ನಾನೆಂದೂ ಜಾತಿ ಆಧಾರಿತ ರಾಜಕಾರಣ ಮಾಡಿಲ್ಲ

KannadaprabhaNewsNetwork |  
Published : Aug 06, 2024, 12:32 AM ISTUpdated : Aug 06, 2024, 12:33 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಮುಧೋಳ ನಾನು ಬಸವಣ್ಣನವರ ತತ್ವಗಳ ಅನುಯಾಯಿ. ಬಸವ ಧರ್ಮವನ್ನು ನಂಬಿ ನಡೆದವ. ಯಾವತ್ತೂ ಜಾತಿ ಆಧಾರಿತ ರಾಜಕೀಯ ಮಾಡಿಲ್ಲ. ಯಾರನ್ನೂ ಡಾ.ಅಂಬೇಡ್ಕರ್ ಅವರಿಗೆ ಹೋಲಿಸಬಾರದು. ಬಸವಣ್ಣನವರ ನಂತರ ಡಾ.ಅಂಬೇಡ್ಕರ ಅವರು ಎಲ್ಲ ಸಮುದಾಯಗಳಿಗೆ ಸಮಾನತೆ ನೀಡಬೇಕೆಂದು ತಮ್ಮ ಜೀವನದುದ್ದಕ್ಕೂ ಶ್ರಮಿಸಿದರು. ಈ ಮಹಾನ್‌ ವ್ಯಕ್ತಿಗಳು ನಮಗೆಲ್ಲ ಮಾರ್ಗದರ್ಶಕರು ಎಂದು ಮಾಜಿ ಡಿಸಿಎಂ, ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಹೇಳಿದರು.

ಕನ್ನಡಪ್ರಭ ವಾರ್ತೆ ಮುಧೋಳ

ನಾನು ಬಸವಣ್ಣನವರ ತತ್ವಗಳ ಅನುಯಾಯಿ. ಬಸವ ಧರ್ಮವನ್ನು ನಂಬಿ ನಡೆದವ. ಯಾವತ್ತೂ ಜಾತಿ ಆಧಾರಿತ ರಾಜಕೀಯ ಮಾಡಿಲ್ಲ. ಯಾರನ್ನೂ ಡಾ.ಅಂಬೇಡ್ಕರ್ ಅವರಿಗೆ ಹೋಲಿಸಬಾರದು. ಬಸವಣ್ಣನವರ ನಂತರ ಡಾ.ಅಂಬೇಡ್ಕರ ಅವರು ಎಲ್ಲ ಸಮುದಾಯಗಳಿಗೆ ಸಮಾನತೆ ನೀಡಬೇಕೆಂದು ತಮ್ಮ ಜೀವನದುದ್ದಕ್ಕೂ ಶ್ರಮಿಸಿದರು. ಈ ಮಹಾನ್‌ ವ್ಯಕ್ತಿಗಳು ನಮಗೆಲ್ಲ ಮಾರ್ಗದರ್ಶಕರು ಎಂದು ಮಾಜಿ ಡಿಸಿಎಂ, ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಹೇಳಿದರು.

ಮುಧೋಳ ತಾಲೂಕು ಪರಿಶಿಷ್ಟ ಜಾತಿ ಸಮುದಾಯಗಳ ವತಿಯಿಂದ ಸೋಮವಾರ ಸ್ಥಳೀಯ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ ಸಮುದಾಯದ ಜನಸಂಖ್ಯಾಧಾರಿತ ಒಳ ಮೀಸಲಾತಿಗಾಗಿ ಶ್ರಮಿಸಿದ್ದಕ್ಕೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಜಾತಿ, ಶೋಷಿತರ ಹಾಗೂ ಅರ್ಥಿಕವಾಗಿ ಹಿಂದುಳಿದ ಜನಾಂಗಕ್ಕೆ ಮೀಸಲಾತಿ ಕಲ್ಪಿಸುವ ಮೂಲಕ ಸರ್ಕಾರದ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಅದರಂತೆ ಪರಿಶಿಷ್ಟ ಜಾತಿಗೆ ಸೇರಿದ 101 ಉಪ ಜಾತಿಗಳ ಜನಾಂಗಕ್ಕೆ ಜನಸಂಖ್ಯೆ ಆಧಾರದ ಮೇಲೆ ಶೇಕಡಾವಾರು ಒಳಮೀಸಲಾತಿ ನೀಡಬೇಕೆಂದು ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಮಾಜಿ ಸಚಿವ ಮಾಧುಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಕೇಂದ್ರಕ್ಕೆ ಶಿಫಾರಸು ಮಾಡಲಾಯಿತು. ಅಷ್ಟರಲ್ಲೇ ವಿಧಾನಸಭೆ ಚುನಾವಣೆ ಘೋಷಣೆಯಾಗಿದ್ದರಿಂದ ಒಳಮೀಸಲಾತಿ ಕುರಿತು ಚರ್ಚೆಗೆ ಬರಲಿಲ್ಲ. ಇತ್ತೀಚೆಗೆ ಸುಪ್ರಿಂ ಕೋರ್ಟ್ ಎಲ್ಲ ರಾಜ್ಯಗಳು ಪರಿಶಿಷ್ಟ ಜಾತಿ ಒಳಮೀಸಲಾತಿ ನೀಡಬೇಕೆಂದು ಆದೇಶಿಸಿದೆ. ನ್ಯಾಯಾಲಯದ ಆದೇಶದಂತೆ ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರ ಹದಿನೈದು ದಿನದೊಳಗಾಗಿ ಒಳಮೀಸಲಾತಿ ಜಾರಿಗೆ ತರಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಜನಾಂದೋಲನ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪರಿಶಿಷ್ಟ ಜಾತಿ ಸಮುದಾಯದ ಮುಖಂಡ ಮುತ್ತಣ್ಣ ಬೆಣ್ಣೂರ ಮಾತನಾಡಿ, ಪರಿಶಿಷ್ಟ ಜಾತಿ ಸಮುದಾಯಗಳ ಒಳ ಮೀಸಲಾತಿ ಹೋರಾಟದ ಕುರಿತು ವಿವರಿಸಿದರು.

ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಜನಸಂಖ್ಯಾಧಾರಿತ ಒಳ ಮೀಸಲಾತಿಗಾಗಿ ಶ್ರಮಿಸಿದ ಸಂಸದ ಗೋವಿಂದ ಕಾರಜೋಳ ಅವರು ವಿವಿಧ ಸಮುದಾಯಗಳ ಮುಖಂಡರು ಸನ್ಮಾನಿಸಿ, ಗೌರವಿಸಿದರು. ಸುನೀಲ ಕಂಬೋಗಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಶಾಸಕ ಸಿದ್ದು ಸವದಿ, ಕೃಷ್ಣಾ ಮಾದರ, ಸಾಬು ದೊಡಮನಿ, ಭೀಮಶಿ ಗೌಂಡಿ, ಸಿದ್ದು ಮಾದರ, ವನಜಾಕ್ಷಿ ಮಂಟೂರ ಹಾಗೂ ಬಿಜೆಪಿ ಮುಖಂಡರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

------

ಪೊಟೋ ಅ.5ಎಂಡಿಎಲ್ 2ಎ, 2ಬಿ. ಪರಿಶಿಷ್ಠಜಾತಿ ಸಮುದಾಯದ ಜನಸಂಖ್ಯಾಧಾರಿತ ಒಳ ಮೀಸಲಾತಿಗಾಗಿ ಶ್ರಮಿಸಿದ ಸಂಸದ ಗೋವಿಂದ ಕಾರಜೋಳರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭವನ್ನು ಅತಿಥಿಗಣ್ಯರು ಉದ್ಘಾಟಿಸಿದರು ನಂತರ ಸಂಸದ ಗೋವಿಂದ ಕಾರಜೋಳರು ಮಾತನಾಡಿದರು.

------------------------------------------------

ಕೋಟ್‌

ಇತ್ತೀಚೆಗೆ ಸುಪ್ರಿಂ ಕೋರ್ಟ್ ಎಲ್ಲ ರಾಜ್ಯಗಳು ಪರಿಶಿಷ್ಠ ಜಾತಿ ಒಳಮೀಸಲಾತಿ ನೀಡಬೇಕೆಂದು ಆದೇಶಿಸಿದೆ. ನ್ಯಾಯಾಲಯದ ಆದೇಶದಂತೆ ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರ ಹದಿನೈದು ದಿನದೊಳಗಾಗಿ ಒಳಮೀಸಲಾತಿ ಜಾರಿಗೆ ತರಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಜನಾಂದೋಲನ ಕೈಗೊಳ್ಳಬೇಕಾಗುತ್ತದೆ.

- ಗೋವಿಂದ ಕಾರಜೋಳ, ಸಂಸದ ಹಾಗೂ ಮಾಜಿ ಡಿಸಿಎಂ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯ ಅಗತ್ಯ
ಪಂ.ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಯೋಜನಾ ಸಭೆ