್ರ್ಯಾಂಡ್ ಅಂಬಾಸಿಡರ್ ಎಂದು ಬಮೂಲ್ ಅಧ್ಯಕ್ಷರಾದ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದರು.

ರಾಮನಗರ: ನಂದಿನಿ ಉತ್ಪನ್ನಗಳಿಗೆ ಬೇರೆ ಯಾರೂ ಅಲ್ಲ, ನಾನೇ ಬ್ರ್ಯಾಂಡ್ ಅಂಬಾಸಿಡರ್ ಎಂದು ಬಮೂಲ್ ಅಧ್ಯಕ್ಷರಾದ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದರು.

ಶ್ರೀ ಚಾಮುಂಡೇಶ್ವರಿ ಅಮ್ಮನವರ ಕರಗ ಮಹೋತ್ಸವದ ಪ್ರಯುಕ್ತ ಮಂಗಳವಾರ ರಾತ್ರಿ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಾಡಿನ ರೈತರ ಹೆಮ್ಮೆಯ ನಂದಿನಿಯನ್ನು ಬಳಸಿ ಬೆಳೆಸಬೇಕಿದೆ. ರೈತರು ಮತ್ತು ಗ್ರಾಹಕರನ್ನು ಉಳಿಸಲು ನಂದಿನಿ ಹಾಲು, ತುಪ್ಪಾ ಹಾಗೂ ಉತ್ಪನ್ನಗಳನ್ನೇ ಬಳಕೆ ಮಾಡಬೇಕು. ಪ್ರತಿ ಮನೆಗಳಲ್ಲಿ ಸಮೃದ್ಧಿಯಾಗಿ ನಂದಿನಿ ಉತ್ಪನ್ನಗಳನ್ನು ಖರೀದಿಸಿ ರೈತರನ್ನು ಉಳಿಸುವ ಕೆಲಸ ಮಾಡಬೇಕು. ನಾನೊಬ್ಬ ನಂದಿನಿಯ ಬ್ರ್ಯಾಂಡ್ ಅಂಬಾಸಿಡರ್ ಆಗಿ ಮನವಿ ಮಾಡುತ್ತಿದ್ದೇನೆ ಎಂದರು.

ನನ್ನನ್ನು ಕೆಲವರು ಯಾರನ್ನು ಬ್ರ್ಯಾಂಡ್ ಅಂಬಾಸಿಡರ್ ಮಾಡುತ್ತೀರಾ ಅಂತ ಕೇಳುತ್ತಿದ್ದರು. ಅದಕ್ಕೆ ನಾನೇ ಇದೀನಲ್ಲ, ಬೇರೆಯವರನ್ನು ಏಕೆ ಬ್ರ್ಯಾಂಡ್ ಅಂಬಾಸಿಡರ್ ಮಾಡಲಿ. ಆದ್ದರಿಂದ ನಂದಿನಿಯನ್ನು ಉಳಿಸಿ, ಬೆಳೆಸಿ, ರಕ್ಷಿಸುವ ಕೆಲಸ ಮಾಡುವಂತೆ ಡಿ.ಕೆ.ಸುರೇಶ್ ಮನವಿ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೊಸ ಅವಕಾಶ ತೆರೆದ ಸಮಕಾಲೀನ ಭಾಷಾ ತಂತ್ರಜ್ಞಾನ: ಗೀತಾ ವಾಲೀಕಾರ್
ವಸಾಹತುಶಾಹಿತ್ವ ಒಳಿತು ಕೆಡಕಿನ ಸಂತೆ: ಡಾ. ಕೆ. ವೆಂಕಟೇಶ