ಮಾಗಡಿ: ನಾನು ಯಾರಿಗೂ ಮೋಸ ಮಾಡಿ ಜೀವನ ಮಾಡುತ್ತಿಲ್ಲ, ನಮ್ಮ ತಂದೆಯವರ ಪಿತ್ರಾರ್ಜಿತ ಆಸ್ತಿ ಇದ್ದು ನಾವು ಗೌರವಯುತವಾಗಿ ಬದುಕುತ್ತಿದ್ದೇವೆ ಎಂದು ಶಾಸಕ ಬಾಲಕೃಷ್ಣ ಹೇಳಿದರು.
100 ಕೋಟಿ ಅನುದಾನ ಬಂದಿದೆ: ಸಂಸದ ಡಿ.ಕೆ. ಸುರೇಶ್ ಅವರ ಶ್ರಮದಿಂದ ತಾಲೂಕಿಗೆ ಕೇವಲ 6 ತಿಂಗಳಲ್ಲಿ 100 ಕೋಟಿ ಅನುದಾನ ತಂದಿದ್ದೇವೆ. ಇನ್ನಷ್ಟು ಅನುದಾನಗಳು ಬರಲಿದ್ದು, ಎಂಪಿ ಚುನಾವಣೆ ಇನ್ನೂ ಒಂದು ವರ್ಷ ತಡವಾಗಿದ್ದರೆ ಯಾವ ರೀತಿ ಕ್ಷೇತ್ರದ ಅಭಿವೃದ್ಧಿ ಮಾಡುತ್ತಿದ್ದೇವೆ ಎಂಬುದನ್ನು ತೋರಿಸುತ್ತಿದ್ದೆವು. ನಾನು ಉಡಾಫೆ ರಾಜಕಾರಣ ಮಾಡುವುದಿಲ್ಲ. ಕ್ಷೇತ್ರದ ಅಭಿವೃದ್ಧಿಗಾಗಿ ಇನ್ನಷ್ಟು ಕಾರ್ಯಕ್ರಮಗಳನ್ನು ಹಾಕಿಕೊಂಡಿದ್ದೇವೆ. ಜನ ನಮಗೆ ಐದು ವರ್ಷ ಅಧಿಕಾರ ಕೊಟ್ಟಿದ್ದು, ತಾವು ವಿರೋಧ ಪಕ್ಷದಲ್ಲಿ ಇದ್ದುಕೊಂಡು ಅಭಿವೃದ್ಧಿಗೆ ಸಹಕಾರ, ಸಲಹೆ ನೀಡಲಿ. ಅದನ್ನು ಬಿಟ್ಟು ಈ ರೀತಿ ಕೊಂಕು ಮಾತಾಡುವುದು ಬಿಡಬೇಕು ಎಂದರು.
ಕೋಟ್............ತಾಲೂಕಿಗೆ ಹೇಮಾವತಿ ನೀರು ತರುತ್ತೇವೆ. ಅಪೂರ್ಣಗೊಂಡಿರುವ ಹೇಮಾವತಿ ಕಾಮಗಾರಿ, ಕೆಶಿಫ್ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುತ್ತೇವೆ. ಕ್ಷೇತ್ರದ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ.
ಗೃಹಲಕ್ಷ್ಮಿ ಫಲಾನುಭವಿಗಳಿಂದ ಮಾಹಿತಿ ಪಡೆಯಿರಿ
ಕಾಂಗ್ರೆಸ್ ಪಕ್ಷದ ಐದು ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆಯೂ ಒಂದು. ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಸಹಕಾರಿಯಾಗುವ ಕುರಿತು ಸಮಾವೇಶ ಮಾಡಿ ಸಾಧಕ ಬಾಧಕಗಳ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ವಿರೋಧ ಪಕ್ಷದವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ಯೋಜನೆಯ ಮಹತ್ವದ ಬಗ್ಗೆ ಫಲಾನುಭವಿಗಳಿಂದಲೇ ಮಾಹಿತಿ ಪಡೆದುಕೊಳ್ಳಲಿ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರಿಗೂ ಆಹ್ವಾನ ನೀಡಿದ್ದು ಕಾರ್ಯಕ್ರಮಕ್ಕೆ ಬಂದು ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ತಿಳಿಸಬೇಕೆಂದು ಶಾಸಕ ಬಾಲಕೃಷ್ಣ ಮನವಿ ಮಾಡಿದರು.