ಕನ್ನಡಪ್ರಭ ವಾರ್ತೆ ಉಡುಪಿ
ಯಕ್ಷಗಾನದೊಳಗೆ ಸಲಿಂಗಕಾಮ ಬೆಳೆಯುತ್ತದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ನೀಡಿರುವ ಹೇಳಿಕೆಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ರಾಜ್ಯಾಧ್ಯಕ್ಷರು ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಪುರುಷೋತ್ತಮ ಬಿಳಿಮಲೆ ಯಾವ ಅರ್ಥದಲ್ಲಿ ಈ ಮಾತು ಹೇಳಿದ್ದಾರೋ ಗೊತ್ತಿಲ್ಲ. ನಾನು ಅವರನ್ನು ಸಂಪರ್ಕ ಮಾಡಲು ಪ್ರಯತ್ನ ಮಾಡಿರುವೆ. ಆದರೆ ಅವರ ಫೋನ್ ಸ್ವಿಚ್ ಆಫ್ ಇತ್ತು. ಪುರುಷೋತ್ತಮ ಬಿಳಿಮಲೆ ರಾಷ್ಟ್ರ ಮಟ್ಟದ ಮೇಧಾವಿ ಸಾಹಿತಿ. ಸಾಮಾನ್ಯ ವ್ಯಕ್ತಿಗಳು ಈ ಮಾತು ಹೇಳಿದರೆ ಖಂಡಿಸಬಹುದಿತ್ತು ಎಂದರು.ಈ ಸಮಸ್ಯೆ ಗೊಂದಲ ಆಗದಂತೆ ಬಗೆಹರಿಯಲಿ. ಕಲಾವಿದರು ಪ್ರತಿಭಟನೆಗೆ ಮುಂದಾಗಬಾರದು, ಚರ್ಚೆಯನ್ನು ಸೌಹಾರ್ದಯುತವಾಗಿ ಬಗೆಹರಿಸೋಣ ಎಂದು ಹೇಳಿದರು.