ಪಾಠಗಳೇ ಮಾಡಿಲ್ಲ, ಪದವಿ ಪರೀಕ್ಷೆ ಎಷ್ಟು ಸರಿ?!

KannadaprabhaNewsNetwork |  
Published : Oct 01, 2025, 01:00 AM IST
30ಕೆಡಿವಿಜಿ2-ದಾವಣಗೆರೆಯಲ್ಲಿ ಪಾಠಗಳೇ ನಡೆಯದೇ, ಪದವಿ ಪರೀಕ್ಷೆ ನಡೆಸದಂತೆ ಒತ್ತಾಯಿಸಿ ಎಐಡಿಎಸ್ಓ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷೆ ಪೂಜಾ ನಂದಿಹಳ್ಳಿ ಮಾತನಾಡಿದರು. ...............30ಕೆಡಿವಿಜಿ3, 4-ದಾವಣಗೆರೆಯಲ್ಲಿ ಪಾಠಗಳೇ ನಡೆಯದೇ, ಪದವಿ ಪರೀಕ್ಷೆ ನಡೆಸದಂತೆ ಒತ್ತಾಯಿಸಿ ಎಐಡಿಎಸ್ಓ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು. | Kannada Prabha

ಸಾರಾಂಶ

ಎರಡೂವರೆ ತಿಂಗಳಿಂದ ಅತಿಥಿ ಉಪನ್ಯಾಸಕರೇ ಇಲ್ಲದೇ ಪಾಠಗಳು ಪೂರ್ಣವಾಗಿಲ್ಲ. ಈ ಹಿನ್ನೆಲೆಯಲ್ಲಿ ಸೆಮಿಸ್ಟರ್ ಪರೀಕ್ಷೆ ನಡೆಸದಂತೆ ಒತ್ತಾಯಿಸಿ ಎಐಡಿಎಸ್‌ಒ ಜಿಲ್ಲಾ ಘಟಕ ನೇತೃತ್ವದಲ್ಲಿ ನಗರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪ್ರತಿಭಟಿಸಿದ್ದಾರೆ.

- ಪ್ರತಿಭಟನೆಯಲ್ಲಿ ಎಐಡಿಎಸ್‌ಒ ಜಿಲ್ಲಾಧ್ಯಕ್ಷೆ ಪೂಜಾ ನಂದಿಹಳ್ಳಿ ಆಕ್ರೋಶ । ದಾ.ವಿ.ವಿ.ಗೆ ತೆರಳಿ ಪರೀಕ್ಷಾಂಗ ಕುಲಸಚಿವರಿಗೆ ಮನವಿ - - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಎರಡೂವರೆ ತಿಂಗಳಿಂದ ಅತಿಥಿ ಉಪನ್ಯಾಸಕರೇ ಇಲ್ಲದೇ ಪಾಠಗಳು ಪೂರ್ಣವಾಗಿಲ್ಲ. ಈ ಹಿನ್ನೆಲೆಯಲ್ಲಿ ಸೆಮಿಸ್ಟರ್ ಪರೀಕ್ಷೆ ನಡೆಸದಂತೆ ಒತ್ತಾಯಿಸಿ ಎಐಡಿಎಸ್‌ಒ ಜಿಲ್ಲಾ ಘಟಕ ನೇತೃತ್ವದಲ್ಲಿ ನಗರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪ್ರತಿಭಟಿಸಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಳಿಯಿಂದ ವಿವಿಧ ಪದವಿ ಕಾಲೇಜುಗಳ ವಿದ್ಯಾರ್ಥಿಗಳು ಆಲ್ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಹೊರಟು ಶ್ರೀ ಜಯದೇವ ವೃತ್ತದಲ್ಲಿ ಸೆಮಿಸ್ಟರ್ ಪರೀಕ್ಷೆ ನಡೆಸದಂತೆ ಒತ್ತಾಯಿಸಿ ಘೋಷಣೆ ಕೂಗಿದರು. ಅನಂತರ ತಾಲೂಕಿನ ತೋಳಹುಣಸೆ ಬಳಿಯ ಶಿವಗಂಗೋತ್ರಿಯ ದಾವಣಗೆರೆ ವಿ.ವಿ.ಗೆ ನಿಯೋಗ ತೆರಳಿ ಮನವಿ ಅರ್ಪಿಸಿದರು.

ಇದೇ ವೇಳೆ ಮಾತನಾಡಿದ ಸಂಘಟನೆ ಜಿಲ್ಲಾಧ್ಯಕ್ಷೆ ಪೂಜಾ ನಂದಿಹಳ್ಳಿ, ಕಳೆದ ಎರಡೂವರೆ ತಿಂಗಳಿನಿಂದಲೂ ಕಾಲೇಜಿನಲ್ಲಿ ಪದವಿ ತರಗತಿಗಳ ಪಾಠಗಳೇ ನಡೆದಿಲ್ಲ. ರಾಜ್ಯದ ಎಲ್ಲ ಸರ್ಕಾರಿ ಪದವಿ ಕಾಲೇಜುಗಳೂ ಅತಿಥಿ ಉಪನ್ಯಾಸಕರನ್ನೇ ಅವಲಂಬಿಸಿವೆ. ಆದರೆ, ಅತಿಥಿ ಉಪನ್ಯಾಸಕರ ನೇಮಿಸದಕಾರಣ ಪಾಠಗಳು ಹಿಂದುಳಿದಿವೆ. ಪದವಿ ವಿದ್ಯಾರ್ಥಿಗಳು ಭವಿಷ್ಯ ಅತಂತ್ರಗೊಂಡ ಆತಂಕದಲ್ಲಿದ್ದಾರೆ. ಇಂತಹ ದುಸ್ಥಿತಿಯಲ್ಲಿ ಯಾವುದೇ ವಿ.ವಿ.ಗಳು ಸೆಮಿಸ್ಟರ್ ಪರೀಕ್ಷೆ ನಡೆಸುವುದು ಸರಿಯಲ್ಲ ಎಂದರು.

ಮುಂದಿನ ವಾರದ ಪದವಿ ಕಾಲೇಜು ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆ ನಡೆಯಬೇಕಾಗಿದೆ. ತರಗತಿಗಳೇ ನಡೆಯದೇ, ಪಾಠವನ್ನೇ ಮಾಡದೇ ಯಾವ ರೀತಿ ಪರೀಕ್ಷೆ ನಡೆಸುತ್ತೀರಿ? ಸರ್ಕಾರವು ಈಗಷ್ಟೇ ಹೊರಡಿಸಿರುವ ಸುತ್ತೋಲೆಯನ್ನು ನಾವು ಸ್ವಾಗತಿಸುತ್ತೇವೆ. ಹಿಂದಿನ ಶೈಕ್ಷಣಿಕ ವರ್ಷದ ಅತಿಥಿ ಉಪನ್ಯಾಸಕರನ್ನೇ ಮುಂದುವರಸುತ್ತೇವೆ ಎಂದು ಸರ್ಕಾರ ಹೇಳಿದೆ. ಆದರೆ, ಪ್ರತಿ ವಿಷಯಕ್ಕೆ ಕನಿಷ್ಠ 30 ಗಂಟೆಗಳ ಪಾಠ ಆಗದೇ, ಈಗಾಗಲೇ ಪರೀಕ್ಷೆ ಘೋಷಿಸಿದ್ದು ಅತ್ಯಂತ ಅನ್ಯಾಯ ಎಂದು ಆಕ್ರೋಶಗೊಂಡರು.

ದಾವಣಗೆರೆ ವಿಶ್ವವಿದ್ಯಾನಿಲಯವು ಪಾಠಗಳೇ ನಡೆಯದೇ, ಪರೀಕ್ಷೆಗಳನ್ನು ಯಾವುದೇ ಕಾರಣಕ್ಕೂ ನಡೆಸಬಾರದು. ಪರೀಕ್ಷೆಗಳನ್ನು, ಪರೀಕ್ಷಾ ಶುಲ್ಕದ ಸುತ್ತೋಲೆ ತಕ್ಷಣವೇ ಮುಂದೂಡಬೇಕು. ಅದಕ್ಕೆ ಅನುಗುಣವಾಗಿ ಕಾಲೇಜಿನಲ್ಲೂ ಆಂತರಿಕ ಪರೀಕ್ಷೆ ಮುಂದೂಡಲು ನಿರ್ದೇಶನ ನೀಡಬೇಕು. ಸರ್ಕಾರವು ಅತಿಥಿ ಉಪನ್ಯಾಸಕರನ್ನು ನೇಮಿಸುವುದಾಗಿ ಸುತ್ತೋಲೆ ಹೊರಡಿಸಿದ್ದು ವಿದ್ಯಾರ್ಥಿ ಹೋರಾಟದ ಅಭೂತಪೂರ್ವ ಜಯವಾಗಿದೆ ಎಂದರು.

ಅನಂತರ ಸಂಘಟನೆಯ ವಿದ್ಯಾರ್ಥಿ ಮುಖಂಡರ ನಿಯೋಗವು ದಾವಣಗೆರೆ ವಿ.ವಿ.ಗೆ ತೆರಳಿ, ಪರೀಕ್ಷಾಂಗ ಕುಲಸಚಿವರಿಗೆ ಮನವಿ ಅರ್ಪಿಸಿತು. ಸಂಘಟನೆ ಜಿಲ್ಲಾ ಕಾರ್ಯದರ್ಶಿ ಟಿ.ಎಸ್. ಸುಮನ್‌, ಸಂಘಟನಾಕಾರ ಎಚ್.ಡಿ.ಗಂಗಾಧರ, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ಸಿದ್ದಿಕ್ ಆವರಗೆರೆ, ಎಂ.ಆರ್.ವಿಕಾಸ್, ಎನ್.ಗಂಗಾಧರ, ಪ್ರೇಮಾ, ವರಲಕ್ಷ್ಮೀ ಇತರರು ಇದ್ದರು.

- - -

(ಕೋಟ್‌) ಶಿಕ್ಷಣ ಪ್ರೇರಕರು, ಶಿಕ್ಷಣ ತಜ್ಞರಾದ ಈಶ್ವರಚಂದ್ರ ವಿದ್ಯಾಸಾಗರ್, ಜ್ಯೋತಿಬಾ ಫುಲೆ, ಸ್ವಾತಂತ್ರ್ಯ ಹೋರಾಟಗಾರರಾದ ಕ್ರಾಂತಿಕಾರಿ ಭಗತ್ ಸಿಂಗ್, ನೇತಾಜಿ ಸುಭಾಶ್ಚಂದ್ರ ಬೋಸ್‌ ಅವರ ಆದರ್ಶಗಳಿಂದ ಪ್ರೇರಿತರಾಗಿ ತಮ್ಮ ಶಿಕ್ಷಣದ ಹಕ್ಕನ್ನು ಕಾಪಾಡಿಕೊಳ್ಳಲು ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದರು. ಈ ಹೋರಾಟಕ್ಕೆ ಇಂದು ಜಯ ಸಿಕ್ಕಿದೆ. ಹೋರಾಟದಿಂದ ಮಾತ್ರವೇ ಬದಲಾವಣೆ ಸಾಧ್ಯವೆಂಬ ಸಂದೇಶ ವಿದ್ಯಾರ್ಥಿಗಳೂ ಈ ಮೂಲಕ ಎಲ್ಲೆಡೆ ಸಾರಿದ್ದಾರೆ.

- ಪೂಜಾ ನಂದಿಹಳ್ಳಿ, ಹೋರಾಟಗಾರ್ತಿ.

- - -

-30ಕೆಡಿವಿಜಿ2: ಪದವಿ ಪರೀಕ್ಷೆ ನಡೆಸದಂತೆ ಒತ್ತಾಯಿಸಿ ಎಐಡಿಎಸ್‌ಒ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಎಐಡಿಎಸ್‌ಒ ಜಿಲ್ಲಾಧ್ಯಕ್ಷೆ ಪೂಜಾ ನಂದಿಹಳ್ಳಿ ಮಾತನಾಡಿದರು. -30ಕೆಡಿವಿಜಿ3, 4: ದಾವಣಗೆರೆಯಲ್ಲಿ ಪಾಠಗಳನ್ನು ನಡೆಸದೇ ಪದವಿ ಪರೀಕ್ಷೆ ಆಯೋಜನೆ ವಿರೋಧಿಸಿ ಎಐಡಿಎಸ್‌ಒ ಜಿಲ್ಲಾ ಘಟಕ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ