ನನಗೆ ಜೀವ ಭಯವಿದೆ: ಶಂಭುಲಿಂಗನಗೌಡ

KannadaprabhaNewsNetwork |  
Published : Nov 22, 2023, 01:00 AM IST
21ಕೆಪಿಎಲ್22 ಕೊಪ್ಪಳ  ಮೀಡಿಯಾ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಕಾರಿನ ಕೀ ತೋರಿಸುತ್ತಿರುವುದು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಕೊಪ್ಪಳನನ್ನ ಕಾರು ಕಳ್ಳತನವಾಗಿದ್ದು, ಈ ಕುರಿತು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇನೆ. ಮನೆ ಮುಂದಿನ ಕಾರು ಕದ್ದು ಒಯ್ದವರು ನನ್ನ ಜೀವಕ್ಕೆ ಅಪಾಯ ತಂದೊಡ್ಡುವ ಸಾಧ್ಯತೆ ಇದೆ. ಹೀಗಾಗಿ, ನನಗೆ ಜೀವ ಭಯವಿದೆ ಎಂದು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ್ ಹಲಿಗೇರಿ ಹೇಳಿದರು.ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ತಮ್ಮ ಅಳಲು ತೊಡಿಕೊಂಡರು.

ನನ್ನ ಕಾರನ್ನೇ ಕದ್ದವರು ನನ್ನನ್ನು ಬಿಟ್ಟಾರೆಯೇ ?

ಈಗಲೂ ನಾನೇ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ

ಕನ್ನಡಪ್ರಭ ವಾರ್ತೆ ಕೊಪ್ಪಳ

ನನ್ನ ಕಾರು ಕಳ್ಳತನವಾಗಿದ್ದು, ಈ ಕುರಿತು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇನೆ. ಮನೆ ಮುಂದಿನ ಕಾರು ಕದ್ದು ಒಯ್ದವರು ನನ್ನ ಜೀವಕ್ಕೆ ಅಪಾಯ ತಂದೊಡ್ಡುವ ಸಾಧ್ಯತೆ ಇದೆ. ಹೀಗಾಗಿ, ನನಗೆ ಜೀವ ಭಯವಿದೆ ಎಂದು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ್ ಹಲಿಗೇರಿ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ತಮ್ಮ ಅಳಲು ತೊಡಿಕೊಂಡರು.

ನಿಯಮ ಬಾಹಿರವಾಗಿ ನನ್ನ ವಿರುದ್ಧ ಅವಿಶ್ವಾಸ ಮಂಡಿಸಿ ಮಂಡ್ಯ ನಾಗೇಶ ಅಧ್ಯಕ್ಷರೆಂದು ಸ್ವಯಂ ಘೋಷಣೆ ಮಾಡಿದ್ದಾರೆ. ಇದಕ್ಕೆ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ ಸಾಥ್ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ನನ್ನನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಮಾಡಿರುವ ಅವಿಶ್ವಾಸದ ವಿರುದ್ಧ ಈಗಾಗಲೇ ನಾನು ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯಾಲಯವೂ ವಿಚಾರಣೆ ಕೈಗೆತ್ತಿಕೊಂಡಿದೆ. ನಾನು ನ್ಯಾಯಾಲಯದ ತೀರ್ಪಿಗೆ ಬದ್ಧವಾಗಿರುತ್ತೇನೆ. ನನ್ನ ಬಳಿ ಒಂದು ಕೀ ಇತ್ತು. ಅದು ಈಗಲೂ ನನ್ನ ಬಳಿಯೇ ಇದೆ. ಇನ್ನೊಂದು ಕೀ ಬೆಂಗಳೂರಿನ ಕಚೇರಿಯಲ್ಲಿತ್ತು. ಅದನ್ನು ತೆಗೆದುಕೊಂಡು ಬಂದು ಕಾರು ಒಯ್ಯದಿರಬಹುದು ಎಂಬ ಅನುಮಾನವಿದೆ ಎಂದರು.

ಕಾನೂನು ಬಾಹಿರ:

ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷನಾಗಿ ಇದ್ದರೂ ನನ್ನ ವಿರುದ್ಧ ನಿಯಮ ಬಾಹಿರವಾಗಿ ಹೋಟೆಲ್ ನಲ್ಲಿ ಅವಿಶ್ವಾಸ ಮಂಡಿಸಲಾಗಿದೆ. ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ ಅಧಿಕಾರ ದುರುಪಯೋಗಪಡಿಸಿಕೊಂಡು ಸಭೆ ನಡೆಸಿ ಕಾನೂನು ಬಾಹಿರವಾಗಿ ಅವಿಶ್ವಾಸ ಮಂಡಿಸಿದ್ದಾರೆ. ಬೈಲಾ ಪ್ರಕಾರ ಅವಿಶ್ವಾಸ ಮಂಡಿಸಲು ಅವಕಾಶವೇ ಇಲ್ಲ. 3800 ಪ್ರತಿನಿಧಿಗಳಿಂದ ಆಯ್ಕೆಯಾಗಿರುವ ನನ್ನನ್ನು ಕೆಲವೇ ಕೆಲವರು ಸೇರಿ ಅವಿಶ್ವಾಸ ಮಂಡಿಸಿದ್ದಾರೆ. ಇದಕ್ಕಾಗಿ ನಾನು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದ್ದೇನೆ. ಇದಲ್ಲದೆ ಕಚೇರಿಯಲ್ಲಿ ಭಯದ ವಾತಾವರಣ ಇದ್ದ ಕಾರಣ ನಾನು ಕಚೇರಿಗೆ ಹೋಗಿಲ್ಲ. ಈ ಕುರಿತು ಬೆಂಗಳೂರ ಪೊಲೀಸ್ ಠಾಣೆಯಲ್ಲಿಯೂ ದೂರು ದಾಖಲಿಸಿದ್ದೇನೆ ಎಂದರು.

ಆತಂಕ ಬೇಡ:

ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯರಲ್ಲಿ ನಾನು ವಿನಂತಿ ಮಾಡಿಕೊಳ್ಳುತ್ತೇನೆ. ಸಂಘದ ಇತಿಹಾಸದಲ್ಲಿಯೇ ಇದು ಕೆಟ್ಟ ಬೆಳವಣಿಗೆ. ಇದರಿಂದ ಯಾರು ಸಹ ಆತಂಕಕ್ಕೆ ಒಳಗಾಗುವುದು ಬೇಡ. ಕೆಲವೇ ದಿನಗಳಲ್ಲಿ ಎಲ್ಲವೂ ಸರಿ ಹೋಗುತ್ತದೆ ಎಂದರು.

ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾಧ್ಯಕ್ಷ ಶರಣಬಸನಗೌಡ ಪಾಟೀಲ್, ಪ್ರಧಾನ ಕಾರ್ಯದರ್ಶಿ ಮಂಜುನಾಥ ಅಸುಂಡಿ, ತಾಲೂಕಾಧ್ಯಕ್ಷ ಕೊಟ್ರಪ್ಪ ಗಡಗಿ ಹಾಗೂ ತಾಲೂಕು ಪ್ರಧಾನಕಾರ್ಯದರ್ಶಿ ಬಸವರಾಜ ಕೋಮಲಾಪುರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಹಿಳಾ ಮೀಸಲಾ? ಈಗಲೇ ತನ್ನಿ ಕಾಂಗ್ರೆಸ್‌ ಬೆಂಬಲಿಸುತ್ತೆ
ಸಿದ್ದು ಭೇಟಿಯಾದ ಜಾರಕಿಹೊಳಿ : ಕುತೂಹಲ